Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

---Advertisement---

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ ಉಳಿದುಕೊಂಡಿದ್ದಾರೆ. ಇದೆಲ್ಲವನ್ನು ಕೇಳಿ ಮಾಜಿ ಪ್ರಧಾನಿ ದೇವೇಗೌಡರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಪ್ರಧಾನಿಗಳಾಗಿದ್ದವರು, ದೇಶ ಸೇವೆ ಮಾಡಿದವರು. ಹಾಸನ, ತುಮಕೂರಿಗೆ ಇವರ ಸೇವೆ ಅಪಾರವಾದದ್ದು. ದೇವೇಗೌಡರ ಜೀವನ ಸ್ಪೂರ್ತಿದಾಯಕವಾದದ್ದು. ಆದರೆ ಮಗ-ಮೊಮ್ಮಗ ಇಂಥ ಕೆಲಸ ಮಾಡಿದರೆ ಆ ಜೀವ ತಡೆದುಕೊಳ್ಳುವುದಾದರು ಹೇಗೆ. ಹೀಗಾಗಿ ನೊಂದಿರುವ ದೇವೇಗೌಡರನ್ನು ಮಠಾಧೀಶರು ಭೇಟಿ ಮಾಡಿ ಧೈರ್ಯ ಹೇಳಿದ್ದಾರೆ, ಸಮಾಧಾನದ ಮಾತುಗಳನ್ನಾಡಿದ್ದಾರೆ.

 

ಪದ್ಮನಾಭನಗರದ ನಿವಾಸಕ್ಕೆ ತೆರಳಿದ ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ದೇವೇಗೌಡರನ್ನು ಭೇಟಿಯಾಗಿದ್ದಾರೆ. ಈ ವೇಳೆ ದೇವೇಗೌಡರ ಹಣೆಗೆ ತಿಲಕವಿಟ್ಟು, ಹಾರೈಸಿದ್ದಾರೆ. ಘಟನೆಯ ಬಗ್ಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬಿ, ಅವರಿಗೆ ಸಮಾಧಾನ ಹೇಳಿದ್ದಾರೆ. ಈ ವಯಸ್ಸಲ್ಲಿ ಇಂಥ ಸುದ್ದಿ ಬಂತಲ್ಲ ಅಂತ ದೇವೇಗೌಡರು ಬೇಸರ ಮಾಡಿಕೊಂಡಿರುವುದಂತು ಸತ್ಯ. ಇನ್ನು ಕಲಬುರಗಿಯ ಪುಣ್ಯಕೋಟಿ ಆಶ್ರಮದ ವರಲಿಂಗ ಸ್ವಾಮೀಜಿಗಳು ಸಹ ಭೇಟಿಗೆ ಬಂದಿದ್ದಾರೆ. ಆದರೆ ದೇವೇಗೌಡರ ಭೇಟಿ ಸಾಧ್ಯವಾಗಿಲ್ಲ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಸುದ್ದಿಯಾಗುತ್ತಲೇ ವಿದೇಶಕ್ಕೆ ತೆರಳಿದ್ದಾರೆ. ಈಗಾಗಲೇ ಅವರಿಗೆ ಎಸ್ಐಟಿ ಅಧಿಕಾರಿಗಳು ಸಾಕಷ್ಟು ನೋಟೀಸ್ ಕೂಡ ನೀಡಿದ್ದಾರೆ. ಆದರೆ ಯಾವುದಕ್ಕೂ ರೆಸ್ಪಾನ್ಸ್ ಇಲ್ಲ. ಅವರ ರಿಟರ್ನ್ ಟಿಕೆಟ್ ಬುಕ್ ಆಗಿದ್ದನ್ನು ನೋಡಿದರೆ ಇಷ್ಟೊತ್ತಿಗಾಗಲೇ ಹಾಸನಕ್ಕೆ ವಾಪಾಸ್ ಆಗಬೇಕಿತ್ತು. ಅದನ್ನು ಕ್ಯಾನ್ಸಲ್ ಮಾಡಿಕೊಂಡು ವಿದೇಶದಲ್ಲಿಯೇ ಉಳಿದಿದ್ದಾರೆ. ಇತ್ತ ಹೆಚ್. ಡಿ. ರೇವಣ್ಣ ಅವರ ವಿಚಾರಣೆ ನಡೆಯುತ್ತಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment