Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಛಲವಾದಿ ಗುರುಪೀಠದ ಸ್ವಾಮೀಜಿಯಿಂದ ದೇವೇಗೌಡರ ಭೇಟಿ, ಸಾಂತ್ವನ

Facebook
Twitter
Telegram
WhatsApp

ಬೆಂಗಳೂರು: ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಜೈಲು ಪಾಲಾಗಿದ್ದಾರೆ. ಜಾಮೀನು ಸಿಗದೆ ನ್ಯಾಯಾಂಗ ಬಂಧನ ಮುಂದುವರೆಯುತ್ತಲೆ ಇದೆ. ಇನ್ನು ಮೊಮ್ಮಗ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ ನಿಂದಾಗಿ ವಿದೇಶದಲ್ಲಿಯೇ ಉಳಿದುಕೊಂಡಿದ್ದಾರೆ. ಇದೆಲ್ಲವನ್ನು ಕೇಳಿ ಮಾಜಿ ಪ್ರಧಾನಿ ದೇವೇಗೌಡರು ಮಾನಸಿಕವಾಗಿ ಕುಗ್ಗಿ ಹೋಗಿದ್ದಾರೆ. ಪ್ರಧಾನಿಗಳಾಗಿದ್ದವರು, ದೇಶ ಸೇವೆ ಮಾಡಿದವರು. ಹಾಸನ, ತುಮಕೂರಿಗೆ ಇವರ ಸೇವೆ ಅಪಾರವಾದದ್ದು. ದೇವೇಗೌಡರ ಜೀವನ ಸ್ಪೂರ್ತಿದಾಯಕವಾದದ್ದು. ಆದರೆ ಮಗ-ಮೊಮ್ಮಗ ಇಂಥ ಕೆಲಸ ಮಾಡಿದರೆ ಆ ಜೀವ ತಡೆದುಕೊಳ್ಳುವುದಾದರು ಹೇಗೆ. ಹೀಗಾಗಿ ನೊಂದಿರುವ ದೇವೇಗೌಡರನ್ನು ಮಠಾಧೀಶರು ಭೇಟಿ ಮಾಡಿ ಧೈರ್ಯ ಹೇಳಿದ್ದಾರೆ, ಸಮಾಧಾನದ ಮಾತುಗಳನ್ನಾಡಿದ್ದಾರೆ.

 

ಪದ್ಮನಾಭನಗರದ ನಿವಾಸಕ್ಕೆ ತೆರಳಿದ ಛಲವಾದಿ ಗುರುಪೀಠದ ಬಸವನಾಗಿದೇವ ಶ್ರೀ, ಬಂಜಾರ ಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ ಅವರು ದೇವೇಗೌಡರನ್ನು ಭೇಟಿಯಾಗಿದ್ದಾರೆ. ಈ ವೇಳೆ ದೇವೇಗೌಡರ ಹಣೆಗೆ ತಿಲಕವಿಟ್ಟು, ಹಾರೈಸಿದ್ದಾರೆ. ಘಟನೆಯ ಬಗ್ಗೆ ಅವರಲ್ಲಿ ಆತ್ಮಸ್ಥೈರ್ಯ ತುಂಬಿ, ಅವರಿಗೆ ಸಮಾಧಾನ ಹೇಳಿದ್ದಾರೆ. ಈ ವಯಸ್ಸಲ್ಲಿ ಇಂಥ ಸುದ್ದಿ ಬಂತಲ್ಲ ಅಂತ ದೇವೇಗೌಡರು ಬೇಸರ ಮಾಡಿಕೊಂಡಿರುವುದಂತು ಸತ್ಯ. ಇನ್ನು ಕಲಬುರಗಿಯ ಪುಣ್ಯಕೋಟಿ ಆಶ್ರಮದ ವರಲಿಂಗ ಸ್ವಾಮೀಜಿಗಳು ಸಹ ಭೇಟಿಗೆ ಬಂದಿದ್ದಾರೆ. ಆದರೆ ದೇವೇಗೌಡರ ಭೇಟಿ ಸಾಧ್ಯವಾಗಿಲ್ಲ.

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಸುದ್ದಿಯಾಗುತ್ತಲೇ ವಿದೇಶಕ್ಕೆ ತೆರಳಿದ್ದಾರೆ. ಈಗಾಗಲೇ ಅವರಿಗೆ ಎಸ್ಐಟಿ ಅಧಿಕಾರಿಗಳು ಸಾಕಷ್ಟು ನೋಟೀಸ್ ಕೂಡ ನೀಡಿದ್ದಾರೆ. ಆದರೆ ಯಾವುದಕ್ಕೂ ರೆಸ್ಪಾನ್ಸ್ ಇಲ್ಲ. ಅವರ ರಿಟರ್ನ್ ಟಿಕೆಟ್ ಬುಕ್ ಆಗಿದ್ದನ್ನು ನೋಡಿದರೆ ಇಷ್ಟೊತ್ತಿಗಾಗಲೇ ಹಾಸನಕ್ಕೆ ವಾಪಾಸ್ ಆಗಬೇಕಿತ್ತು. ಅದನ್ನು ಕ್ಯಾನ್ಸಲ್ ಮಾಡಿಕೊಂಡು ವಿದೇಶದಲ್ಲಿಯೇ ಉಳಿದಿದ್ದಾರೆ. ಇತ್ತ ಹೆಚ್. ಡಿ. ರೇವಣ್ಣ ಅವರ ವಿಚಾರಣೆ ನಡೆಯುತ್ತಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಿತ್ರದುರ್ಗ | ಸರ್ಕಾರಿ ನೌಕರರ ಸಂಘದ ಮತದಾರರ ಪಟ್ಟಿ ಆಕ್ಷೇಪಣೆ ಸಲ್ಲಿಕೆಗೆ ಜು.10 ಕೊನೆಯ ದಿನ..!

  ಸುದ್ದಿಒನ್, ಚಿತ್ರದುರ್ಗ, ಜುಲೈ. 08 : ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ಸರ್ವಾನುಮತದ ನಿರ್ಣಯದಂತೆ ಚಿತ್ರದುರ್ಗ ಜಿಲ್ಲೆಯ ರಾಜ್ಯ ಸರ್ಕಾರಿ ನೌಕರರ ಸಂಘದ 2024ರಿಂದ

ಮನೆಗೆ ಮಗನಂತಿದ್ದ.. ಮಕ್ಕಳಿಲ್ಲದ ಕೊರಗು ಅವನಿಗೆ ಕಾಡುತ್ತಿತ್ತು : ಮೃತ ಅಳಿಯನ ಬಗ್ಗೆ ಬಿಸಿ ಪಾಟೀಲ್ ಹೇಳಿದ್ದೇನು..?

ದಾವಣಗೆರೆ: ಇಂದು ಮಾಜಿ ಸಚಿವ ಬಿ.ಸಿ.ಪಾಟೀಲ್ 40 ವರ್ಷದ ಅಳಿಯ ಪ್ರತಾಪ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದಾರೆ. ಮೃತ ಅಳಿಯನ ಬಗ್ಗೆ ಮಾತನಾಡಿರುವ ಬಿ.ಸಿ.ಪಾಟೀಲ್, ಮನೆಗೆ ಮಗನಂತಿದ್ದ. ಮನೆಯ ಎಲ್ಲಾ ಜವಾಬ್ದಾರಿಗಳನ್ನು ನೋಡಿಕೊಳ್ಳುತ್ತಿದ್ದ ಎಂದಿದ್ದಾರೆ.

ಚಿತ್ರದುರ್ಗ | 8 ಲಕ್ಷ ಮೌಲ್ಯದ 80 ಮೊಬೈಲ್ ಫೋನ್ ಗಳನ್ನು ಪತ್ತೆಹಚ್ಚಿ ವಾರಸುದಾರರಿಗೆ ಹಸ್ತಾಂತರಿಸಿದ ಪೊಲೀಸರು…!

ಸುದ್ದಿಒನ್, ಚಿತ್ರದುರ್ಗ, ಜುಲೈ.08 : ಚಿತ್ರದುರ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಕಳುವಾಗಿದ್ದ 8 ಲಕ್ಷ ರೂಪಾಯಿ ಮೌಲ್ಯದ 80 ಮೊಬೈಲ್ ಫೋನ್​ಗಳನ್ನು ಇಂದು (ಜುಲೈ. 08) ಪ್ರಾಪರ್ಟಿ ರಿಟರ್ನ್‌ ಪರೇಡ್​ನಲ್ಲಿ ವಾರಸುದಾರರಿಗೆ ಹಸ್ತಾಂತರಿಸಲಾಯಿತು. ನಗರದ ಜಿಲ್ಲಾ

error: Content is protected !!