Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೋಡಕವಿದ ವಾತಾವರಣ : RCB ಪ್ಲೇ ಆಫ್ ಕನಸು ಏನಾಗಲಿದೆ..?

Facebook
Twitter
Telegram
WhatsApp

 

ಬೆಂಗಳೂರು: RCB ಅಭಿಮಾನಿಗಳಿಗೆ ಇತ್ತಿಚೆಗೆ ಕೊಂಚ ನೆಮ್ಮದಿ ಸಿಕ್ಕಿತ್ತು. ಆರಂಭದಲ್ಲಿ ಹೇಗೆ ಎಲ್ಲಾ ಮ್ಯಾಚ್ ಗಳನ್ನು ಸೋತಿತ್ತೋ, ಈಗ ಎಲ್ಲಾ ಮ್ಯಾಚ್ ಗಳನ್ನು ಗೆಲ್ಲುತ್ತಾ ಬರುತ್ತಿದೆ ಆರ್ಸಿಬಿ. ಹೀಗಾಗಿ ಸಂತಸದಿ ತೇಲಾಡಿದ ಅಭಿಮಾನಿಗಳು, ಪ್ಲೇ ಆಫ್ ಕನಸ್ಸನ್ನು ಕಂಡಿದ್ದರು. ಆದರೆ ಅದ್ಯಾಕೋ ಆ ಕನಸಿಗೆ ಮಳೆರಾಯ ಅಡ್ಡಿಯಾಗ್ತಾನೆ ಎನಿಸುತ್ತಿದೆ.

ಒಂದು ಮೂರು ಮ್ಯಾಚ್ ಗಳನ್ನು ಗೆದ್ದು ಅಂಕಗಳನ್ನು ಹೆಚ್ಚಿಸಿಕೊಳ್ಳಬೇಕಾದ ಸವಾಲು ಆರ್ಸಿಬಿ ಮೇಲಿದೆ. ಇಂದು ನಡೆಯುತ್ತಿರುವ ಮ್ಯಾಚ್ ಅನ್ನು ಕೂಡ ಗೆಲ್ಲಬೇಕಿದೆ. ಆದರೆ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಅದು ಸಾಧ್ಯವಾ ಎಂಬ ಅನುಮಾನ ಕಾಡುತ್ತಿದೆ. ಈಗಾಗಲೇ ವೈಟ್ ಫೀಲ್ಡ್ ಭಾಗದಲ್ಲಿ ಮಳೆಯೂ ಶುರುವಾಗಿದೆ. ಹಲವೆಡೆ ಮಳೆಯ ಸಿಂಚನ ಕಾಣಿಸುತ್ತಿದೆ. ನಿನ್ನೆಯೇ ಬೆಂಗಳೂರಿ‌ನಲ್ಲಿ ಜೋರು ಮಳೆಯಾಗಲಿದೆ ಎಂಬ ವರದಿ ಬಿಡುಗಡೆಯಾಗಿತ್ತು. ಆದರೆ ನಿನ್ನೆ ಮಳೆ ಬಂದಿಲ್ಲ. ಇಂದು ಮಳೆ ಬರುವ ಎಲ್ಲಾ ಸೂಚನೆಯೂ ಕಾಣಿಸುತ್ತಿದೆ. ಒಂದು ವೇಳೆ ಪಂದ್ಯದ ವೇಳೆ ಮಳೆ ಬಂದರೆ ಪಂದ್ಯ ರದ್ದಾಗುವ ಸಾಧ್ಯತೆ ಇದೆ.

 

ಆರ್ಸಿಬಿ ಅಭಿಮಾನಿಗಳಿಗೆ ಇಂದಿನ ವಾತಾವರಣ ನೋಡಿನೆ ಬೇಸರವಾಗಿದೆ. ಇಷ್ಟು ದಿನ ರಣರಣ ಬಿಸಿಲಿತ್ತು. ಆದರೆ ಆರ್ಸಿಬಿ ಮ್ಯಾಚ್ ದಿನವೇ ಮಳೆ ಬರಬೇಕಾ..? ವರುಣಾ ದೇವ ಸ್ವಲ್ಪ ಕರುಣೆ ತೋರಿಸಪ್ಪ ಅಂತಿದ್ದಾರೆ. ಆದರೆ ಹವಮಾನ ಇಲಾಖೆ ಈ ಮೊದಲೇ ಮುನ್ಸೂಚನೆ ನೀಡಿದೆ. ಇನ್ನು ಮೂರ್ನಾಲ್ಕು ದಿನಗಳ ಕಾಲ ರಾಜ್ಯದಲ್ಲಿ ಜೋರು ಮಳೆಯಾಗಲಿದೆ ಎಂಬ ಸೂಚನೆಯನ್ನು ನೀಡಿದೆ. ಅದಕ್ಕೆ ತಕ್ಕ ಹಾಗೇ ಮಧ್ಯಾಹ್ನದಿಂದಲೇ ಮೋಡ ಕವಿದ ವಾತಾವರಣವಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!