Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಆಂಬ್ಯುಲೆನ್ಸ್ ಬಂದಿದ್ದರೆ ನಟಿ ಪವಿತ್ರಾ ಬದುಕುತ್ತಿದ್ದರೇನೋ..?

---Advertisement---

 

 

ಕನ್ನಡ ಹಾಗೂ ತೆಲುಗಿನ ಖ್ಯಾತ ನಟಿ ಪವಿತ್ರಾ ಜಯರಾಂ ಭೀಕರ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಈ ವಿಚಾರ ತೆಲುಗು ಇಂಡಸ್ಟ್ರಿಗೆ ದೊಡ್ಡ ಆಘಾತವನ್ನೇ ತಂದೊಡ್ಡಿದೆ. ತ್ತಿಯನಿ ಧಾರಾವಾಹಿಯಲ್ಲಿ ತಿಲೋತ್ತಮನಾಗಿ ಎಲ್ಲರ ಗಮನ ಸೆಳೆದಿದ್ದರು. ಆದರೆ ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ. ಅಪಘಾತವಾದಗ ಅವರ ಜೊತೆಗೆ ಇದ್ದ ಸಹ ನಟ ಚಂದುಗೌಡ ಸಾವಿನ ಬಗ್ಗೆ ಮಾಹಿತಿ ನೀಡಿದ್ದಾರೆ. ನಟಿಯನ್ನು ನೆನೆದು ಕಣ್ಣೀರು ಹಾಕಿದ್ದಾರೆ.

ಈ ಬಗ್ಗೆ ಮಾತನಾಡಿರುವ ತೆಲುಗು ನಟ ಚಂದುಗೌಡ, ನಾವೂ ಬೆಂಗಳೂರಿನಿಂದ ಹೈದ್ರಬಾದ್ ಗೆ ಪ್ರಯಾಣ ಮಾಡುತ್ತಿದ್ದೆವು. ಮಧ್ಯಾಹ್ನ 2.30ರ ಸಮಯ ಅದು. ಭಾರೀ ಮಳೆ ಸುರಿಯುತ್ತಿದ್ದ ಕಾರಣ ಟ್ರಾಫಿಕ್ ಜಾಮ್ ಆಗಿತ್ತು. ಇದರಿಂದ ನಾವೂ ಕೂಡ ತುಂಬಾ ಸುಸ್ತಾಗಿದ್ದೆವು. ನಮಗು ನಿದ್ರೆ ಬರುತ್ತಿತ್ತು. ಕಾರಿನಲ್ಲಿ ಡ್ರೈವರ್, ಪವಿತ್ರಾ ಸಹೋದರಿಯ ಮಗಳು, ಪವಿತ್ರಾ ಹಾಗೂ ನಾನು ಪ್ರಯಾಣ ಮಾಡುತ್ತಿದ್ದೆವು. ನಾನು ಹಾಗೂ ಪವಿತ್ರಾ ಹಿಂದಿನ ಸೀಟಿನಲ್ಲಿ ಕುಳಿತಿದ್ದೆವು.

ನಮ್ಮ ಕಾರು 60 ಫೀಟ್ ರಸ್ತೆಯಲ್ಲಿ ಹೋಗುವಾಗ ಎದುರುಗಡೆ ಆರ್ಟಿಸಿ ಬಸ್ ಬಂದಿದೆ. ಈ ವೇಳೆ ಎದುರು ಬಂದ ಸ್ಕಾರ್ಪಿಯೋಗೆ ಕಾರು ಡಿಕ್ಕಿಯಾಗಿತ್ತು. ತಕ್ಷಣ ಬ್ರೇಕ್ ಹಾಕಲಾಯ್ತು. ಆದರೆ ಕಾರು ಬಲಗಡೆಗೆ ವಾಲಿತ್ತು. ಇದರಿಂದ ಎದುರು ಬಂದ ಬಸ್ ನಮ್ಮ ಕಾರು ಡಿಕ್ಕಿ ಹೊಡೆಯಿತು. ಕಾರಿನಲ್ಲಿ ಇದ್ದವರಿಗೆ ಯಾರಿಗೆ ಏನು ಆಗಿಲ್ಲ. ನನಗೆ ಸ್ವಲ್ಪ ತಲೆ ಹಾಗೂ ಕೈಗರ ಗಾಯವಾಗಿದೆ. ಆದರೆ ಪವಿತ್ರಾ ಅಪಘಾತದ ರಭಸಕ್ಕೆ ಹೆದರಿದ್ದಳು. ಉಸಿರು ಕಟ್ಟಿದ ರೀತಿಯಲ್ಲಿ ಮಾತನಾಡಲು ಪ್ರಯತ್ನಿಸಿದಳು. ಏನಾಯ್ತು.‌? ಏನಾಯ್ತು ..? ಎಂದು ಮಾತನಾಡುತ್ತಲೇ ಪ್ರಜ್ಞೆ ಕಳೆದುಕೊಂಡಳು. ಆಂಬ್ಯುಲೆನ್ಸ್ ಗೆ ಕರೆ ಮಾಡಿದ್ದೆವು. ಆದರೆ ಅದು ಬರಲು ಇಪ್ಪತ್ತು ನಿಮಿಷ ತಡವಾಗಿತ್ತು. ಆಂಬ್ಯುಲೆನ್ಸ್ ಬೇಗ ಬಂದಿದ್ದರೆ ಪವಿ ಉಳಿಯುತ್ತಿದ್ದಳೇನೋ ಎಂದು ಚಂದುಗೌಡ ಕಣ್ಣೀರು ಹಾಕಿದ್ದಾರೆ.

ಪವಿತ್ರಾ ಜಯರಾಂ ಅವರ ಅಂತ್ಯ ಕ್ರಿಯೆ ಇಂದು ಅವರ ಊರಾದ ಮಂಡ್ಯದ ಉಮ್ಮಡಹಳ್ಳಿಯಲ್ಲಿ ನಡೆಯಲಿದೆ. ಅಂತ್ಯ ಕ್ರಿಯೆಗೂ ಮುನ್ನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ವೈದ್ಯರ ದಿನದ ವಿಶೇಷ : ಮಳೆಗಾಲದಲ್ಲಿ ಆರೋಗ್ಯದ ಮೇಲೆ ನಿಗಾ ಇರಲಿ: ಸೋಂಕುಗಳಿಂದ ಬಚಾವಾಗಲು ಈ ಆಹಾರ ಕ್ರಮ ಪಾಲಿಸಿ

ವೈದ್ಯೋ ನಾರಾಯಣ ಹರಿ: ದೇವರ ರೂಪದ ವೈದ್ಯರಿಗೆ ನಮನ; ಜುಲೈ 1 ರಂದು ‘ರಾಷ್ಟ್ರೀಯ ವೈದ್ಯರ ದಿನ’ದ ಹಿನ್ನೆಲೆ ಮತ್ತು ಮಹತ್ವ!

National Doctors’ Day : ಜೀವ ಉಳಿಸುವ ವೈದ್ಯರಿಗೆ ಕೃತಜ್ಞತೆ ಸಲ್ಲಿಸುವ ದಿನ; ಇತಿಹಾಸ, ಮಹತ್ವ ಮತ್ತು ಡಾ. ಬಿ.ಸಿ. ರಾಯ್ ಅವರ ಸಾಧನೆ ಇಲ್ಲಿದೆ

ಭಾರತದಲ್ಲಿ `ರಾಷ್ಟ್ರೀಯ ಚಾರ್ಟರ್ಡ್ ಅಕೌಂಟೆಂಟ್ಸ್ ದಿನ’ : ಜುಲೈ 1 ರಂದೇ ಏಕೆ ಆಚರಿಸಲಾಗುತ್ತದೆ? ಇಲ್ಲಿದೆ ಇದರ ಇತಿಹಾಸ, ಮಹತ್ವ ಮತ್ತು ಥೀಮ್

ದಂತ ವೈದ್ಯನ ‘ಗ್ರಾಮ ದರ್ಶನ’ ಯಾನ: ಹಳ್ಳಿಗಳ ಇತಿಹಾಸ ಅರಸಿ ಹೊರಟ ಅಪರೂಪದ ಸಂಶೋಧಕ!

ಚಾಣಕ್ಯ ನೀತಿ: ಅತಿಯಾದ ಮುಗ್ಧತೆ ಬಿಟ್ಟು ಚಾಣಾಕ್ಷರಾಗಿ! ಸ್ವಾರ್ಥಿ ಜಗತ್ತಿನಲ್ಲಿ ಗೆಲ್ಲಲು ಚಾಣಕ್ಯರ ಈ ಸೂತ್ರಗಳನ್ನು ಪಾಲಿಸಿ

Leave a Comment