Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕೇರಳದಲ್ಲಿ ಪತ್ತೆಯಾಯ್ತು ನೋರೋ ವೈರಸ್ : ಜನರಲ್ಲಿ ವಾಂತಿ, ಜ್ವರ, ತಲೆನೋವು ಶುರು..!

Facebook
Twitter
Telegram
WhatsApp

ಕೇರಳ: ಎರಡು ವರ್ಷಗಳಿಂದ ಕೊರೊನಾ ವೈರಸ್ ಕೊಟ್ಟ ಕಾಟ ಅಷ್ಟಿಷ್ಟಲ್ಲ. ಈಗಲೂ ಅದರ ಪರಿಣಾಮ ಹಾಗೆಯೇ ಇದೆ. ಸ್ವಲ್ಪಮಟ್ಟಿಗೆ ತಗ್ಗಿದೆ ಅಷ್ಟೇ. ಆದ್ರೆ ಅದರ ನಡುವೆ ದೇವರ ನಾಡಲ್ಲಿ ಹೊಸ ವೈರಸ್ ವೊಂದು ಜೀವ ತಾಳಿದ್ದು, ಆತಂಕಕ್ಕೆ ಕಾರಣವಾಗಿದೆ.

ಕೇರಳದ ವಯನಾಡಿನಲ್ಲಿ ಈಗಾಗಲೇ ನೋರೋ ಎಂಬ ಹೊಸ ವೈರಸ್ ಜನರಲ್ಲಿ ಕಾಣಿಸಿಕೊಂಡಿದೆ. ಈ ವೈರಸ್ ಈಗಾಗಲೇ 13 ಮಂದಿಯಲ್ಲಿ ಕಟಣಿಸಿಕೊಂಡಿದೆ. ವೈರಸ್ ಕಾಣಿಸಿಕೊಂಡವರಿಗೆ ವಾಂತಿ, ಅತಿಸಾರ, ತಲೆನೋವು, ಜ್ವರ, ಹೊಟ್ಟೆ ನೋವಿನಂಥ ಲಕ್ಷಣಗಳು ಬಾಧಿಸುತ್ತಿವೆ.

ಹೀಗಾಗಿ ಈ ವೈರಸ್ ಬಗ್ಗೆ ಎಚ್ಚರ ವಹಿಸುವಂತೆ ಅಲ್ಲಿನ ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಾಹಿತಿ ನೀಡಿದ್ದು, ಹೊಸ ವೈರಸ್ ತಡೆಯಲು ಈಗಾಗಲೇ ಹೊಸ ಮಾರ್ಗಸೂಚಿಗಳನ್ನು ನೀಡಲಾಗಿದೆ. ಕುಡಿಯುವ ನೀರನ್ನು ಸ್ವಚ್ಛವಾಗಿರುವಂತೆ ನೋಡಿಕೊಳ್ಳಿ. ಸರಿಯಾದ ತಡೆಗಟ್ಟುವಿಕೆ ಹಾಗೂ ಚಿಕಿತ್ಸೆಯಿಂದ ಈ ಕಾಯಿಲೆಯನ್ನ ಗುಣಮುಖ ಮಾಡಬಹುದು. ಯಾರಿಗಾದರೂ ರೋಗ ಲಕ್ಷಣಗಳು ಕಂಡು ಬಂದರೆ ತಕಗಷಣ ಆಸ್ಪತ್ರೆಗೆ ತೋರಿಸಿಕೊಳ್ಳಿ ಎಂದಿದ್ದಾರೆ.

ಇನ್ನು ಜಿಲ್ಲೆಗಳಲ್ಲಿ ಪರಿಸ್ಥಿತಿ ಪರಿಶೀಲಿಸಲು ಸೂಚನೆ ನೀಡಿದ್ದಾರೆ. ಇದು ಪ್ರಾಣಿಗಳಿಂದ ಹರಡುವ ರೋಗವಾಗಿರುವ ಕಾರಣ ಗ್ರಾಮೀಣ ಪ್ರದೇಶ, ಹಾಗೂ ಪ್ರಾಣಿ ಸಾಕಿರುವವರಿಗೆ ಎಚ್ಚರದಿಂದ ಇರಲು ಸೂಚನೆ ನೀಡಲಾಗಿದೆ. ಹೆಚ್ಚು ಸ್ವಚ್ಛತೆ ಕಾಪಾಡಲೂ ಸಲಹೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ

ಈ ರಾಶಿಯವರು ತುಂಬಾ ಪ್ರೀತಿಸುವರು ಆದರೆ ಬೇರೆಯವರ ಜೊತೆ ಮದುವೆ ಒಳ್ಳೆಯದಲ್ಲ, ಗುರುವಾರ ರಾಶಿ ಭವಿಷ್ಯ -ಮೇ-2,2024 ಸೂರ್ಯೋದಯ: 05:53, ಸೂರ್ಯಾಸ್ತ : 06:32 ಶಾಲಿವಾಹನ ಶಕೆ1945, ಶ್ರೀ ಕ್ರೋಧಿ ನಾಮ ಸಂವತ್ಸರ ,

ಇಂದಿನಿಂದ ರಾಜ್ಯಾದ್ಯಂತ ಮಳೆ : ಬೆಂಗಳೂರಿಗೆ ಮಳೆ ದರ್ಶನ ಯಾವಾಗಿಂದ..?

ಬೆಂಗಳೂರು: ಬಿಸಿಲಿನ ತಾಪ ಅದ್ಯಾಕೆ ದಿನೇ ದಿನೇ ಏರಿಕೆಯಾಗುತ್ತಿದೆಯೋ ತಿಳಿದಿಲ್ಲ. ಜನರಂತು ಬಿಸಿಲಿನ ಬೇಗೆಗೆ ಹೈರಾಣಾಗಿ ಹೋಗಿದ್ದಾರೆ. ಕಳೆದ ವರ್ಷವಂತು ಮಳೆಯಿಲ್ಲ ಈ ವರ್ಷ ಮೊದಲ ಮಳೆಯೂ ಸರಿಯಾಗಿ ಆಗಿಲ್ಲ. ಮೇ ತಿಂಗಳಿಗೆ ಬಂದರೂ

ಆದಷ್ಟು ಬೇಗ ಸತ್ಯ ಹೊರಬರಲಿದೆ ಎಂದು ಪೋಸ್ಟ್ ಹಾಕಿ ಕಮೆಂಟ್ ಆಫ್ ಮಾಡಿದ ಪ್ರಜ್ವಲ್ ರೇವಣ್ಣ..!

ಬೆಂಗಳೂರು: ಅಶ್ಲೀಲ ವಿಡಿಯೋಗಳಿರುವ ಪೆನ್ ಡ್ರೈವ್ ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಪ್ರಜ್ವಲ್ ರೇವಣ್ಣ ಸೀದಾ ಜರ್ಮನಿ ಪ್ರವಾಸಕ್ಕೆ ಹೊರಟಿದ್ದರು. ವಿಚಾರ ದೊಡ್ಡದಾದ ಕೂಡಲೇ ಎಚ್ಚೆತ್ತ ರಾಜ್ಯ ಸರ್ಕಾರ, ಪ್ರಕರಣವನ್ನು ಎಸ್ಐಟಿ ತನಿಖೆಗೆ ವಹಿಸಿತ್ತು. ಎಸ್ಐಟಿ

error: Content is protected !!