Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇವಣ್ಣಗೆ ಸಿಕ್ತು ಷರತ್ತು ಬದ್ಧ ಜಾಮೀನು..!

Facebook
Twitter
Telegram
WhatsApp

 

 

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋಗೆ ಸಂಬಂಧಿಸಿದಂತೆ ಮಹಿಳೆಯಿಬ್ಬರನ್ನು ಕಿಡ್ನ್ಯಾಪ್ ಮಾಡಿದ್ದ ಪ್ರಕರಣದಲ್ಲಿ ರೇವಣ್ಣ ಅರೆಸ್ಟ್ ಆಗಿದ್ದು, ಇಂದು ಅವರ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು ಕೋರ್ಟ್ ನಲ್ಲಿ ರೇವಣ್ಣ ಪರ ವಕೀಲ ಹಾಗೂ ಸರ್ಕಾರಿ ಪರ ವಕೀಲರ ನಡುವೆ ವಾದ – ಪ್ರತಿವಾದ ನಡೆದಿದೆ. ರೇವಣ್ಣ ಪರವಾಗಿ ವಕೀಲ ನಾಗೇಶ್ ವಾದ ಮಂಡಿಸಿದ್ದಾರೆ. ಎಸ್ಐಟಿ ಪರವಾಗಿ ಎಸ್ ಪಿ ಪಿ ಜಯ್ನ್ ಕೊಠಾರಿ ವಾದ ಮಂಡಿಸಿದ್ದಾರೆ. ಈ ಮೂಲಕ ರೇವಣ್ಣ ಅವರಿಗೆ ಷರತ್ತು ಬದ್ಧ ಜಾಮೀನು ಸಿಕ್ಕಿದೆ.

 

 

ವಾದ ಪ್ರತಿವಾದದ ನಡುವೆ ಮೊದಲು ತನಿಖಾ ವರದಿಯನ್ನು ನೀಡುವಂತೆ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಕೇಳಿದ್ದಾರೆ. ಆದರೆ ಈ ವೇಳೆ ರೇವಣ್ಣ ಅವರ ವಕೀಲರು ಆ ವರದಿಯನ್ನು ನಮಗೂ ಕೊಟ್ಟಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದ್ದಾರೆ. ಬಳಿಕ ಸರ್ಕಾರಿ ಪರ ವಕೀಲರು ಅವರಿಗೂ ಒಂದು ಕಾಪಿ ನೀಡಿದ್ದರು. ಇನ್ನು ಇದೇ ವೇಳೆ ಸರ್ಕಾರಿ ವಕೀಲರಾದ ಜಯ್ನಾ ಕೊಠಾರಿ, ಹಲವು ಪ್ರಕರಣಗಳನ್ನು ಉಲ್ಲೇಖ ಮಾಡಿದ್ದಾರೆ. ದೆಹಲಿ ಕೋರ್ಟ್ ನ ಗುರು ಚರಣ್ ಸಿಂಗ್ ಪ್ರಕರಣ ಉಲ್ಲೇಖಿಸಿದ್ದಾರೆ.

 

ವಾದ ಮುಂದುವರೆಸಿ, ರೇವಣ್ಣ ಅವರು ಪ್ರಭಾವಿ ರಾಜಕಾರಣಿ. ಮಗ ಸಂಸದ. ತಲೆ‌ಮರೆಸಿಕೊಂಡಿದ್ದಾರೆ. ಇದು ಕೇವಲ ಅಪಹರಣ ಪ್ರಕರಣದಲ್ಲಿ. ಅತ್ಯಾಚಾರಕ್ಕಿಳಗಾದ ಸಂತ್ರಸ್ತೆಯರ ಕಿಡ್ನ್ಯಾಪ್ ಆಗಿದೆ. ಪ್ರಕರಣದಲ್ಲಿ ಯಾವುದೇ ಸಂತ್ರಸ್ತೆಯರು ದೂರು ನೀಡದಂತೆ ತಡೆಯುವ ಪ್ರಯತ್ನವಾಗಿದೆ. ಹೀಗಾಗಿ ರೇವಣ್ಣ ಅವರಿಗೆ ಯಾವುದೇ ಕಾರಣಕ್ಕೂ ಜಾಮೀನು ನೀಡಬಾರದೆಂದು ಮನವಿ ಮಾಡಿದ್ದರು. ಆದರೆ ಕೋರ್ಟ್ ಷರತ್ತು ಬದ್ಧ ಜಾಮೀನು ನೀಡಿ, ರೇವಣ್ಣ ಅವರಿಗೆ ಸಮಾಧಾನ ತಂದಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!