Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಇಂದು ಜಾಮೀನು ಸಿಕ್ಕರೂ ರೇವಣ್ಣ ನಾಳೆ ಜೈಲಿಂದ ರಿಲೀಸ್..!

---Advertisement---

 

 

ಬೆಂಗಳೂರು: ಮಹಿಳೆಯ ಕಿಡ್ನ್ಯಾಪ್ ಕೇಸಿನಲ್ಲಿ ಮಾಜಿ ಸಚಿವ ಹೆಚ್ ಡಿ ರೇವಣ್ಣ ಅವರು ಪರಪ್ಪನ ಅಗ್ರಹಾರ ಸೇರಿದ್ದರು. ಇಂದು ಕಡೆಗೂ ಷರತ್ತು ಬದ್ಧ ಜಾಮೀನು ಸಿಕ್ಕಿದೆ. ಆದರೆ ಜಾಮೀನು ಸಿಕ್ಕಿದರು ಮನೆಗೆ ಹೋಗುವ ಭಾಗ್ಯಾ ಮಾತ್ರ ಸಿಕ್ಕಿಲ್ಲ. ಯಾಕಂದ್ರೆ ಜಾಮೀನಿನ ಪ್ರಕ್ರಿಯೆ ಪೂರ್ಣಗೊಳ್ಳದ ಕಾರಣ, ಜಾಮೀನು ಸಿಕ್ಕರೂ ಜೈಲಿನಲ್ಲಿಯೇ ಇರಬೇಕಾದ ಪರಿಸ್ಥಿತಿ ಎದುರಾಗಿದೆ.

 

ರೇವಣ್ಣ ಅವರಿಗೆ ಷರತ್ತು ಬದ್ದ ಜಾಮೀನು ಸಿಕ್ಕಿದೆ. ಷರತ್ತು ಬದ್ಧ ಜಾಮೀನಿನಲ್ಲಿ ಪರ್ಸನಲ್ ಬಾಂಡ್ ಶ್ಯೂರಿಟಿ, ಸಾಕ್ಷಿಗಳ ಮೇಲೆ‌ ಪ್ರಭಾವ ಬೀರಬಾರದು, ದೇಶ ಬಿಟ್ಟು ಹೋಗಬಾರದು ಎಂಬ ಷರತ್ತನ್ನು ವಿಧಿಸಿ ಜಾಮೀನು ನೀಡಲಾಗಿದೆ. ಜಾಮೀನು ಸಿಕ್ಕಿದೆ‌ ಎಂದು ರೇವಣ್ಣ ಅವರಿಗೆ ತಿಳಿಸಿದ ಕೂಡಲೇ ಸಮಾಧಾನಗೊಂಡಿದ್ದಾರೆ. ದೇವರಿಗೆ ಪ್ರಾರ್ಥಸಿ, ನಿಟ್ಟುಸಿರು ಬಿಟ್ಟಿದ್ದಾರೆ.

ಮಾಜಿ ಸಚಿವ ಹೆಚ್‌.ಡಿ ರೇವಣ್ಣ ಅವರ ಬೇಲ್ ಆರ್ಡರ್ ಕಾಪಿಯನ್ನು ವಕೀಲರು ಪಡೆದುಕೊಂಡಿದ್ದಾರೆ. ಇಂದು ಜಾಮೀನು ಮಂಜೂರು ಆದರೂ ಕೂಡ ರೇವಣ್ಣ ಅವರು ಪರಪ್ಪನಾಗ್ರಹರದಿಂದ ಬಿಡುಗಡೆ ಭಾಗ್ಯವಿಲ್ಲ. ನಾಳೆ 42ನೇ ಜನಪ್ರತಿನಿಧಿ‌ ನ್ಯಾಯಾಲಯದಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಇಂದು ಜಾಮೀನು ಅರ್ಜಿಯ ಎಲ್ಲಾ ಪ್ರಕ್ರಿಯೆಗಳನ್ನು‌ ಮುಗಿಸಿ ಬಳಿಕ ನಾಳೆ ಬೆಳಗ್ಗೆ ಜಾಮೀನು ಪ್ರತಿ ಜೈಲಿಗೆ ತಲುಪಿಸಬೇಕಾಗುತ್ತದೆ. ಇದಾದ ಬಳಿಕ ಹೆಚ್​.ಡಿ ರೇವಣ್ಣ ಅವರಿಗೆ ಬಿಡುಗಡೆ ಸಾಧ್ಯತೆ ಇದೆ.

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ವಿದೇಶದಲ್ಲಿಯೇ ಇದ್ದಾರೆ. ನೋಟೀಸ್ ಕೊಟ್ಟರು, ದೂರುಗಳು ದಾಖಲಾದರೂ ಹಾಸನದ ಕಡೆಗೆ ಬಂದಿಲ್ಲ. ಯಾವಾಗ ಬರ್ತಾರೆ ಎಂಬ ಸುಳಿವು ಸಿಗುತ್ತಿಲ್ಲ ರಿಟರ್ನ್ ಟಿಕೆಟ್ ಬುಕ್ ಮಾಡಿಕೊಂಡಿದ್ದರು ಕ್ಯಾನ್ಸಲ್ ಮಾಡಿಕೊಂಡಿದ್ದಾರೆ. ಇದೀಗ ಮಹಿಳೆಯ ಕಿಡ್ನ್ಯಾಪ್ ಕೇಸಲ್ಲಿ ಜೈಲಲ್ಲಿದ್ದ ರೇವಣ್ಣ ಅವರಿಗೇನೋ ಬೇಲ್ ಸಿಕ್ಕಿದೆ. ಕೊಂಚ ನಿರಾಳರಾಗಿದ್ದಾರೆ. ಪ್ರಜ್ವಲ್ ರೇವಣ್ಣ ಕೂಡ ಜಾಮೀನಿಗೆ ಅರ್ಜಿ ಹಾಕಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...