Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಟೀಂ ಇಂಡಿಯಾದ ಕೋಚ್ ಗೆ ಅರ್ಜಿ ಆಹ್ವಾನಿಸಿದ ಬಿಸಿಸಿಐ : ಏನೆಲ್ಲಾ ಕ್ವಾಲಿಟಿ ಬೇಕು ಗೊತ್ತಾ..?

Facebook
Twitter
Telegram
WhatsApp

 

ಐಪಿಎಲ್ ಮುಗಿದ ಬಳಿಕ ಟಿ-20 ವಿಶ್ವಕಪ್ ಶುರುವಾಗಲಿದೆ. ಟೀಂ ಇಂಡಿಯಾ ಕೋಚ್ ಆಗಿ ರಾಹುಲ್ ದ್ರಾವಿಡ್ ಮುಂದುವರೆಯುವುದು ಅನುಮಾನ. ಜೂನ್ ನಲ್ಲಿ ರಾಹುಲ್ ದ್ರಾವಿಡ್ ಅವರ ಅಧಿಕಾರಾವಧಿ ಮುಗಿಯಲಿದೆ.‌ ಬಿಸಿಸಿಐ ಹೊಸ ಕೋಚ್ ಗೆ ಅರ್ಜಿ ಆಹ್ವಾನಿಸಿದೆ. ರಾಹುಲ್ ದ್ರಾವಿಡ್ ಅವರು ಕೂಡ ಅರ್ಜಿ ಸಲ್ಲಿಕೆ ಮಾಡಬಹುದು ಎಂದು ಜೈ ಶಾ ಹೇಳಿದ್ದರು.

ಮುಖ್ಯ ಕೋಚ್ ಗೆ ಬಿಸಿಸಿಐ ಸೋಮವಾರ ಅರ್ಜಿ ಆಹ್ವಾನಿಸಿದೆ. ಮೇ 27ರ ಸೋಮವಾರ ಸಂಜೆ 6 ಗಂಟೆಯ ಒಳಗೆ ಆಕಾಂಕ್ಷಿತರು ಅರ್ಜಿ ಸಲ್ಲಿಕೆ ಮಾಡಬಹುದು. ಕೋಚ್ ಗಳ ಆಯ್ಕೆ ಪ್ರಕ್ರಿಯೆ ಯು ಅರ್ಜಿಗಳ ಪರಿಶೀಲನೆಯ ಮೂಲಕ ನಡೆಯುತ್ತದೆ. ನಂತರ ವೈಯಕ್ತಿಕ ಸಂದರ್ಶನ ಮತ್ತು ಶಾರ್ಟ್ ಲೀಸ್ಟ್ ಮೂಲಕ ಅಭ್ಯರ್ಥಿಗಳ ಮೌಲ್ಯಮಾಪನ ಮಾಡಲಾಗುತ್ತದೆ. ಟೀಂ ಇಂಡಿಯಾದ ಮುಖ್ಯ ಕೋಚ್ ನ ಅಧಿಕಾರಾವಧಿ ಜುಲೈ 1, 2024 ರಿಂದ ಪ್ರಾರಂಭವಾಗಿ ಡಿಸೆಂಬರ್ 31, 2027ರ ವರೆಗೆ ಮುಂದುವರೆಯಲಿದೆ.

ಮುಖ್ಯ ಕೋಚ್ ಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಹಾಕುವವರಿಗೆ ಕೆಲವೊಂದಿಷ್ಟು ಅರ್ಹತೆಗಳು ಇರಬೇಕಾಗಿರುತ್ತದೆ. ಆ ಅರ್ಹತೆಗಳ ಲೀಸ್ಟ್ ಇಲ್ಲಿದೆ.

* ಕನಿಷ್ಠ 30 ಟೆಸ್ಟ್ ಅಥವಾ 50 ODI ಪಂದ್ಯಗಳನ್ನು ಆಡಿದ ಅನುಭವ ಇರಬೇಕು.

* ಟೆಸ್ಟ್ ಪಂದ್ಯವನ್ನಾಡುವ ಯಾವುದಾದರೂ ಒಂದು ರಾಷ್ಟ್ರೀಯ ತಂಡದ ಮುಖ್ಯ ಕೋಚ್ ಆಗಿ ಕನಿಷ್ಠ ಎರಡು ವರ್ಷ ಕೆಲಸ ಮಾಡಿರಬೇಕು.

*ಕನಿಷ್ಠ ಮೂರು ವರ್ಷಗಳ ಕಾಲ ಐಪಿಎಲ್ ಅಥವಾ ಅದಕ್ಕೆ ಸಮಾನವಾದ ಇಂಟರ್ನ್ಯಾಷನಲ್ ಲೀಗ್ ಅಥವಾ ಪ್ರಥಮ ದರ್ಜೆ ತಂಡ ಅಥವಾ ರಾಷ್ಟ್ರೀಯ ಎ ತಂಡದ ಸಹಾಯಕ ಸದಸ್ಯ ಅಥವಾ ಮುಖ್ಯ ಕೋಚ್ ಆಗಿ ಕೆಲಸ ಮಾಡಿರಬೇಕು.

* ವಯಸ್ಸು 60 ವರ್ಷಕ್ಕಿಂತ ಕಡಿಮೆ ಇರಬೇಕು

ಈ ಅರ್ಹತೆಗಳು ಇರುವವರು ಬಿಸಿಸಿಐಗೆ ಅರ್ಜಿ ಸಲ್ಲಿಸಬಹುದು. ಕೆಲವೊಂದು ಸುತ್ತುಗಳ ಮೂಲಕ ಮುಖ್ಯ ಕೋಚ್ ಆಗಿ ಆಯ್ಕೆ ಮಾಡಲಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!