Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿನ್ನೆ ಸುರಿದ ಬಾರೀ ಮಳೆಗೆ ಹುಬ್ಬಳ್ಳಿಯಲ್ಲಿ ಅವಾಂತರ ಸೃಷ್ಟಿ..!

---Advertisement---

ಹುಬ್ಬಳ್ಳಿ: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಜನತೆಗೆ ಈಗ ವರುಣಾರಾಯ ಸಾಕಷ್ಟು ನೆಮ್ಮದಿ ನೀಡಿದ್ದಾನೆ. ರಾಜ್ಯದೆಲ್ಲೆಡೆ ಮಳೆಯಾಗುತ್ತಿದ್ದು, ಜನರು ನೆಮ್ಮದಿಯಾಗಿದ್ದಾರೆ, ರೈತರು ಖುಷಿಯಾಗಿದ್ದಾರೆ. ಮೋಡದತ್ತ ಕಾಯುತ್ತಾ ಕುಳಿತಿದ್ದ ರೈತರು, ಈಗ ನೇಗಿಲು ಹಿಡಿದು ಜಮೀನಿನತ್ತ ಹೊರಟಿದ್ದಾರೆ. ಆದರೆ ಮಳೆ ತಂಪೆರೆಯುವುದರ ಜೊತೆಗೆ ಕೆಲವೊಂದು ಅನಾಹುತಗಳನ್ನು ಸೃಷ್ಟಿ ಮಾಡಿದೆ.

 

ಹುಬ್ಬಳ್ಳಿಯಲ್ಲಿ ಮಂಗಳವಾರ ಸುಮಾರು ಒಂದು ಗಂಟೆಗಳ ಕಾಲ ಮಳೆ ಸುರಿದಿದೆ. ಗುಡುಗು, ಸಿಡಿಲಿನ ಜೊತೆಗೆ ಗಾಳಿ ಸಹಿತ ಮಳೆಯಾಗಿದೆ. ಬಾರೀ ಮಳೆಗೆ ಜಾಸ್ತಿ ಹಾನಿಯಾಗಿದೆ. ಹುಭಳ್ಳಿಯ ದುರ್ಗದಬೈಲ್, ಕೋಯಿನ್ ರಸ್ತೆ, ವಿದ್ಯಾನಗರ, ಕಮರೀಪೇಟೆ, ಓಣಿ, ಹಳೇ ಹುಬ್ಬಳ್ಳಿ, ಮೂರು ಸಾವಿರ ಮಠ ಸೇರಿದಂತೆ ಹಲವು ಕಡೆ ಮಳೆ ನೀರು ಮನೆಗೆ ನುಗ್ಗಿದೆ. ಮಳೆಯಿಂದಾಗಿ ಬೀದಿಬದಿ ವ್ಯಾಪಾರಸ್ಥರಿಗೆ ತೊಂದರೆಯಾಗಿದೆ. ವಾಣಿಜ್ಯ ಮಳಿಗೆಗಳಿಗೂ ನೀರು ತುಂಬಿದೆ.

ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಯೋಜನೆಯೂ ನಡೆಯುತ್ತಿದೆ. ಮಳೆಯ ಕಾರಣ ಅಭಿವೃದ್ಧಿ ಕೆಲಸಗಳು ಸಾಗುತ್ತಿಲ್ಲ. ವುದ್ಯಾನಗರ ಕಡೆಯೆಲ್ಲಾ ಮರಗಳು ರಸ್ತೆಗೆ ಉರುಳಿ ಬಿದ್ದಿವೆ. ಇನ್ನು ಕೂಡ ಮಳೆ ಮುಂದುವರೆಯಲಿದೆ ಎಂದು ಹವಮಾನ ಇಲಾಖೆ ಸೂಚನೆ ನೀಡಿದೆ.

 

ಕಳೆದ ಬಾರಿ ಮುಂಗಾರು, ಹಿಂಗಾರು ಮಳೆ ಕೈಕೊಟ್ಟ ಕಾರಣದಿಂದ ಈ ಬಾರಿ ಮಳೆಯ ಅಬ್ಬರ ಜಾಸ್ತಿ ಇರಲಿದೆ. ಕೆಲವೊಂದು ಕಡೆ ಪ್ರವಾದ ಭೀತಿಯೂ ಉಂಟಾಗಿದೆ. ಹೀಗಿರುವಾಗ ಜನರು ಕೂಡ ಮಳೆಯಿಂದಾಗುವ ಅನಾಹುತಗಳಿಂದ ತಪ್ಪಿಸಿಕೊಳ್ಳಲು ಮುಂಜಾಗ್ರತ ಕ್ರಮ ವಹಿಸಬೇಕಾಗಿದೆ. ರೈತರು ಕೂಡ ಕೊಂಚ ಮಳೆಯಿಂದ ಮುಂಜಾಗ್ರತೆವಹಿಸಬೇಕಾಗಿದೆ. ಇನ್ನು ಹೊರಗೆ ಕೆಲಸಕ್ಕೆಂದು ಹೋಗುವವರು ಯಾವಾಗ ಮಳೆ ಬರುತ್ತದೆ ಎಂಬುದನ್ನು ತಿಳಿಯದೆ ಮಳೆಯಲ್ಲಿ ಸಿಲುಕುತ್ತಿದ್ದಾರೆ. ರೈನ್ ಕೋಟ್, ಛತ್ರಿಯಂತಹ ವಸ್ತುಗಳ ಮೂಲಕ ತಮ್ಮನ್ನು ತಾವೂ ಕಾಪಾಡಿಕೊಳ್ಳಬೇಕಾಗಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment