Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ನೈರುತ್ಯ ಪದವೀಧರ ಚುನಾವಣೆ : ಬಿಜೆಪಿ ವಿರುದ್ಧ ರಘುಪತಿ ಭಟ್ ಬಂಡಾಯ, ಪಕ್ಷೇತರ ಸ್ಪರ್ಧೆ

---Advertisement---

ಮೈಸೂರು: ವಿಧಾನಸಭಾ ಚುನಾವಣೆ, ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹಳಬರಿಗೆ, ಒಂದಷ್ಡು ವಿವಾದಗಳಿದ್ದವರಿಗೆ ಟಿಕೆಟ್ ನಿರಾಕರಣೆ ಮಾಡಿತ್ತು. ಹೊಸ ಮುಖಗಳಿಗೆ ಮಣೆ ಹಾಕಲು ಹೋಗಿ, ಹಿರಿಯ ತಲೆಗಳು ಬಂಡಾಯವೆದ್ದಿದ್ದರು. ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ಸಿಗದೆ ಈಶ್ವರಪ್ಪ ಅವರು ಬಂಡಾಯವೆದ್ದು, ಬಿಜೆಪಿ ವಿರುದ್ಧವೇ ಸ್ಪರ್ಧೆ ನಡೆಸಿದ್ದರು. ಇದೀಗ ರಘುಪತಿ ಭಟ್ ಸಮಯ.

ನೈರುತ್ಯ ಪದವೀಧರ ಕ್ಷೇತ್ರದ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗಿವೆ. ಬಿಜೆಪಿಯಲ್ಲಿ ನೈರುತ್ಯ ಪದವಿಧರ ಕ್ಷೇತ್ರದಿಂದ ಸ್ಪರ್ಧಿಸುವ ಹೆಬ್ಬಯಕೆಯನ್ನು ಮಾಜಿ ಶಾಸಕ ರಘುಪತಿ ಭಟ್ ಇಟ್ಟುಕೊಂಡಿದ್ದರು. ಟಿಕೆಟ್ ಸಿಗುವ ನಿರೀಕ್ಷೆಯೂ ಇತ್ತು. ಆದರೆ ಇದೀಗ ಅವರ ಲೆಕ್ಕಚಾರ ಉಲ್ಟಾ ಆಗಿದೆ. ಬಿಜೆಪಿ ಬೇರೆಯವರಿಗೆ ಮಣೆ ಹಾಕಿದೆ. ಧನಂಜಯ ಅವರಿಗೆ ಟಿಕೆಟ್ ಕೊಟ್ಟಿದೆ. ಇದರಿಂದ ರಘುಪತಿ ಭಟ್ ಕೋಪಗೊಂಡಿದ್ದು, ಬೇಸರ ಹೊರ ಹಾಕಿದ್ದಾರೆ.

ನನಗೆ ಟಿಕೆಟ್ ವಂಚಿಸಿದ್ದು ಭೌಗೋಳಿಕ ಅನ್ಯಾಯ ಮತ್ತು ಕಾರ್ಯಕರ್ತರಿಗೆ ಆಗಿರುವ ದ್ರೋಹ. ತನ್ನನ್ನು ಪಕ್ಷದಿಂದ ಉಚ್ಛಾಟನೆ ಮಾಡಿದರು ಸ್ಪರ್ಧೆಯಿಂದ ಸರಿಯುವುದಿಲ್ಲ. ಯಾರಾದರೂ ಹಿರಿಯ ನಾಯಕರಿಗೆ ಕೊಟ್ಟರು ನನಗೆ ಬೇಸರವಿಲ್ಲ ಎಂದಿದ್ದಾರೆ.

 

ಬಾಲ್ಯದಿಂದ ಸ್ವಯಂ ಸೇವಕ, ಕಾರ್ಯಕರ್ತ. ಬಿಜೆಒಇಯ ಜಿಲ್ಲಾಧ್ಯಕ್ಷನಾಗಿದ್ದೆ. ಯಾರೇ ಅಭ್ಯರ್ಥಿಯಾಗಬೇಕು ಅಂದ್ರೆ ಬೂತ್ ಮಟ್ಟದಿಂದ ಮಾಹಿತಿ ಸಂಗ್ರಹ ಮಾಡಿ, ಆಯ್ಕೆ ಮಾಡುತ್ತಿದ್ದರು. ಆದರೆ ಇತ್ತಿಚೆಗೆ ಆ ರೀತಿ ಇಲ್ಲ. ಕೇಂದ್ರದಿಂದ ಪ್ರಭಾವ ಇರುವವರಿಗೆ ಟಿಕೆಟ್ ಸಿಕ್ತಾ ಇದೆ. ನಾನೀಗ ನಿಲ್ತಾ ಇರುವುದು ನಾನೊಬ್ಬ ಸಕ್ರಿಯ ರಾಜಕಾರಣಿ. ಶಾಸಕನಾಗಿದ್ದಾಗ ಕುಟುಂಬವನ್ನು ನೋಡದೆ ಕೆಲಸ ಮಾಡಿದ್ದೀನಿ. ಹೀಗಾಗಿ ನಾನು ನಿಲ್ಲುತ್ತಿದ್ದೇನೆ ಎಂದಿದ್ದಾರೆ. ಈ ಮೂಲಕ ಪದವೀಧರ ಕ್ಷೇತ್ರದ ಚುನಾವಣೆಯಿಂದಾನು ಬಿಜೆಪಿಗೆ ಬಂಡಾಯದ ಬಿಸಿ ತಟ್ಟಲಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...