Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ವಿ.ಪಿ ಅಕಾಡೆಮಿ ವತಿಯಿಂದ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ : ಡಾ.ರುದ್ರಮುನಿ

---Advertisement---

ಸುದ್ದಿಒನ್, ಚಿತ್ರದುರ್ಗ, ಮೇ. 19 : ಸಾಂಪ್ರದಾಯಿಕ ಕೃಷಿ ಚಟುವಟಿಕೆಗೆ ಸಂಬಂಧಿಸಿದಂತೆ ನಗರದ ವಿ.ಪಿ ಅಕಾಡೆಮಿ ವತಿಯಿಂದ ಆಸಕ್ತ ಮಕ್ಕಳಿಗೆ ಕೃಷಿ ಜಾಗೃತಿ ಮೂಡಿಸುತ್ತಿರುವುದು ಶ್ಲಾಘನೀಯ. ಸಾವಯವ ಕೃಷಿ ಪದ್ಧತಿಯು ಆರೋಗ್ಯಕರ ವಾತಾವರಣವನ್ನು ಸೃಷ್ಟಿಸುವ ಜೊತೆಗೆ ದೈಹಿಕ ಮತ್ತು ಮಾನಸಿಕ ನೆಮ್ಮದಿಯನ್ನು ನೀಡುತ್ತದೆ ಎಂದು ಹಿರಿಯೂರು ತಾಲ್ಲುಕಿನ ಬಬ್ಬೂರು ಗ್ರಾಮದ ಭಾರತೀಯ ಕೃಷಿ ಅಧ್ಯಯನ ಪರಿಷತ್ತು, ಕೃಷಿ ವಿಜ್ಞಾನ ಕೇಂದ್ರದ ಪ್ರಾಧ್ಯಾಪಕ ಡಾ.ರುದ್ರಮುನಿ ತಿಳಿಸಿದರು.

ಚಿತ್ರದುರ್ಗ ನಗರದ ಪತ್ರಿಕಾಭವನದಲ್ಲಿ ಭಾನುವಾರದಂದು ದೀವಿಗೆ ಎಜುಕೇಷನ್ ಫೌಂಡೇಷನ್ ಹಾಗೂ ವಿ.ಪಿ.ಅಕಾಡೆಮಿ ವತಿಯಿಂದ ಪಿಯುಸಿ ನಂತರ ಮುಂದೇನು? ಮತ್ತು ಕೃಷಿ ಪ್ರಾಯೋಗಿಕ ಪರೀಕ್ಷಾ ತರಬೇತಿಯ ಒಂದು ದಿನದ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

ಬಿ.ಎಸ್ಸಿ ಅಗ್ರಿಕಲ್ಚರ್ ಓದುವ ಮಕ್ಕಳಿಗೆ ಈ ಕಾರ್ಯಾಗಾರವು ಉಪಯುಕ್ತವಾಗಿದೆ. ದೇಶಕ್ಕೆ ಅನ್ನ ಕೊಡುವ ರೈತನ ಬದುಕು ಸತ್ವಪೂರ್ಣವಾದುದು. ಮಕ್ಕಳು ಕೃತಕ ಜೀವನಕ್ಕೆ ಮಾರುಹೋಗದೆ, ಗುಣಮಟ್ಟದ ಕೃಷಿಪದ್ಧತಿಯ ಶಿಕ್ಷಣ ಪಡೆದು ಸಾರ್ಥಕ ಬದುಕನ್ನು ನಡೆಸಬೇಕು ಎಂದರು.

ಸಂಪನ್ಮೂಲ ವ್ಯಕ್ತಿ ಇ.ಮಂಜುನಾಥ ಇವರು ಪಿಯುಸಿ ನಂತರ ಮುಂದೇನು.? ಹಾಗೂ ಕೃಷಿ ಪ್ರಾಯೋಗಿಕ ಪರೀಕ್ಷಾ ಪ್ರಾತ್ಯಕ್ಷಿಕೆ ತರಬೇತಿ ನೀಡಿದರು. ದೀವಿಗೆ ಎಜುಕೇಷನ್ ಫೌಂಡೇಷನ್ ಅಧ್ಯಕ್ಷ ಎಂ.ವಿ.ನಟರಾಜ್, ವಿ.ಪಿ.ಅಕಾಡೆಮಿ ಪ್ರಾಚಾರ್ಯ ಹೆಚ್.ದೇವರಾಜ್, ನಿರ್ದೇಶಕ ಎಸ್.ಕೆ.ದೀಪಕ್ ಹಾಗೂ ವೈ.ಜಿ.ರಾಜು ಉಪಸ್ಥಿತರಿದ್ದರು

ವಿದ್ಯಾರ್ಥಿನಿಯರಾದ ಐಶ್ವರ್ಯ ಮತ್ತು ಸಂಗಡಿಗರು ಪ್ರಾರ್ಥಿಸಿದರು. ರಚನಾ ಸ್ವಾಗತಿಸಿದರು. ಸಂಜನಾ ವಂದಿಸಿದರು. ಇನ್ನೂರಕ್ಕೂ ಹೆಚ್ಚು ವಿದ್ಯಾರ್ಥಿ/ನಿಯರು ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಂಡರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...