Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಂಗಳೂರಿನಲ್ಲಿ ನಟ-ನಟಿಯರ ರೇವ್ ಪಾರ್ಟಿಯಲ್ಲಿ ಸಿಕ್ಕಿದ್ದೇನು..?

---Advertisement---

 

ಬೆಂಗಳೂರು: ಇಂದು ಬೆಳಗಿನ ಜಾವ 3 ಗಂಟೆ ವೇಳೆಗೆ ಎಲೆಕ್ಟ್ರಾನಿಕ್ ಸಿಟಿ ಬಳಿಯ ಫಾರ್ಮ್ ಹೌಸ್ ನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದರು. ಈ ದಾಳಿಯಲ್ಲಿ ತೆಲುಗು ಮತ್ತು ಕನ್ನಡದ ನಟ, ನಟಿಯರು, ಮಾಡೆಲ್ ಗಳು, ಡಿಜೆಗಳು ಪತ್ತೆಯಾಗಿದ್ದರೆ.‌ ಸಿಸಿಬಿ ಪೊಲೀಸರು ಕೆಲವರನ್ನು ಬಂಧಿಸಿದ್ದಾರೆ.

ಕಾನ್ ಕಾರ್ಡ್ ಮಲೀಕ ಗೋಪಾಲ ರೆಡ್ಡಿ ಎಂಬುವವರ ಮಾಲೀಕತ್ವದ ಜಿ.ಆರ್ ಫಾರ್ಮ್ ಹೌಸ್ ನಲ್ಲಿ ವಾಸು ಎಂಬಾತ ಬರ್ತ್ ಡೇ ಪಾರ್ಟಿ ಹೆಸರಲ್ಲಿ ಪಾರ್ಟಿ ಆಯೋಜನೆ ಮಾಡಿದ್ದರು. ಈ ಪಾರ್ಟಿ ತಡರಾತ್ರಿ 3 ಗಂಟೆಯಾದರೂ ಅಂತ್ಯವಾಗಿರಲಿಲ್ಲ. ನಿಯಮ ಉಲ್ಲಂಘಿಸಿ, ಅವಧಿ ಮೀರಿ ಪಾರ್ಟಿ ಮಾಡಲಾಗಿತ್ತು. ಆದ್ದರಿಂದ ಸಿಸಿಬಿಯ ಆಂಟಿ ನಾರ್ಕೊಟಿಕ್ಸ್ ವಿಭಾಗದ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿ ವೇಳೆ ಡ್ರಗ್ಸ್ ಕೂಡ ಪತ್ತೆಯಾಗಿದೆ. ಸಿಸಿಬಿ ಪೊಲೀಸರ ದಾಳಿ ವೇಳೆ 17 ಎಂಡಿಎಂಎ ಮಾತ್ರೆಗಳು, ಕೊಕೇನ್ ಕಂಡು ಬಂದಿದೆ. ಆಂಧ್ರ, ಬೆಂಗಳೂರು ಮೂಲದ 100ಕ್ಕೂ ಹೆಚ್ಚು ಜನ ಮತ್ತು 25ಕ್ಕೂ ಹೆಚ್ಚು ಯುವತಿಯರು ಈ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂಬುದು ತಿಳಿದು ಬಂದಿದೆ.

ಇನ್ನು ಈ ಪಾರ್ಟಿಯಲ್ಲಿ ಶಾಸಕರೊಬ್ಬರ ಪಾಸ್ ಕೂಡ ಕಂಡು ಬಂದಿದೆ. ಆಂಧ್ರ ಮೂಲದ ಕಾಕನಿ ಶಾಸಕ ಗೋವರ್ಧನ ರೆಡ್ಡಿ ಹೆಸರಿನ ಪಾಸ್ ಅದಾಗಿದೆ. ಮರ್ಸಿಡಿಸ್, ಬೆನ್ಜ್, ಜಾಗ್ವಾರ್, ಆಡಿ ಕಾರು ಸೇರಿದಮನತೆ ಹದಿನೈದಕ್ಕೂ ಹೆಚ್ಚು ಐಷರಾಮಿ ಕಾರುಗಳು ಕಂಡು ಬಂದಿವೆ. 30-50 ಲಕ್ಷ ಖರ್ಚು ಮಾಡಿ ಈ ಪಾರ್ಟಿ ಆಯೋಜನೆಗೆ ಖರ್ಚಾಗಿತ್ತು ಎನ್ನಲಾಗುತ್ತಿದೆ. ಸದ್ಯ ಸಿಸಿಬಿ ಪೊಲೀಸರು ನಾರ್ಕೊಟಿಕ್ಸ್ ಸ್ನಿಫರ್ ಡಾಗ್ ಗಳಿಂದ ಪರಿಶೀಲನೆ ನಡೆಸುತ್ತಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment