Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ರಜ್ವಲ್ ಅಶ್ಲೀಲ ವಿಡಿಯೋ ಪ್ರಕರಣ : ಎಸ್ಐಟಿ ಮುಂದೆ ಹಾಜರಾಗುವುದು ಉತ್ತಮ ಎಂದ ನಿಖಿಲ್ ಕುಮಾರಸ್ವಾಮಿ

---Advertisement---

ಬೆಂಗಳೂರು: ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಇನ್ನು ಪತ್ತೆಯಾಗಿಲ್ಲ. ಈ ಬಗ್ಗೆ ನಿಖಿಲ್ ಕುಮಾರಸ್ವಾಮಿಗೆ ಪ್ರಶ್ನೆ ಎದುರಾದಾಗ, ಆರೋಪಿ ಆಗಿದ್ದವನು ಆರೋಪವನ್ನು ಎದುರಿಸಬೇಕು. ಕಾನೂನು ಹೋರಾಟವನ್ನು ಮಾಡಬೇಕು ಎಂದಿದ್ದಾರೆ.

 

ಆರೋಪವೆಂಬುದು ಬಂದ ನಂತರ ಆರೋಪಿ ಆಗಿರುವ ಹಿನ್ನೆಲೆಯಲ್ಲಿ ಬಂದುಎಸ್ಐಟಿಯನ್ನು ಎದುರಿಸಬೇಕಾಗಿರುವುದು ಸೂಕ್ತ. ಆದರೆ ನನಗೆ ವೈಯಕ್ತಿಕವಾಗಿ ಯಾವುದೇ ಸಂಪರ್ಕವಿಲ್ಲ. ಅದಂತೂ ಸ್ಪಷ್ಟ. ಅವರ ಸಂಪರ್ಕದಲ್ಲಿ ನಾನು ಕೂಡ ಇಲ್ಲ. ಕುಮಾರಸ್ವಾಮಿ ಅವರು ಮೊದಲೇ ಹೇಳಿದಂತೆ ಉಪ್ಪು ತಿಂದವನು ನೀರು ಕುಡಿಯಲೇಬೇಕು. ಅಷ್ಟೇ ಅಲ್ಲ ವಿಡಿಯೋದಲ್ಲಿರುವ ಹೆಣ್ಣು ಮಕ್ಕಳ ಮುಖದಲವನ್ನು ಬ್ಲರ್ ಮಾಡದೆ ರಿಲೀಸ್ ಮಾಡಿದ್ದಾರೆ. ವಿಡಿಯೋ ಬಿಡುಗಡೆ ಮಾಡಿದವರು ಯಾರು..? ಇಲ್ಲಿ ವಿಡಿಯೋ ಬಿಡುಗಡೆ ಮಾಡಿದರ ಬಗ್ಗೆ ತನಿಖೆಯೇ ಆಗುತ್ತಿಲ್ಲ. ಇದು ನ್ಯಾಷನಲ್ ಸುದ್ದಿ. ಇದಕ್ಕೆ ಉತ್ತರಿಸಲೇಬೇಕು. ಎಲ್ಲದರ ಬಗ್ಗೆಯೂ ತನಿಖೆಯಾಗಬೇಕು. ಇದಕ್ಕೆಲ್ಲ ಸರ್ಕಾರ ಉತ್ತರ ನೀಡಬೇಕು ಎಂದು ಆಗ್ರಹಿಸಿದರು.

ಇದೇ ವೇಳೆ ಶಿವರಾನೇಗೌಡರ ಮಾತುಗಳಿಗೆ ಪ್ರತಿಕ್ರಿಯೆ ನೀಡಿದ್ದು, ಶಿವರಾನೇಗೌಡರ ಮಾತುಗಳನ್ನು ಕೇಳಿದ ಜನಕ್ಕೆ ಎಂಥಾ ರಾಜಕಾರಣಿ ಎಂಬುದು ಗೊತ್ತಾಗಿದೆ. ವಿಷಯಾಧಾರಿತ ಮಾಡಿ ಗೊತ್ತಿರದ ಹಾಗೆ ಒಬ್ಬ ಮಾಜಿ ಪ್ರಧಾನಿಯ ಹಾಗೂ ರಾಜ್ಯದ ಹಿರಿಯ ಮುತ್ಸದ್ಧಿಯ ಸಾವು ಬಯಸುವ ಅವರೊಬ್ಬ ಸಂಸ್ಕೃತಿಹೀನ ವ್ಯಕ್ತಿ. ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಕೇವಲ ತಮ್ಮ ಮಗನ ಭವಿಷ್ಯದ ಮಾತ್ರ ಚಿಂತೆ ಇದೆ ಎಂಬುದಾಗಿಯೂ ಅವರು ಹೇಳಿದ್ದಾರೆ. ನಮ್ಮ ತಂದೆ ಯಾವತ್ತಿಗೂ ಆ ರೀತಿ ಯೋಚಿಸಿಲ್ಲ ಲ. ಬೇರೆಯವರ ಹಾಗೇ ಕುಮಾರಸ್ವಾಮಿ ಅವರು ಹೊಂದಾಣಿಕೆ ರಾಜಕಾರಣ ಮಾಡಿದ್ದರೆ, ಇಷ್ಟೊತ್ತಿಗೆ ನಾನು ಯಾವುದೋ ಉನ್ನತ ಸ್ಥಾನದಲ್ಲಿ ಇರುತ್ತಿದ್ದೆ ಎಂದಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment