Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು| ಆಸ್ಪತ್ರೆಯಲ್ಲಿ ಕರೆಂಟ್ ಕಟ್, ಮೇಣದಬತ್ತಿ ಹಚ್ಚಿ ರೋಗಿಗಳಿಗೆ ಚಿಕಿತ್ಸೆ ನೀಡಿದ ವೈದ್ಯರು

---Advertisement---

 

ಸುದ್ದಿಒನ್, ಮೊಳಕಾಲ್ಮೂರು, ಮೇ. 21 : ಮಳೆ ಬಂದಾಗ ಒಂದಷ್ಟು ಸಮಸ್ಯೆಗಳಾಗುವುದು ಸಾಮಾನ್ಯ. ವಿದ್ಯುತ್ ಸಮಸ್ಯೆ, ರಸ್ತೆಗಳ ಕುಸಿತ, ನೀರು ತುಂಬಿಕೊಳ್ಳುವುದು. ಇದೆಲ್ಲದಕ್ಕೂ ಮುಂಜಾಗ್ರತ ಕ್ರಮ ತೆಗೆದುಕೊಳ್ಳಲೆಂದೆ ಅಧಿಕಾರಿಗಳಿಗೆ ಸರ್ಕಾರ ಸೂಚನೆ ನೀಡಿರುತ್ತದೆ. ಮಳೆಗಾಲ ಶುರುವಾಗುವುದಕ್ಕೂ ಮುನ್ನವೇ ಒಂದಷ್ಟು ಕ್ರಮ ತೆಗೆದುಕೊಳ್ಳಬೇಕಾಗುತ್ತದೆ. ಆದರೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಮೊಳಕಾಲ್ಮೂರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ರೋಗಿಗಳು ಪರದಾಡುವಂತೆ ಆಗಿದೆ.

ತಾಲೂಕಿನಲ್ಲಿ ಕಳೆದೊಂದು ವಾರದಿಂದ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುರಿದ ತಾಲ್ಲೂಕಿನ ಹಲವೆಡೆ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಇತ್ತ ಮಳೆಯ ಹಿನ್ನೆಲೆಯಲ್ಲಿ ಮೊಳಕಾಲ್ಮೂರು ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ವಿದ್ಯುತ್ ಇಲ್ಲದೆ, ರೋಗಿಗಳು ಹಾಗೂ ವೈದ್ಯರು ಪರದಾಡಿದ್ದಾರೆ.

ಆಸ್ಪತ್ರೆಯಲ್ಲಿ ಅಳವಡಿಸಿದ್ದ ಜನರೇಟರ್ ಕೆಟ್ಟು ವಾರ ಕಳೆದರೂ ರಿಪೇರಿ ಮಾಡಿಲ್ಲ. ಇತ್ತ ಮಳೆಗೆ ಕರೆಂಟ್ ಹೋದ ಹಿನ್ನೆಲೆಯಲ್ಲಿ ವೈದ್ಯರು ಮೊಬೈಲ್ ಟಾರ್ಚ್ ಮತ್ತು ಮೇಣದಬತ್ತಿ ಹಚ್ಚಿಕೊಂಡು ರೋಗಿಗಳಿಗೆ ಚಿಕಿತ್ಸೆ ನೀಡಿದ್ದಾರೆ.

ಪಟ್ಟಣದಲ್ಲಿರುವ ಸಾರ್ವಜನಿಕ ಆಸ್ಪತ್ರೆಯು 100 ಹಾಸಿಗೆಯುಳ್ಳ ಆಸ್ಪತ್ರೆಯಾಗಿದೆ. ಈ ಹಿಂದೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಮಾಜಿ ಸಚಿವ ಶ್ರೀರಾಮುಲು ಅವರು ಶಾಸಕರಾಗಿದ್ದ ಅವಧಿಯಲ್ಲಿ ಇದೇ ಆಸ್ಪತ್ರೆಯಲ್ಲಿ 23 ಬೆಡ್ ಗಳ ಐಸಿಯು,ಆಕ್ಸಿಜನ್ ಪ್ಲಾಂಟ್,ಏರ್ಪ್ಲೋ ಆಪರೇಶನ್ ಥೇಟರ್,ಎಲ್ಲಾ ಬೆಡ್ ಗಳಿಗೂ ಆಕ್ಸಿಜನ್ ಕನೆಕ್ಟಿವಿಟಿ,12 ಕ್ಕೂ ಹೆಚ್ಚು ತಜ್ಞ ವೈದ್ಯರು,ಜನೌಷಧಿ ಕೇಂದ್ರ ಸ್ಥಾಪನೆ, ಹೆಚ್ಚುವರಿ ಆಂಬ್ಯುಲೆನ್ಸ್ ನಂತಹ ಕಾರ್ಯಗಳನ್ನು ಮಾಡಿದ್ದರು. ಆದರೆ ಈಗ ಮಳೆಯಿಂದಾಗಿ ರೋಗಿಗಳು ಪರದಾಡುವಂತೆ ಆಗಿದೆ. ಸಂಬಂಧಪಟ್ಟವರು ಈಗಲಾದರೂ ಇತ್ತಕಡೆ ಗಮನ ಹರಿಸಬೇಕಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...