Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣನಿಗೆ ಕಡೆಯ ಎಚ್ಚರಿಕೆ ಕೊಟ್ಟ ದೇವೇಗೌಡ್ರು : ಶರಣಾಗುವಂತೆ ಪತ್ರ..!

Facebook
Twitter
Telegram
WhatsApp

ಬೆಂಗಳೂರು: ಹಾಸನ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಎಲೆಕ್ಷನ್ ಮುಗಿದ ಮಾರನೇ ದಿನ ಎಸ್ಕೇಪ್ ಆಗಿರುವ ಪ್ರಜ್ವಲ್ ರೇವಣ್ಣ ಇನ್ನು ದೇಶಕ್ಕೆ ವಾಪಾಸ್ ಆಗಿಲ್ಲ. ಎಸ್ಐಟಿ ಅಧಿಕಾರಿಗಳು ಹಲವು ಬಾರಿ ನೋಟೀಸ್ ನೀಡಿದ್ದಾರೆ. ಕೋರ್ಟ್ ಕೂಡ ಅರೆಸ್ಟ್ ವಾರೆಂಟ್ ಜಾರಿ ಮಾಡಿದೆ. ಆದರೂ ಪ್ರಜ್ವಲ್ ರೇವಣ್ಣ ಸುಳಿವು ಇಲ್ಲ. ಇದೀಗ ಹೆಚ್.ಡಿ. ದೇವೇಗೌಡ್ರು ಮೊಮ್ಮಗನಿಗೆ ಕಡೆಯ ಎಚ್ಚರಿಕೆಯನ್ನು ನೀಡಿದ್ದಾರೆ.

ಪ್ರಜ್ವಲ್ ರೇವಣ್ಣರಿಗೆ ಬಹಿರಂಗ ಪತ್ರ ಬರೆದಿರುವ ದೇವೇಗೌಡ್ರು, ನಾನು ಮೇ 18ನೇ ತಾರೀಕು ದೇವಸ್ಥಾನಕ್ಕೆ ಹೊರಟಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣನ ಕುರಿತಾಗಿ ಮಾತನಾಡಿದ್ದೆ. ಆತ ನನಗೆ, ನನ್ನ ಸ್ನೇಹಿತರಿಗೆ, ಕುಟುಂಬಸ್ಥರಿಗೆ, ಕಾರ್ಯಕರ್ತರಿಗೆ ತಂದೊಡ್ಡಿರುವ ಆಘಾತ ಮತ್ತು ನೋವಿನಿಂದ ಹೊರ ಬಂದು ಮಾತನಾಡುವುದಕ್ಕೆ ಸ್ವಲ್ಪ ಸಮಯವಿಡಿಯಿತು. ನಾನು ಈಗಾಗಲೇ ಸ್ಪಷ್ಟ ಪಡಿಸಿರುವ ಹಾಗೇ ಅವನು ತಪ್ಪಿತಸ್ಥನಾದರೆ, ಅವನಿಗೆ ಕಠಿಣ ಶಿಕ್ಷೆಯಾಗಬೇಕು. ನನ್ನ ಈ ನಿಲುವನ್ನು ನನ್ನ ಮಗ ಹಾಗೂ ಮಾಜಿ ಸಿಎಂ ಕುಮಾರಸ್ವಾಮಿ ಅವರು ಹಗರಣ ಹೊರಬಿದ್ದ ಮೊದಲ ದಿನದಿಂದಾನೇ ಪ್ರತಿಪಾದಿಸಿದ್ದಾರೆ. ಕೆಲವು ವಾರದಿಂದ ನನ್ನ ಹಾಗೂ ಕುಟುಂಬದ ಬಗ್ಗೆ ಜನ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಇದೆಲ್ಲವೂ ನನಗೆ ತಿಳಿದಿದೆ. ಅವರು ಮಾತನಾಡುವುದನ್ನು ನಿಲ್ಲಿಸುವ ಪ್ರಯತ್ನ ಮಾಡಲ್ಲ. ಅವರನ್ನು ಟೀಕೆ ಮಾಡುವುದಕ್ಕೂ ಹೋಗಲ್ಲ. ಈ ಹಗರಣದ ಎಲ್ಲಾ ಸತ್ಯಾಂಶಗಳು ಹೊರ ಬರುವವರೆಗೂ ಕಾಯುತ್ತೇನೆ.

 

ಎಲ್ಲಿದ್ದರೂ ಕೂಡಲೇ ವಾಪಸ್ ಬರಬೇಕು. ಪ್ರಜ್ವಲ್ ಎಲ್ಲಿದ್ದರು ಬಂದು ಪೊಲೀಸರ ಮುಂದೆ ಶರಣಾಗಬೇಕು. ವಿಚಾರಣೆಯನ್ನು ಎದುರಿಸಬೇಕು. ಯವುದೇ ಮುಲಜು, ಮರ್ಜಿ ಇಲ್ಲದೆ ಹೇಳಬಲ್ಲೆ ಮತ್ತು ಹೇಳುತ್ತಿದ್ದೇನೆ ಎಂದು ಪತ್ರದ ಮೂಲಕ ಎಚ್ಚರಿಕೆ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡೇವಿಡ್ ವಾರ್ನರ್ ವಿದಾಯಕ್ಕೆ ರಿಕಿ ಪಾಂಟಿಂಗ್ ಭಾವುಕ..!

ಟಿ20 ವಿಶ್ವಕಪ್ ನಲ್ಲಿ ಕಪ್ ಗೆಲ್ಲುವಲ್ಲಿ ಆಸ್ಟ್ರೇಲಿಯಾ ವಿಫಲವಾಗಿದೆ. ಈ ನೋವಿನಲ್ಲಿ ಇರುವಾಗಲೇ ಆಸ್ಟ್ರೇಲಿಯಾಗೆ ಮತ್ತೊಂದು ಆಘಾತಕಾರಿ ಸುದ್ದಿ ಸಿಕ್ಕಿದೆ. ಆಸ್ಟ್ರೇಲಿಯಾ ತಂಡದ ಸ್ಪೋಟಕ ಆಟಗಾರ, ಲೆಜೆಂಡರಿ ಕ್ರಿಕೆಟರ್ ಡೇವಿಡ್ ವಾರ್ನರ್ ಅಂತರಾಷ್ಟ್ರೀಯ ಕ್ರಿಕೆಟ್

ಕುರಿಗಾಹಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕುರಿಗಾಹಿಗಳ ಬದುಕು ಸುಲಭವಲ್ಲ. ಸಾಕಷ್ಟು ಕಷ್ಟಪಡುತ್ತಾರೆ. ಅವರಿಗೆ ಆದಂತ ಜೀವನ ಸೆಕ್ಯುರಿಟಿಗಳು ಇಲ್ಲ. ಎಲ್ಲೆಲ್ಲೋ ಕುರಿಗಳನ್ನು ಮೇಯಿಸಲು ಹೋದಾಗ ಜೀವ ರಕ್ಷಣೆಗೆ ಏನು ಇಲ್ಲ. ಕುರಿಗಾಹಿಗಳು ಬಂದೂಕು ಪರವಾನಗಿ, ಸಂಚಾರಿ ಕುರಿಗಾಹಿಗಳ ಮೇಲೆ

ಹಾಲಿನ ದರ ಏರಿಕೆಗೆ ಆಕ್ರೋಶ : ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

ಬೆಂಗಳೂರು: ಸಾಮಾನ್ಯ ಜನ ಈ ಬೆಲೆ ಏರಿಕೆಯಿಂದಾನೇ ತತ್ತರಿಸಿ ಹೋಗಿದ್ದಾರೆ‌. ಮೊನ್ನೆಯಷ್ಟೇ ಪೆಟ್ರೋಲ್-ಡಿಸೇಲ್ ದರ ಏರಿಕೆಯಾಗಿದೆ. ಈಗ ಹಾಲಿನ ದರವನ್ನು ಏರಿಕೆ ಮಾಡಲಾಗಿದೆ. 2 ರೂಪಾಯಿ ಏರಿಕೆ ಮಾಡಿ 50 ML ಹಾಲನ್ನು ಜಾಸ್ತಿ

error: Content is protected !!