Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ನಿರ್ಮಾಪಕ ಸೌಂದರ್ಯ ಜಗದೀಶ್ ಆತ್ಮಹತ್ಯೆಗೆ 60 ಕೋಟಿ ಕಾರಣ : ಡೆತ್ ನೋಟ್ ನಲ್ಲಿ ಇದ್ದಿದ್ದು ಏನು..?

---Advertisement---

ಬೆಂಗಳೂರು: ಸಿನಿಮಾ ನಿರ್ಮಾಣದ ಜೊತೆ ಜೊತೆಗೆ ಹಲವು ಉದ್ಯಮಗಳನ್ನು ಮಾಡುತ್ತಿದ್ದ ಸೌಂದರ್ಯ ಜಗದೀಶ್ ಕಳೆದ ಕೆಲವು ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿದ್ದರು. ಇದೀಗ ಅವರ ಸಾವಿಗೆ ಕಾರಣವೇನು ಎಂಬುದು ತಿಳಿದು ಬಂದಿದ್ದು, ಡೆತ್ ನೋಟ್ ಕೂಡ ಪತ್ತೆಯಾಗಿದೆ.

ಸೌಂದರ್ಯ ಜಗದೀಶ್ ಮನೆಯಲ್ಲಿ ಡೆತ್ ನೋಟ್ ಪತ್ತೆಯಾಗಿದೆ. ಆ ಡೆತ್ ನೋಟ್ ನಲ್ಲಿ ನಷ್ಟದ ವಿಚಾರ ಪತ್ತೆಯಾಗಿದೆ. ಈ ಡೆತ್ ನೋಟ್ ಆಧರಿಸಿ ಪೊಲೀಸರು ಕೂಡ ತನಿಖೆ ಕೈಗೊಂಡಿದ್ದರು. ಇದೀಗ ಸೌಂದರ್ಯ ಜಗದೀಶ್ ಆತ್ಮಹತ್ಯೆ ಕೇಸ್ ನಲ್ಲಿ ಮೂವರ ಮೇಲೆ ಎಫ್ಐಆರ್ ಕೂಡ ದಾಖಲಾಗಿದೆ. ಸೌಂದರ್ಯ ಜಗದೀಶ್ ತನ್ನ ಬಿಸಿನೆಸ್ ಲಾಸ್ ಬಗ್ಗೆ ಆ ಡೆತ್ ನೋಟ್ ನಲ್ಲಿ ನಮೂದಿಸಿದ್ದರು.

ಜೆಟ್ ಲ್ಯಾಗ್ ಪಬ್ ಉದ್ಯಮದ ಜೊತೆಗೆ ಸೌಂದರ್ಯ ಕನ್ಸ್ಟ್ರಕ್ಷನ್ ಕಂಪನಿಯನ್ನು ಸೌಂದರ್ಯ ಜಗದೀಶ್ ಪಾಟ್ನರ್ ಶಿಪ್ ನಲ್ಲಿ ನಡೆಸುತ್ತಿದ್ದರು. ಆದರೆ ಬಿಸಿನೆಸ್ ನಷ್ಟವಾಗುವುದಕ್ಕೆ ಪಾಲುದಾರರೇ ಕಾರಣ ಎಂಬುದನ್ನು ಸೌಂದರ್ಯ ಜಗದೀಶ್ ಅದರಲ್ಲಿ ತಿಳಿಸಿದ್ದಾರೆ. ಇದರಿಂದಾಗಿ 60 ಕೋಟಿ ರೂಪಾಯಿ ನಷ್ಟವಾಗಿದೆ ಎಂಬುದನ್ನು ಬರೆದಿದ್ದರು ಎನ್ನಲಾಗಿದೆ. ಈ ಮೂಲಕ ಸೌಂದರ್ಯ ಜಗದೀಶ್ ಸಾವಿಗೆ ಈ ಸಾಲದ ಹೊರೆಯು ಕಾರಣ ಎನ್ನಲಾಗಿದೆ.

ಇನ್ನು ಈ ಕಂಪನಿಯ ನಷ್ಟದ ವಿಚಾರಕ್ಕೆ ಪಾಲುದಾರರ ವಿರುದ್ದ ಸೌಂದರ್ಯ ಜಗದೀಶ್ ಅವರ ಪತ್ನಿ ಶಶಿರೇಖಾ ಅವರು ದೂರು ನೀಡಿದ್ದರು. ದೂರಿನ ಆಧಾರದ ಮೇಲೆ ಜಗದೀಶ್ ಬಿಸಿನೆಸ್ ಪಾಟ್ನರ್ ಆಗಿದ್ದ ಸುರೇಶ್, ಹೊಂಬಣ್ಣ, ಸುದೀಂದ್ರ ಎಂಬುವವರ ಮೇಲೆ ದೂರು ದಾಖಲಾಗಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...