Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಐಪಿಎಲ್ ನಿಂದ ಹೊರಬಿದ್ದ ಮೇಲೆ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ ವಿರಾಟ್ ಕೊಹ್ಲಿ

---Advertisement---

 

ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಆಡಿದ್ದು ನೋಡಿದ್ರೆ ಖಂಡಿತ ಕಪ್ ಗೆದ್ದು ತಂದೇ ತರುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಮೂಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋತು, ಮನೆ ಕಡೆಯ ದಾರಿ ಹಿಡಿಯಿತು. ಅಭಿಮಾನಿಗಳಿಗೆ ಬೇಸರವಾದರೂ ತಮ್ಮ ಆರ್ಸಿಬಿ ತಂಡವನ್ನು ಪ್ರಶಂಸಿದರೆ ಬಿಡಲಿಲ್ಲ. ಕೊನೆ ಗಳಿಗೆಯಲ್ಲೂ ಚೆನ್ನಾಗಿ ಆಡಿದ್ರಿ ಎಂದು ಹೊಗಳಿದ್ದರು. ಇದೀಗ ಐಪಿಎಲ್ ಸೋತ ಮೂರು ದಿನಗಳ ಬಳಿಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿರುವ ವಿರಾಟ್ ಕೊಹ್ಲಿ, ಯಾವಾಗಲೂ ನಮ್ಮನ್ನು ಪ್ರೀತಿಸುವ, ಪ್ರಶಂಶಿಸುವ ಅಭಿಮಾನಿಗಳಿಗೆ ಮತ್ತೊಮ್ಮೆ ಧನ್ಯವಾದಗಳು ಎಂದು ಐಪಿಎಲ್ ನಲ್ಲಿ ತಮ್ಮ ಟೀಂ ಫೋಟೋ ಹಂಚಿಕೊಂಡು ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ್ದಾರೆ. ಅಭಿಮಾನಿಗಳೆಲ್ಲಾ ಈ ಪೋಸ್ಟ್ ಗೆ ಹಾರ್ಟ್ ನೀಡಿ, ಸದಾ ನಿಮ್ಮ ಬೆಂಬಲಕ್ಕೆ ಇದ್ದೀವಿ. ಮುಂದಿನ ಸಲ ಖಂಡಿತ ಕಪ್ ನಮ್ಮದೆ ಎಂದಿದ್ದಾರೆ.

ಸತತ 16 ವರ್ಷ.. ಆರ್ಸಿಬಿ ಮಾತ್ರ ಕಪ್ ಗೆಲ್ಲಲಿಲ್ಲ. ಈ ಬೇಸರ ಆರ್ಸಿಬಿ ತಂಡಕ್ಕೂ ಇದೆ ಎಂಬುದಾಗಿಯೇ ಎಲ್ಲರೂ ಭಾವಿಸಿದ್ದಾರೆ. ಈ ಬಾರಿ ಮಹಿಳಾ ಮಣಿಗಳೇ ಕಪ್ ಹೊಡೆದುಕೊಂಡು ಬಂದಿದ್ದಾರೆ. ಪುರುಷರು ಕೂಡ ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದರು. ಆದರೆ ಪ್ಲೇ ಆಫ್ ಗೆ ಬಂದು ಕನಸನ್ನು ನನಸು ಮಾಡಿಕೊಳ್ಳುವುದಕ್ಕೆ ಆಗಿಲ್ಲ. ಇದು ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆದರೂ ಭರವಸೆಯನ್ನಿಟ್ಟುಕೊಂಡು ಮತ್ತೆ ಬೆಂಬಲ ಸೂಚಿಸಿದ್ದಾರೆ. ಅದರಲ್ಲೂ ಈ ಬಾರಿಯ ಸೀಸನ್ ನಲ್ಲಿ ಕೊಹ್ಲಿ ಅದ್ಬುತ ಪ್ರದರ್ಶನ ನೀಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment