Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಐಪಿಎಲ್ ನಿಂದ ಹೊರಬಿದ್ದ ಮೇಲೆ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ ವಿರಾಟ್ ಕೊಹ್ಲಿ

Facebook
Twitter
Telegram
WhatsApp

 

ಈ ಬಾರಿಯ ಐಪಿಎಲ್ ನಲ್ಲಿ ಆರ್ಸಿಬಿ ಟೀಂ ಆಡಿದ್ದು ನೋಡಿದ್ರೆ ಖಂಡಿತ ಕಪ್ ಗೆದ್ದು ತಂದೇ ತರುತ್ತಾರೆ ಎಂಬ ವಿಶ್ವಾಸ ಎಲ್ಲರಿಗೂ ಮೂಡಿತ್ತು. ಆದರೆ ಎಲಿಮಿನೇಟರ್ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಎದುರು ಸೋತು, ಮನೆ ಕಡೆಯ ದಾರಿ ಹಿಡಿಯಿತು. ಅಭಿಮಾನಿಗಳಿಗೆ ಬೇಸರವಾದರೂ ತಮ್ಮ ಆರ್ಸಿಬಿ ತಂಡವನ್ನು ಪ್ರಶಂಸಿದರೆ ಬಿಡಲಿಲ್ಲ. ಕೊನೆ ಗಳಿಗೆಯಲ್ಲೂ ಚೆನ್ನಾಗಿ ಆಡಿದ್ರಿ ಎಂದು ಹೊಗಳಿದ್ದರು. ಇದೀಗ ಐಪಿಎಲ್ ಸೋತ ಮೂರು ದಿನಗಳ ಬಳಿಕ ವಿರಾಟ್ ಕೊಹ್ಲಿ ಅಭಿಮಾನಿಗಳಿಗಾಗಿ ಪೋಸ್ಟ್ ಒಂದನ್ನು ಹಾಕಿದ್ದಾರೆ.

ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿರುವ ವಿರಾಟ್ ಕೊಹ್ಲಿ, ಯಾವಾಗಲೂ ನಮ್ಮನ್ನು ಪ್ರೀತಿಸುವ, ಪ್ರಶಂಶಿಸುವ ಅಭಿಮಾನಿಗಳಿಗೆ ಮತ್ತೊಮ್ಮೆ ಧನ್ಯವಾದಗಳು ಎಂದು ಐಪಿಎಲ್ ನಲ್ಲಿ ತಮ್ಮ ಟೀಂ ಫೋಟೋ ಹಂಚಿಕೊಂಡು ಅಭಿಮಾನಿಗಳಿಗಾಗಿ ಪೋಸ್ಟ್ ಹಾಕಿದ್ದಾರೆ. ಅಭಿಮಾನಿಗಳೆಲ್ಲಾ ಈ ಪೋಸ್ಟ್ ಗೆ ಹಾರ್ಟ್ ನೀಡಿ, ಸದಾ ನಿಮ್ಮ ಬೆಂಬಲಕ್ಕೆ ಇದ್ದೀವಿ. ಮುಂದಿನ ಸಲ ಖಂಡಿತ ಕಪ್ ನಮ್ಮದೆ ಎಂದಿದ್ದಾರೆ.

ಸತತ 16 ವರ್ಷ.. ಆರ್ಸಿಬಿ ಮಾತ್ರ ಕಪ್ ಗೆಲ್ಲಲಿಲ್ಲ. ಈ ಬೇಸರ ಆರ್ಸಿಬಿ ತಂಡಕ್ಕೂ ಇದೆ ಎಂಬುದಾಗಿಯೇ ಎಲ್ಲರೂ ಭಾವಿಸಿದ್ದಾರೆ. ಈ ಬಾರಿ ಮಹಿಳಾ ಮಣಿಗಳೇ ಕಪ್ ಹೊಡೆದುಕೊಂಡು ಬಂದಿದ್ದಾರೆ. ಪುರುಷರು ಕೂಡ ಗೆದ್ದೆ ಗೆಲ್ಲುತ್ತಾರೆ ಎಂದುಕೊಂಡಿದ್ದರು. ಆದರೆ ಪ್ಲೇ ಆಫ್ ಗೆ ಬಂದು ಕನಸನ್ನು ನನಸು ಮಾಡಿಕೊಳ್ಳುವುದಕ್ಕೆ ಆಗಿಲ್ಲ. ಇದು ಸಹಜವಾಗಿಯೇ ಅಭಿಮಾನಿಗಳಿಗೆ ಬೇಸರ ತರಿಸಿದೆ. ಆದರೂ ಭರವಸೆಯನ್ನಿಟ್ಟುಕೊಂಡು ಮತ್ತೆ ಬೆಂಬಲ ಸೂಚಿಸಿದ್ದಾರೆ. ಅದರಲ್ಲೂ ಈ ಬಾರಿಯ ಸೀಸನ್ ನಲ್ಲಿ ಕೊಹ್ಲಿ ಅದ್ಬುತ ಪ್ರದರ್ಶನ ನೀಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!