Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಹುಂಡಿಯಲ್ಲಿ 71.41 ಲಕ್ಷ ಹಣ ಸಂಗ್ರಹ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ,
ಮೊ : 97398 75729

ಸುದ್ದಿಒನ್,ಚಿತ್ರದುರ್ಗ, ಮೇ. 24 :  ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯ ಐತಿಹಾಸಿಕ ನಾಯಕನಹಟ್ಟಿ ಶ್ರೀ ಗುರುತಿಪೇರುದ್ರಸ್ವಾಮಿ ದೇವಸ್ಥಾನದಲ್ಲಿ ಕಾಣಿಕೆ ಹುಂಡಿ ಹಣದ ಎಣಿಕೆ ಕಾರ್ಯವನ್ನು ಶುಕ್ರವಾರ ದೇವಾಲಯದ ಆವರಣದಲ್ಲಿ ಕಂದಾಯ ಇಲಾಖೆಯ ತಹಶೀಲ್ದಾರ್ ರೇಹಾನ್ ಪಾಷ, ಶ್ರೀ ಗುರು ತಿಪ್ಪೇರುದ್ರಸ್ವಾಮಿ ಕಾರ್ಯನಿರ್ವಾಣಧಿಕಾರಿ ಎಚ್. ಗಂಗಾಧರಪ್ಪ. ಮತ್ತು ಬ್ಯಾಂಕ್ ಅಧಿಕಾರಿಗಳ ಸಹಯೋಗದಲ್ಲಿ ನಡೆಯಿತು.

ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಕಾರ್ಯನಿರ್ವಾಣಧಿಕಾರಿ ಎಚ್. ಗಂಗಾಧರಪ್ಪ ಮಾತನಾಡಿ ಜಿಲ್ಲಾಧಿಕಾರಿ ಹಾಗೂ ತಾಲೂಕು ದಂಡಾಧಿಕಾರಿಗಳ ನೇತೃತ್ವದಲ್ಲಿ ಹುಂಡಿ ಎಣಿಕೆ ಸಿದ್ಧಪಡಿಸಿದ್ದು ಈ ವರ್ಷ ವಾರ್ಷಿಕ ಜಾತ್ರೆ ಮಾರ್ಚ್ 26 ರಂದು ನಡೆಯಿತು. ಲೋಕಸಭಾ ಚುನಾವಣೆ ಇದ್ದುದರಿಂದ ಒಂದು ತಿಂಗಳು ಲೇಟಾಗಿ ಹುಂಡಿ ಎಣಿಕೆ ಮಾಡಲಾಗಿದೆ. ಕಳೆದ ವರ್ಷ 72 ಲಕ್ಷ ಆಗಿತ್ತು ಈ ವರ್ಷವೂ ಸಹ 65 ರಿಂದ 70 ಲಕ್ಷ ನಿರೀಕ್ಷೆಯಲ್ಲಿ ಇದ್ದೇವೆ. ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಸ್ಥಾನದ ಸರ್ವತೋಮುಖ ಅಭಿವೃದ್ಧಿಗೆ ಈ ಹಣವನ್ನು ಬಳಸಲಾಗುವುದು ಎಂದರು.

ಮೊದಲು ಹೂರಮಠ ದೇವಾಲಯದಲ್ಲಿ ಮುಜರಾಯಿ ಹಾಗೂ ಕಂದಾಯ ಇಲಾಖೆಯ ತಹಶೀಲ್ದಾರ್ ರೇಹಾನ್ ಪಾಷ, ಹಾಗೂ ದೇವಾಲಯದ ಕಾರ್ಯನಿರ್ವಹಣಾಧಿಕಾರಿ ಎಚ್. ಗಂಗಾಧರಪ್ಪ ನೇತೃತ್ವದಲ್ಲಿ ಕಾಣಿಕೆ ಹುಂಡಿ ಏಣಿಕೆ ಕಾರ್ಯ ನಡೆಯಿತು.

ಹೊರಮಠದಲ್ಲಿ  ₹ 19,53,575 ಲಕ್ಷ , ಒಳಮಠದಲ್ಲಿ ₹  51,87,750 ಲಕ್ಷ  ಸಂಗ್ರಹವಾಗಿ ಒಟ್ಟಾರೆಯಾಗಿ ನಾಲ್ಕು ತಿಂಗಳ ಅವಧಿಯಲ್ಲಿ ₹   71,41,325 ಲಕ್ಷ ಸಂಗ್ರಹವಾಗಿದೆ.

ಹಣವನ್ನು ದೇವಾಲಯದ ಕೆನರಾ ಬ್ಯಾಂಕ್ ಖಾತೆಗೆ ಜಮಾ ಮಾಡಲಾಯಿತು. ಹೊರಮಠ ಮತ್ತು ಒಳಮಠಗಳ ಹುಂಡಿಯಲ್ಲಿ ಹಲವು ಬೆಳ್ಳಿ ನಾಣ್ಯಗಳು ಬೆಳ್ಳಿ ತೊಟ್ಟಿಲುಗಳು ಬೆಳ್ಳಿ ಆಭರಣಗಳು ಕಂಡು ಬಂದವು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಸವತತ್ವ ಮಹಾವಿದ್ಯಾಲಯ ಹಾಗೂ ವಚನ ಕಮ್ಮಟ ಶ್ರೀ ಮಠದ ಎರಡು ಕಣ್ಣುಗಳು : ಡಾ. ಬಸವರಮಾನಂದ ಸ್ವಾಮಿಗಳು

  ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಶ್ರೀ ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕøತಿ ಉತ್ಸವ-2024 ರ ಕಾರ್ಯಕ್ರಮದಲ್ಲಿ ವಚನ ಕಮ್ಮಟ ಪರೀಕ್ಷೆಯ ರ‌್ಯಾಂಕ್ ವಿಜೇತರರಿಗೆ ಬಹುಮಾನ

ಶರಣ ಸಂಸ್ಕøತಿ 2024 : ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ ಶ್ರೀಗಳ ಬೆಳ್ಳಿಮೂರ್ತಿಯ ಪಲ್ಲಕ್ಕಿ ಉತ್ಸವ ಹಾಗೂ ಪಥ ಸಂಚಲನ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಜಯದೇವ ಮುರುಘರಾಜೇಂದ್ರ ಮಹಾಸ್ವಾಮಿಗಳವರ 150 ನೇ ಜಯಂತ್ಯುತ್ಸವ ಹಾಗೂ ಶರಣ ಸಂಸ್ಕೃತಿ 2024ರ ಅಂಗವಾಗಿ ಶ್ರೀಜಯದೇವ ಕಪ್ ಪಂದ್ಯಾವಳಿಯ ನಿಮಿತ್ತ ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಜಯದೇವ

Exit Poll-2024 : ಹರಿಯಾಣ ಜಮ್ಮು ಮತ್ತು ಕಾಶ್ಮೀರದಲ್ಲಿ ರೋಚಕ ಫಲಿತಾಂಶ : ಇಲ್ಲಿದೆ ಎಕ್ಸಿಟ್ ಪೋಲ್‌ ಮಾಹಿತಿ…!

  ಸುದ್ದಿಒನ್, ಅಕ್ಟೋಬರ್. 05 : ಹರಿಯಾಣದ ಎಲ್ಲಾ 90 ವಿಧಾನಸಭಾ ಕ್ಷೇತ್ರಗಳಲ್ಲಿ ಶನಿವಾರ (ಅಕ್ಟೋಬರ್ 5) ಮತದಾನ ಪೂರ್ಣಗೊಂಡಿದೆ. ಹರಿಯಾಣ ಮತ್ತು ಜಮ್ಮು ಮತ್ತು ಕಾಶ್ಮೀರ ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶ ಅಕ್ಟೋಬರ್

error: Content is protected !!