Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ನೇರ್ಲಗುಂಟೆ ರಾಮಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ : ಕನಕ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ ಮೇ. 25 :  ಜಿಲ್ಲೆಯ ನೇರ್ಲಗುಂಟೆ ರಾಮಪ್ಪರವರಿಗೆ ಭೋವಿ ಜನಾಂಗದಡಿಯಲ್ಲಿ ವಿಧಾನ ಪರಿಷತ್‍ಗೆ ಸದಸ್ಯರನ್ನಾಗಿ ಮಾಡುವಂತೆ ಶಿಕ್ಷಕರ ಮತ್ತು ಪದವೀಧರರ ರಾಜ್ಯ ಉಪಾಧ್ಯಕ್ಷರಾದ ಕನಕ ಕಾಂಗ್ರೆಸ್ ಮುಖಂಡರನ್ನು ಆಗ್ರಹಿಸಿದ್ದಾರೆ.

ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನೆರ್ಲಗುಂಟೆ ರಾಮಪ್ಪ ಅವರು ಕಳೆದ 15 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿದ್ದಾರೆ. 2014 ರಿಂದ ನೆರ್ಲಗುಂಟೆ ರಾಮಪ್ಪರವರು ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಪ್ರಯತ್ನ ಮಾಡುತ್ತಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ನಮ್ಮ ಸಮುದಾಯಕ್ಕೆ ಯಾವುದೇ ಕ್ಷೇತ್ರದಲ್ಲೂ ಟಿಕೆಟ್ ನೀಡಿರುವುದಿಲ್ಲ. ರಾಜ್ಯದಲ್ಲಿ ಸಾಮಾಜಿಕ ನ್ಯಾಯವನ್ನು ಒದಗಿಸುವಂತಹ ಮುಖ್ಯಮಂತ್ರಿಯಾದ ಸಿದ್ದರಾಮಯ್ಯರವರು ನಮ್ಮ ಸಮುದಾಯಕ್ಕೆ ಸಾಮಾಜಿಕ ನ್ಯಾಯವನ್ನು ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಜೂನ್-13 ರಂದು 11 ಸ್ಥಾನಗಳಿಗೆ ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಭೋವಿ ಸಮುದಾಯದ ನೆರ್ಲಗುಂಟೆ ರಾಮಪ್ಪರವರನ್ನು ನಾಮ ನಿರ್ದೇಶನ ಮಾಡಬೇಕು. ಆದ್ದರಿಂದ ಕಾಂಗ್ರೆಸ್ ಪಕ್ಷವು ನಮ್ಮ ಸಮುದಾಯವನ್ನು ಪರಿಗಣಿಸಿ ನಮ್ಮ ಸಮುದಾಯದ ನೆರ್ಲಗುಂಟೆ ರಾಮಪ್ಪರವರನ್ನು ವಿಧಾನಪರಿಷತ್ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಬೇಕು. ಈ ವಿಚಾರವಾಗಿ ನಮ್ಮ ಸಮುದಾಯದ ಮುಖಂಡರು ಮಾನ್ಯ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಒತ್ತಡ ಹೇರಲಿದ್ದೇವೆ ಎಂದು ಕನಕ ತಿಳಿಸಿದರು.

ರಾಮಪ್ಪರವರಿಗೆ ಲೋಕಸಭಾ ಚುನಾವಣೆಯಲ್ಲಿ ಹಲವಾರು ಬಾರಿ ಟೀಕೇಟ್‍ನ್ನು ಕೇಳಲಾಗಿತ್ತು. ಆದರೆ ಕಾಂಗ್ರೆಸ್ ಪಕ್ಷ ನೀಡಿರಲಿಲ್ಲ ಅಲ್ಲದೆ ಈ ಲೋಕಸಭಾ ಚುನಾವಣೆಯ ಸಮಯದಲ್ಲಿಯೂ ಸಹಾ ಭೋವಿ ಸಮುದಾಯಕ್ಕೆ ಚಿತ್ರದುರ್ಗ ಕ್ಷೇತ್ರಕ್ಕೆ ಟೀಕೇಟ್ ನೀಡುವಂತೆ ಮನವಿಯನ್ನು ಮಾಡಲಾಗಿತ್ತು ಆದರೆ ಒಕ್ಷ ನೀಡಲಿಲ್ಲ ಈ ಹಿನ್ನಲೆಯಲ್ಲಿ ವಿಧಾನ ಪರಿಷತ್‍ಗಾದರೂ ನಮ್ಮ ಸಮುದಾಯವರು ಇರಬೇಕಿದೆ ಆದ್ದರಿಂದ ನಮ್ಮ ಸಮುದಾಯದ ಮುಖಂಡರಾದ ನೇರ್ಲಗುಂಟೆ ರಾಮಪ್ಪರವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರನ್ನು ಆಗ್ರಹಿಸಲಾಯಿತು.

ಗೋಷ್ಠಿಯಲ್ಲಿ ಮುದಸಿರ್ ನವಾಜ್, ತಿಪ್ಪೇಸ್ವಾಮಿ, ಚಿಕ್ಕಂದವಾಡಿ, ತಳಕು ತಾ.ಪಂ. ಮಾಜಿ ಸದಸ್ಯ ಜಿ.ತಿಪ್ಪೇಸ್ವಾಮಿ, ಹೆಚ್.ರವೀಂದ್ರನಾಥ್, ಸುಧಾ ಸೇರಿದಂತೆ ಇತರರು ಭಾಗವಹಿಸಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!