Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮೊಳಕಾಲ್ಮೂರು ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ಪ್ರಕರಣ : ಬೆಸ್ಕಾಂ ಸ್ಪಷ್ಟನೆ

---Advertisement---

ಬೆಂಗಳೂರು, ಮೇ 25 : ಮಳೆ, ಗಾಳಿಯಿಂದ ಮರ ಬಿದ್ದು ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದರಿಂದ ಮೊಳಕಾಲ್ಮೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೇ 20ರಂದು ರಾತ್ರಿ ವಿದ್ಯುತ್ ಸಮಸ್ಯೆಯಾಗಿತ್ತು ಎಂದು ಬೆಸ್ಕಾಂ ಸ್ಪಷ್ಟನೆ ನೀಡಿದೆ.

ಕಳೆದ ಮೇ 20ರ ಸಂಜೆ  ಸುರಿದ ಭಾರಿ ಮಳೆಯಿಂದಾಗಿ, 66/11 ಕೆ.ವಿ ಹಾನಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರವಹಿಸುವ ಎಫ್-2 ಮೊಳಕಾಲ್ಮೂರು ಫೀಡರ್ 11 ಕೆ.ವಿ ಮಾರ್ಗದ ಮೇಲೆ ಮರದ ರೆಂಬೆ ಬಿದ್ದು, ಮಧ್ಯರಾತ್ರಿ 12 ಗಂಟೆಗೆ ಫೀಡರ್ ಓ.ಸಿ.ಆರ್ ರಿಲೇ ಮೇಲೆ ಟ್ರಿಪ್ ಆಗಿತ್ತು.

ಈ ಸಂದರ್ಭದಲ್ಲಿ ಆಸ್ಪತ್ರೆಯ
ಜನರೇಟರ್ ದುರಸ್ಥಿಗೆ ಬಂದಿತ್ತು. ಇದರ‌ ಮಧ್ಯೆಯೂ ಐಸಿಯು ಮತ್ತು ಇತರ ತುರ್ತು ಘಟಕಗಳಿಗೆ ಯುಪಿಎಸ್‌ನಿಂದ ವಿದ್ಯುತ್ ಪೂರೈಕೆ ಇತ್ತು ಎಂದು ಬೆಸ್ಕಾಂ ತಿಳಿಸಿದೆ.

ಮಧ್ಯರಾತ್ರಿ 12ಕ್ಕೆ  ಸ್ಥಗಿತಗೊಂಡಿದ್ದ ವಿದ್ಯುತ್ ಸಂಪರ್ಕವನ್ನು  ಬೆಸ್ಕಾ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯಿಂದ ತಡರಾತ್ರಿ 1.17 ರೊಳಗೆ ವಿದ್ಯುತ್ ಮರುಪೂರೈಕೆ ಮಾಡಿದ್ದರು.

ಸಮಸ್ಯೆ ಕಾಣಿಸಿಕೊಂಡ ತಕ್ಷಣ ಬೆಸ್ಕಾಂ ಸಿಬ್ಬಂದಿ  ಕಾರ್ಯಾಚರಣೆಗೆ ಇಳಿದು, ವಿಳಂಬವಿಲ್ಲದೇ ವಿದ್ಯುತ್ ಮರುಪೂರೈಕೆಗೆ ಕ್ರಮ ಕೈಗೊಂಡಿದ್ದಾರೆ  ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...