Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮೊಳಕಾಲ್ಮೂರು ಆಸ್ಪತ್ರೆಯಲ್ಲಿ ವಿದ್ಯುತ್ ವ್ಯತ್ಯಯ ಪ್ರಕರಣ : ಬೆಸ್ಕಾಂ ಸ್ಪಷ್ಟನೆ

Facebook
Twitter
Telegram
WhatsApp

ಬೆಂಗಳೂರು, ಮೇ 25 : ಮಳೆ, ಗಾಳಿಯಿಂದ ಮರ ಬಿದ್ದು ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದ್ದರಿಂದ ಮೊಳಕಾಲ್ಮೂರು ತಾಲೂಕಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಮೇ 20ರಂದು ರಾತ್ರಿ ವಿದ್ಯುತ್ ಸಮಸ್ಯೆಯಾಗಿತ್ತು ಎಂದು ಬೆಸ್ಕಾಂ ಸ್ಪಷ್ಟನೆ ನೀಡಿದೆ.

ಕಳೆದ ಮೇ 20ರ ಸಂಜೆ  ಸುರಿದ ಭಾರಿ ಮಳೆಯಿಂದಾಗಿ, 66/11 ಕೆ.ವಿ ಹಾನಗಲ್ ವಿದ್ಯುತ್ ವಿತರಣಾ ಕೇಂದ್ರದಿಂದ ಪ್ರವಹಿಸುವ ಎಫ್-2 ಮೊಳಕಾಲ್ಮೂರು ಫೀಡರ್ 11 ಕೆ.ವಿ ಮಾರ್ಗದ ಮೇಲೆ ಮರದ ರೆಂಬೆ ಬಿದ್ದು, ಮಧ್ಯರಾತ್ರಿ 12 ಗಂಟೆಗೆ ಫೀಡರ್ ಓ.ಸಿ.ಆರ್ ರಿಲೇ ಮೇಲೆ ಟ್ರಿಪ್ ಆಗಿತ್ತು.

ಈ ಸಂದರ್ಭದಲ್ಲಿ ಆಸ್ಪತ್ರೆಯ
ಜನರೇಟರ್ ದುರಸ್ಥಿಗೆ ಬಂದಿತ್ತು. ಇದರ‌ ಮಧ್ಯೆಯೂ ಐಸಿಯು ಮತ್ತು ಇತರ ತುರ್ತು ಘಟಕಗಳಿಗೆ ಯುಪಿಎಸ್‌ನಿಂದ ವಿದ್ಯುತ್ ಪೂರೈಕೆ ಇತ್ತು ಎಂದು ಬೆಸ್ಕಾಂ ತಿಳಿಸಿದೆ.

ಮಧ್ಯರಾತ್ರಿ 12ಕ್ಕೆ  ಸ್ಥಗಿತಗೊಂಡಿದ್ದ ವಿದ್ಯುತ್ ಸಂಪರ್ಕವನ್ನು  ಬೆಸ್ಕಾ ಸಿಬ್ಬಂದಿ ತ್ವರಿತ ಕಾರ್ಯಾಚರಣೆಯಿಂದ ತಡರಾತ್ರಿ 1.17 ರೊಳಗೆ ವಿದ್ಯುತ್ ಮರುಪೂರೈಕೆ ಮಾಡಿದ್ದರು.

ಸಮಸ್ಯೆ ಕಾಣಿಸಿಕೊಂಡ ತಕ್ಷಣ ಬೆಸ್ಕಾಂ ಸಿಬ್ಬಂದಿ  ಕಾರ್ಯಾಚರಣೆಗೆ ಇಳಿದು, ವಿಳಂಬವಿಲ್ಲದೇ ವಿದ್ಯುತ್ ಮರುಪೂರೈಕೆಗೆ ಕ್ರಮ ಕೈಗೊಂಡಿದ್ದಾರೆ  ಎಂದು ಬೆಸ್ಕಾಂ ಸ್ಪಷ್ಟಪಡಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!