Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಶಿಕ್ಷಣದಲ್ಲಿ ರಂಗಭೂಮಿಯನ್ನು ಅಳವಡಿಸಿಕೊಂಡರೆ ವಿದ್ಯಾರ್ಥಿಗಳ ಮನಸ್ಸು ವಿಕಾಸಗೊಳ್ಳುತ್ತದೆ : ಡಾ.ಎಂ.ಎ.ಸುಧಾ

---Advertisement---

ಸುದ್ದಿಒನ್, ಹಿರಿಯೂರು, ಮೇ. 26  : ಬಿಇಡಿ ಪ್ರಶಿಕ್ಷಣಾರ್ಥಿಗಳು ವರ್ತಮಾನದ ಸಮಸ್ಯೆಗಳಿಗೆ ಜಾಗೃತಿ ಮೂಡಿಸುವ ಕಾರ್ಯವನ್ನು ನಡೆಸಬೇಕು. ಸಂಗೀತ, ನೃತ್ಯ, ಸಾಹಿತ್ಯ, ಸಂಭಾಷಣೆ, ನಿರೂಪಣೆ, ವಾಕ್ ಚಾತುರ್ಯ, ದೈಹಿಕ ನಿಲುವು ಮುಂತಾದ ಕೌಶಲಗಳಿಗೆ ರಂಗಭೂಮಿ ಸಹಕಾರಿಯಾಗಿದೆ. ರಂಗಭೂಮಿಯ ಮೂಲಕ ಪರಿಹಾರ ಕಂಡುಕೊಡುವ ನಾಟಕಗಳು ರಚನೆಯಾಗಬೇಕು. ಪಠ್ಯಾಧಾರಿತ ವಿಷಯಗಳಿಗೆ ಅನುಗುಣವಾಗಿ ನಾಟಕಗಳು ಪ್ರದರ್ಶನಗೊಂಡರೆ ನಾಟಕ ಪ್ರದರ್ಶನಗಳ ಉದ್ದೇಶ ಸಫಲವಾಗುತ್ತದೆ ಎಂದು ಗಿರೀಶ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ.ಎಂ.ಎ.ಸುಧಾ ಅಭಿಪ್ರಾಯಪಟ್ಟರು.

ನಗರದ ಶ್ರೀ ಗಿರೀಶ ವೀರಶೈವ ವಿದ್ಯಾವರ್ಧಕ ಸಂಘ, ಗಿರೀಶ ಶಿಕ್ಷಣ ಮಹಾವಿದ್ಯಾಲಯ, 2022-23ನೇ ಸಾಲಿನ ವಿದ್ಯಾರ್ಥಿ ಸಂಘ ಹಾಗೂ ಚಿತ್ರದುರ್ಗದ ರಂಗಸೌರಭ ಕಲಾ ಸಂಘ ಸಂಯುಕ್ತ ಆಶ್ರಯದಲ್ಲಿ ಗಿರೀಶ ಬಿಇಡಿ ಕಾಲೇಜು ಸಭಾಂಗಣದಲ್ಲಿ ದ್ವಿತೀಯ ಬಿ.ಇಡಿ ಪ್ರಶಿಕ್ಷಣಾರ್ಥಿಗಳಿಗೆ ಏರ್ಪಡಿಸಿದ್ದ ಶಿಕ್ಷಣದಲ್ಲಿ ರಂಗಕಲೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಕ್ಷಣದಲ್ಲಿ ರಂಗಭೂಮಿಯನ್ನು ಅಳವಡಿಸಿದರೆ ವಿದ್ಯಾರ್ಥಿಗಳ ಮನಸ್ಸು ವಿಕಾಸಗೊಳ್ಳುತ್ತದೆ. ಮಕ್ಕಳಲ್ಲಿ ಪಠ್ಯಕ್ರಮದ ಜ್ಞಾನವನ್ನು ವೃದ್ಧಿಸಲು ರಂಗಭೂಮಿ ಸಮರ್ಥ ಮಾದ್ಯಮವಾಗಿದೆ. ಪ್ರಶಿಕ್ಷಣಾರ್ಥಿಗಳು ರಂಗಭೂಮಿಯ ಸೂಕ್ಷ್ಮತೆಗಳನ್ನು ಅರಿತು ಪಾಠ ಬೋಧನೆಗೆ ತೊಡಗಬೇಕು ಎಂದರು.

ರಂಗಭೂಮಿ ತರಬೇತಿ ಕಾರ್ಯಾಗಾರದ ಸಂಪನ್ಮೂಲ ವ್ಯಕ್ತಿ ನೀನಾಸಂ ಪದವೀಧರ ಹಾಗೂ ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಮಾತನಾಡಿ ಸರ್ಕಾರಿ ಮತ್ತು ಸರ್ಕಾರೇತರ ಶಾಲಾ ಕಾಲೇಜುಗಳಿಗೆ ನಾಟಕ ಶಿಕ್ಷಕರನ್ನು ಸರ್ಕಾರ ನೇಮಕ ಮಾಡಿಕೊಳ್ಳಬೇಕು. ಪಠ್ಯಕ್ರಮದ ವಿಷಯಗಳನ್ನು ರಂಗಭೂಮಿಯ ಮೂಲಕ ಬೋಧಿಸಿದರೆ ಪಾಠಗಳು ಪರಿಣಾಮಕಾರಿಯಾಗಿ ಮಕ್ಕಳಲ್ಲಿ ನೆಲೆಗೊಳ್ಳುತ್ತದೆ. ತಾತ್ವಿಕ ಮತ್ತು ಪ್ರಾಯೋಗಿಕವಾಗಿ ರಂಗಭೂಮಿ ಅನುಕೂಲವಾಗುತ್ತದೆ ಎಂದರು.

ಉಪನ್ಯಾಸಕರಾದ ಡಿ.ವೇದ, ಹೆಚ್.ಮಂಜುನಾಥ, ನಯೀಮುದ್ದೀನ್, ಟಿ.ನಾಗರಾಜ, ಆರ್‍ಜೆ ವಿಜಯಶ್ರೀ, ಬಿ.ಪ್ರಮೋದ, ಬಿಸಿ ವನಿತ, ಪಿ.ವೀರಣ್ಣ ಹಾಗೂ ಕುಮಾರಿ ಮಂಜುಮುತ್ತು ಮುಖ್ಯಅತಿಥಿಗಳಾಗಿ ಉಪಸ್ಥಿತರಿದ್ದರು.
ಪ್ರಶಿಕ್ಷಣಾರ್ಥಿಗಳಾದ ಕವಿತಾ ಮತ್ತು ಸುಮಿತ್ರ ಪ್ರಾರ್ಥಿಸಿದರು, ಉಪನ್ಯಾಸಕ ಎಂ.ಲೋಕೇಶ್ ಸ್ವಾಗತಿದರು, ಹಿರಿಯ ಪ್ರಾಧ್ಯಾಪಕ ಎಸ್.ನಿಜಲಿಂಗಪ್ಪ ನಿರೂಪಿಸಿದರು.

ದ್ವಿತೀಯ ಬಿಇಡಿ ಪ್ರಶಿಕ್ಷಣಾರ್ಥಿಗಳು ರಂಗನಿರ್ದೇಶಕ ಕೆಪಿಎಂ ಗಣೇಶಯ್ಯ ಇವರ ಮಾರ್ಗದರ್ಶನದಲ್ಲಿ ವರದಕ್ಷಿಣೆ, ಭ್ರಷ್ಟಾಚಾರ, ಮೂಢನಂಬಿಕೆ ಹಾಗೂ ಮೊಬೈಲ್‍ನಿಂದಾಗುವ ದುಷ್ಪರಿಣಾಮಗಳು ಮುಂತಾದ ಕಿರುನಾಟಕಗಳ ಪ್ರದರ್ಶನ ನೀಡಿದರು. ಪ್ರಥಮ ಬಿಇಡಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment