ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಬೆಂಗಳೂರು: ಮಾಜಿ ಸಿಎಂ ಬಿಎಸದ ಯಡಿಯೂರಪ್ಪ ವಿರುದ್ಧ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ಆರೋಪಿಸಿ ದೂರು ನೀಡಿದ್ದ ಮಹಿಳೆ ಇಂದು ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಸಮಸ್ಯೆಯಿಂದ ಬಳಲುತ್ತಿದ್ದ ಮಮತಾ, ಖಾಸಗಿ ಆಸ್ಪತ್ರೆಯಲ್ಲಿ ಜೀವ ಬಿಟ್ಟಿದ್ದಾರೆ.
ದೂರುದಾರೆಗೆ ಉಸಿರಾಟದ ಸಮಸ್ಯೆ ಇತ್ತಂತೆ. ನಿನ್ನೆ ರಾತ್ರಿ ಸುಮಾರು 8.30 ರ ಸಮಯಕ್ಕೆ ಹುಳಿಮಾವು ಬಳಿ ಇರುವ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ವೈದ್ಯರು ಕೂಡ ತಕ್ಷಣಕ್ಕೆ ತಪಾಸಣೆ ಮಾಡಿದ್ದಾರೆ. ಅದಾಗಲೇ ಸ್ಯಾಚುರೇಷನದ ಲೆವೆಲ್ ಲೋ ಆಗಿತ್ತಂತೆ. ಕೂಡಲೇ ವೆಂಟಿಲೇಟರ್ ಗೆ ಶಿಫ್ಟ್ ಮಾಡಿ, ಚಿಕಿತ್ಸೆ ಶುರು ಮಾಡಿದ್ದಾರೆ. ಆದರೆ ಅರ್ಜೆಂಟ್ ಮೋಷನ್ ಹೋಗಬೇಕು ಎಂದಿದ್ದಾರೆ. ಚಿಕಿತ್ಸೆ ನೀಡುವ ಮುನ್ನವೇ ನಿತ್ರಾಣಗೊಂಡು ಸಾವನ್ನಪ್ಪಿದ್ದಾರೆ.
ಕಳೆಸ ಕೆಲವು ದಿನಗಳ ಹಿಂದೆ ಸಾವನ್ನಪ್ಪಿದ ಮಹಿಳೆ ಪೊಲೀಸರುಗೆ ಬಿಎಸ್ ಯಡಿಯೂರಪ್ಪ ವಿರುದ್ಧ ಲೈಂಹಿಕ ಕಿರುಕುಳದ ದೂರು ನೀಡಿದ್ದರು. ತಾಯಿ ಮಗಳು, ಯಡಿಯೂರಪ್ಪ ಅವರ ಮನೆಗೆ ಹೋದಾಗ ಅತ್ಯಾಚಾರ ಪ್ರಕರಣದಲ್ಲಿ ನಮಗೆ ಅನ್ಯಾಯವಾಗಿದೆ, ನಮಗೆ ನ್ಯಾಯ ದೊರಕಿಸಿಕೊಡಿ ಎಂದು ಕೇಳಲು ಹೋಗಿದ್ದೆರು. ಈ ವೇಳೆ ಬಿಎಸ್ವೈ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದರು ಎಂದು ದೂರಿನಲ್ಲಿ ತಿಳಿಸಿದ್ದರು. ಮಹಿಳೆಯ ದೂರನ್ನು ಆಧರಿಸಿ, ಯಡಿಯೂರಪ್ಪ ವಿರುದ್ಧ ಪೋಕ್ಸೋ ಕೇಸ್ ಹಾಗೂ ಐಪಿಸಿ ಸೆಕ್ಷನ್ 354(A) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಸದಾಶಿವನಗರದ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿತ್ತು. ಯಡಿಯೂರಪ್ಪ ನಿವಾಸದಲ್ಲಿ ಈ ಘಟನೆ ನಡೆದಿದೆ ಎಂದು ಎಫ್ಐಆರ್ ಕೂಡ ದಾಖಲಾಗಿತ್ತು. ಇದೀಗ ಆ ಮಹಿಳೆ ಅನಾರೋಗ್ಯದ ಸಮಸ್ಯೆಯಿಂದ ಸಾವನ್ನಪ್ಪಿದ್ದಾರೆ.

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್