Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಅರವಿಂದ್ ಕೇಜ್ರಿವಾಲ್ ಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆ :  ಮಧ್ಯಂತರ ಜಾಮೀನು ವಿಚಾರಣೆಗೆ ನಿರಾಕರಣೆ !

Facebook
Twitter
Telegram
WhatsApp

 

ಸುದ್ದಿಒನ್, ನವದೆಹಲಿ, ಮೇ. 28 : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸುಪ್ರೀಂ ಕೋರ್ಟ್ ನಲ್ಲಿ ಹಿನ್ನಡೆಯಾಗಿದೆ. ಆರೋಗ್ಯ ತಪಾಸಣೆಗಾಗಿ ಏಳು ದಿನಗಳ ಕಾಲ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಕೋರಿ ಕೇಜ್ರಿವಾಲ್ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ನ್ಯಾಯಮೂರ್ತಿ ಎಎಸ್ ಓಕ್ ನೇತೃತ್ವದ ಪೀಠವು ತಕ್ಷಣವೇ ಮಧ್ಯಂತರ ಜಾಮೀನು ಅರ್ಜಿಯನ್ನು ಆಲಿಸಲು ನಿರಾಕರಿಸಿತು. ಅಷ್ಟೇ ಅಲ್ಲ, ತಡವಾಗಿ ಅರ್ಜಿ ಸಲ್ಲಿಸಿದ್ದನ್ನೂ ಪೀಠ ಪ್ರಶ್ನಿಸಿದೆ.

ದೆಹಲಿ ಮದ್ಯ ಪ್ರಕರಣದಲ್ಲಿ ಮಧ್ಯಂತರ ಜಾಮೀನು ವಿಸ್ತರಿಸುವಂತೆ ಕೋರಿ ದೆಹಲಿ ಸಿಎಂ ಕೇಜ್ರಿವಾಲ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಸಾರ್ವತ್ರಿಕ ಚುನಾವಣೆ ಹಾಗೂ ಪ್ರಚಾರದ ಹಿನ್ನೆಲೆಯಲ್ಲಿ ಕೇಜ್ರಿವಾಲ್ ಗೆ ಜೂನ್ 1ರವರೆಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದ್ದ ಸುಪ್ರೀಂ ಕೋರ್ಟ್, ಜೂನ್ 2ರಂದು ಮತ್ತೆ ಜೈಲಿಗೆ ತೆರಳುವಂತೆ ಸೂಚಿಸಿದೆ.

ಇದರೊಂದಿಗೆ ಕೇಜ್ರಿವಾಲ್ ಅವರ ಜಾಮೀನು ನಾಲ್ಕು ದಿನಗಳಲ್ಲಿ ಮುಕ್ತಾಯವಾಗಲಿದೆ. ಆದರೆ ಸದ್ಯ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದೆ. ಇನ್ನೂ ಕೆಲವು ಪರೀಕ್ಷೆಗಳನ್ನು ಮಾಡಬೇಕಾಗಿದೆ ಎಂದು ವೈದ್ಯರ ತಂಡ ಹೇಳಿರುವುದಾಗಿ ಮನವಿಯಲ್ಲಿ ಉಲ್ಲೇಖಿಸಲಾಗಿದೆ.
ಈ ಆದೇಶದಲ್ಲಿ ಕೇಜ್ರಿವಾಲ್ ಅವರು ಮಧ್ಯಂತರ ಜಾಮೀನನ್ನು ಇನ್ನೂ 7 ದಿನಗಳವರೆಗೆ ವಿಸ್ತರಿಸುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದರು. ಆದರೆ, ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಎಸ್ ಓಕ್ ನೇತೃತ್ವದ ಪೀಠ ತಿರಸ್ಕರಿಸಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ನಾವೂ ಕೇಳಿದಾಗ ಅಕ್ಕಿ ಇಲ್ಲ ಅಂದ್ರು… ಚುನಾವಣೆಗಾಗಿ ಅಕ್ಕಿ‌ ಕೊಟ್ಟು.. ಈಗ ನಿಲ್ಲಿಸಿದರು : ಕೇಂದ್ರ ಸರ್ಕಾರದ ವಿರುದ್ದ ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕೇಂದ್ರ ಸರ್ಕಾರ ಇತ್ತಿಚೆಗಷ್ಟೇ ಭಾರತ್ ಎಂಬ ಹೆಸರಿನಲ್ಲಿ ಕಡಿಮೆ ಬೆಲೆಯಲ್ಲಿ ಅಕ್ಕಿಯನ್ನು ದೇಶದಾದ್ಯಂತ ವಿತರಣೆ ಮಾಡಿತ್ತು. ಈಗ ಅಕ್ಕಿಯನ್ನು ನಿಲ್ಲಿಸಿದೆ. ಇದು ಚುನಾವಣೆಗಾಗಿ ಮಾಡಿದ ಕಾರ್ಯ ಎಂದು ಕೇಂದ್ರ ಸರ್ಕಾರದ ಮೇಲೆ ಸಿಎಂ

ಮಗನ ಜೊತೆ ಕಪ್ ಗೆದ್ದ ಖುಷಿ ಹಂಚಿಕೊಂಡ ಹಾರ್ದಿಕ್ ಪಾಂಡ್ಯ : ಪತ್ನಿಯ ಸುಳಿವಿಲ್ಲ.. ಡಿವೋರ್ಸ್ ಕನ್ಫರ್ಮ್..?

ನಮ್ಮ ಟೀಂ ಇಂಡಿಯಾ ವಿಶ್ವಕಪ್ ತಮ್ಮದಾಗಿಸಿಕೊಂಡು ಬಹಳ ಸಂಭ್ರಮದಲ್ಲಿದೆ. ಗೆದ್ದ ಮರುದಿನವೇ ತವರಿಗೆ ಬರಲು ಆಗದೆ ಹೋದರು, ಈಗ ಬಂದಿರುವ ಟೀಂ ಇಂಡಿಯಾ ಸದಸ್ಯರನ್ನು ಎಲ್ಲರೂ ಕೊಂಡಾಡಿದ್ದಾರೆ. ಈಗಾಗಲೇ ಆಟಗಾರರ ಜೊತೆಗೆ ವಿಶ್ವಕಪ್ ಮೆರವಣಿಗೆಯೂ

ಜುಲೈ 21 ರಂದು ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 91 ನೇ ಸರ್ವ ಸದಸ್ಯರ ಸಭೆ

ಸುದ್ದಿಒನ್, ಚಿತ್ರದುರ್ಗ, ಜುಲೈ. 05 : ನಗರದ ಪ್ರತಿಷ್ಠಿತ ಶ್ರೀ ಕನ್ಯಕಾಪರಮೇಶ್ವರಿ ಸೌಹಾರ್ದ ಸಹಕಾರಿ ಸಂಘ ನಿಯಮಿತದ 2023-24ನೇ ಸಾಲಿನ 91 ನೇ ಸರ್ವಸದಸ್ಯರ ಸಭೆಯನ್ನು ಜುಲೈ 21 ರ ಭಾನುವಾರ ಬೆಳಗ್ಗೆ 10:00

error: Content is protected !!