Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ವಾಪಾಸ್ ಬರುತ್ತಿರುವ ಪ್ರಜ್ವಲ್ ರೇವಣ್ಣ : ಏರ್ಪೋರ್ಟ್ ನಲ್ಲೇ ಎಸ್ಐಟಿ ಠಿಕಾಣಿ : ಮಧ್ಯರಾತ್ರಿಯೇ ಅರೆಸ್ಟ್ ಆಗ್ತಾರಾ..?

Facebook
Twitter
Telegram
WhatsApp

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಕಳೆದ ತಿಂಗಳು ಎಸ್ಕೇಪ್ ಆಗಿದ್ದರು‌. ಎಸ್ಐಟಿ ತನಿಖೆ ನಡೆಸಲು ಎಷ್ಟು ಸಲ ನೋಟೀಸ್ ನೀಡಿದರು ಅದಕ್ಕೆ ಜಪ್ಪಯ್ಯ ಎಂದಿರಲಿಲ್ಲ. ಇದೀಗ ಮೇ 30 ಅಂದರೆ ನಾಳೆ ರಾಜ್ಯಕ್ಕೆ ಬಂದು ಎಸ್ಐಟಿ ಮುಂದೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ. ಇದೀಗ ವಿಡಿಯೋ ಬಿಟ್ಟ ಬೆನ್ನಲ್ಲೇ ಎಸ್ಐಟಿ ಅಲರ್ಟ್ ಆಗಿದೆ.

ಪ್ರಜ್ವಲ್ ರೇವಣ್ಣ ಇಷ್ಟು ದಿನ ತಲೆಮರೆಸಿಕೊಂಡಿದ್ದಾರೆ. ಈಗ ಬಂದು ದೇಶದ ಒಳಗೆ ತಲೆ‌ಮರೆಸಿಕೊಂಡರೆ ಎಂಬ ಪ್ರಶ್ನೆ ಎಸ್ಐಟಿ ಅಧಿಕಾರಿಗಳದ್ದು. ಸದ್ಯ ಅಲರ್ಟ್ ಆಗಿರುವ ಎಸ್ಐಟಿ ಅಧಿಕಾರಿಗಳು ಏರ್ಪೋರ್ಟ್ ನಲ್ಲಿಯೇ ಕಾಯುತ್ತಿದ್ದಾರೆ. ಲುಫ್ತಾನ್ಸಾ ಏರ್ಲೈನ್ಸ್ ನಲ್ಲಿ ಪ್ರಜ್ವಲ್ ರೇವಣ್ಣ ಟಿಕೆಟ್ ಕಾಯ್ದಿರಿಸಿದ್ದಾರೆ‌. ಈಗಾಗಲೇ ಎರಡು ಬಾರಿ ಟಿಕೆಟ್ ಬುಕ್ ಮಾಡಿ ಪ್ರಜ್ವಲ್ ರೇವಣ್ಣ ಕ್ಯಾನ್ಸಲ್ ಮಾಡಿದ್ದರು. ಹೀಗಾಗಿಯೇ ಎಸ್ಐಟಿ ಅಧಿಕಾರಿಗಳು ಏರ್ಪೋರ್ಟ್ ನಲ್ಲಿಯೇ ಬೀಡು ಬಿಟ್ಟಿದ್ದಾರೆ.

ಪ್ರಜ್ವಲ್ ರೇವಣ್ಣ ಬಂದ ಕೂಡಲೇ ಎಸ್ಐಟಿ ತನ್ನ ವಶಕ್ಜೆ ಪಡೆದುಕೊಳ್ಳಲಿದೆ. ಬಳಿಕ ಮೆಡಿಕಲ್ ಟೆಸ್ಟ್ ಮಾಡಿಸಿ, ವಿಚಾರಣೆ ನಡೆಸಲಿದೆ. ಈಗಾಗಲೇ ಸಾಕಷ್ಟು ಹೆಣ್ಣು ಮಕ್ಕಳು ದೂರು ದಾಖಲಿಸಿದ್ದಾರೆ. ಪ್ರಜ್ವಲ್ ಅರೆಸ್ಟ್ ಆದ ಮೇಲೆ ಅವರೆಲ್ಲರ ಹೇಳಿಕೆಯನ್ನು ಮತ್ತೆ ಪಡೆಯಲಿದೆ. ಇಷ್ಟು ದಿನ ಎಸ್ಐಟಿ ಅಧಿಕಾರಿಗಳಿಗೂ ಸಿಗದೆ ತಲೆಮರೆಸಿಕೊಂಡಿದ್ದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ದೌರ್ಜನ್ಯದ ವಿಡಿಯೋ ಕೇಸಿನ ತನಿಖೆ ಇನ್ಮುಂದೆ ಚುರುಕುಗೊಳ್ಳಲಿದೆ. ಈ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಜೈಲು ಪಾಲಾಗ್ತಾರಾ ಅಥವಾ ಜಾಮೀನು ತೆಗೆದುಕೊಂಡು ಹೊರಗೆ ಇರುತ್ತರಾ ನೋಡಬೇಕಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಹಗರಣವನ್ನು ಗಮನಕ್ಕೆ ತಂದಿದ್ದ ಡಿಸಿ ಸೇರಿದಂತೆ 21 ಐಎಎಸ್ ಅಧಿಕಾರಿಗಳ ವರ್ಗಾವಣೆ..!

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ಸದ್ಯ ರಾಜ್ಯದಲ್ಲಿಯೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಮೂಡಾ ಹಗರದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

error: Content is protected !!