Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸುಮಲತಾ ಅಜ್ಜಿ ಆಗ್ತಾ ಇದಾರಾ..? ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿ ಮಗ-ಸೊಸೆ ಬಗ್ಗೆ ಹೇಳಿದ್ದೇನು..?

Facebook
Twitter
Telegram
WhatsApp

ಇಂದು ರೆಬಲ್ ಸ್ಟಾರ್ ಅಂಬರೀಶ್ ಅವರ 72ನೇ ವರ್ಷದ ಹುಟ್ಟುಹಬ್ಬ. ಅವರು ದೈಹಿಕವಾಗಿ ಜೊತೆಗೆ ಇದ್ದಿದ್ದರೆ ಈ ಸಂಭ್ರಮ ಬೇರೆ ರೀತಿಯಾಗಿಯೇ ಇರುತ್ತಾ ಇತ್ತು. ಆದರೆ ಅವರಿಲ್ಲದ ಹುಟ್ಟುಹಬ್ಬವನ್ನು ಸಮಾಧಿಗೆ ಪೂಜೆ ಸಲ್ಲಿಸುವ ಮೂಲಕ ಆಚರಿಸಿದ್ದಾರೆ.

ಸ್ಯಾಂಡಲ್ ವುಡ್ ತಾರೆಯರು ತಮ್ಮ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕುವ ಮೂಲಕ ಅಂಬಿಗೆ ವಿಶ್ ಮಾಡುತ್ತಿದ್ದಾರೆ. ದರ್ಶನ್ ಸದಾ ಅಪ್ಪಾಜಿ ಸ್ಥಾನದಲ್ಲಿಯೇ ಅವರನ್ನು ನೋಡುವುದು. ಬುಲ್ ಬುಲ್ ಸಿನಿಮಾದಲ್ಲಿ ಸೀನಿಯರ್-ಜೂನಿಯರ್ ಕಾಂಬಿನೇಷನ್ ಹಿಟ್ ಆಗಿತ್ತು. ಅದೇ ಫೋಟೋ ಹಾಕಿ ವಿಶ್ ಮಾಡಿದ್ದಾರೆ. ಇನ್ನು ಬೆಳಗ್ಗೆನೆ ಕುಟುಂಬಸ್ಥರು ಅಂಬಿ ಸಮಾಧಿ ಬಳಿ ಹೋಗಿ ಪೂಜೆ ಸಲ್ಲಿಸಿದ್ದಾರೆ. ಮಗ – ಸೊಸೆ ಜೊತೆಗೆ ಹೋಗಿ ಸುಮಲತಾ ಅವರು ಪೂಜೆ ಮಾಡಿ ಬಂದಿದ್ದಾರೆ. ಅಂಬಿ ಸಮಾಧಿ ಹೂಗಳಿಂದ ಅಲಂಕಾರಗೊಂಡಿದೆ.

ಈ ವೇಳೆ ಸುಮಲತಾ ಅವರಿಗೆ ಮಾಧ್ಯಮದವರು ಹಲವು ಪ್ರಶ್ನೆಗಳನ್ನು ಕೇಳಿದ್ದಾರೆ. ಪ್ರಹ್ವಲ್ ರೇವಣ್ಣ ಅವರ ಪೆನ್ ಡ್ರೈವ್ ವಿಚಾರ ಕೇಳಿದಾಗ, ಇಲ್ಲಿ ಅದನ್ನು ಮಾತನಾಡುವುದಲ್ಲ. ಬೇರೆ ಕಾರ್ಯಕ್ಕೆ ಬಂದಿದ್ದೇವೆ ಎಂದಿದ್ದಾರೆ. ಇನ್ನು ಮಗ ಸೊಸೆ ಏನಾದ್ರೂ ಗುಡ್ ನ್ಯೂಸ್ ಕೊಟ್ಟಿದ್ದಾರಾ..? ನೀವೂ ಅಜ್ಜಿ ಆಗುತ್ತಾ ಇದ್ದೀರಾ ಎಂದು ಕೇಳಿದ ಪ್ರಶ್ನೆಗೆ ಸಮಯ ಬಂದಾಗ ನಾನೇ ನಿಮಗೆ ಹೇಳುತ್ತೇನೆ ಎಂದಿದ್ದಾರೆ.

ಅವಿವಾ ಬಿದಪ್ಪ ಹಾಗೂ ಅಭಿಷೇಕ್ ಅಂಬರೀಶ್ ಕಳೆದ ವರ್ಷವಷ್ಟೇ ಮದುವೆಯಾಗಿದ್ದಾರೆ. ಇಬ್ಬರು ಹಲವು ವರ್ಷಗಳಿಂದ ಪ್ರೀತಿ ಮಾಡುತ್ತಿದ್ದರು. ಮನೆಯವರ ಒಪ್ಪಿಗೆ ಮೇರೆಗೆ ಅದ್ದೂರಿಯಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ

ಈ ರಾಶಿಯವರಿಗೆ ಅಷ್ಠಮ ಸ್ಥಾನದ ಶನಿಯಿಂದ ದಂಪತಿಗಳಿಗೆ ಕುಟುಂಬ ಕಲಹ, ಹಣಕಾಸಿನ ತೊಂದರೆ, ಉದ್ಯೋಗದಲ್ಲಿ ಕಿರಿ ಕಿರಿ, ಪ್ರೇಮಿಗಳಿಗೆ ವಿರಸ, ಶನಿವಾರ- ರಾಶಿ ಭವಿಷ್ಯ ಜುಲೈ-6,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

error: Content is protected !!