Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ದೆಹಲಿಯಲ್ಲಿ ಬೆಂಕಿಯಂತ ಬಿಸಿಲು : ಸಾರ್ವಕಾಲಿಕ ಗರಿಷ್ಠ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲು

---Advertisement---

 

ಸುದ್ದಿಒನ್, ನವದೆಹಲಿ, ಮೇ. 29 : ನವದೆಹಲಿಯಲ್ಲಿ ಸಾರ್ವಕಾಲಿಕ ಗರಿಷ್ಠ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಉತ್ತರ ಭಾರತದಲ್ಲಿ ಜನರು ಬಿಸಿಲಿಗೆ ತತ್ತರಿಸುತ್ತಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಇತಿಹಾಸದಲ್ಲೇ ಗರಿಷ್ಠ ತಾಪಮಾನ ದಾಖಲಾಗಿದೆ.

ದೆಹಲಿಯ ಮುಂಗೇಶಪುರದಲ್ಲಿ ದಾಖಲೆಯ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಒಂದೆಡೆ ದಕ್ಷಿಣ ಭಾರತದಲ್ಲಿ ಅಲ್ಲಲ್ಲಿ ಮಳೆಯಾಗುತ್ತಿದೆ. ಸ್ವಾಗತಿಸುತ್ತಿದೆ. ಉತ್ತರ ಭಾರತದಲ್ಲಿ ಬಿಸಿಲಿನ ಝಳ ವಿಪರೀತ ಹೆಚ್ಚಾಗಿದೆ. ಅನಿರೀಕ್ಷಿತವಾಗಿ, ನಿರೀಕ್ಷೆಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. ಸೂರ್ಯನು ದೆಹಲಿ ನಗರದ ಮೇಲೆ ಬೆಂಕಿಯ ಮಳೆ ಸುರಿಸುತ್ತಿದ್ದಾನೆ. ಬಿಸಿಲಿನ ತೀವ್ರತೆಯಿಂದ ದೆಹಲಿ ಹಾಗೂ ಉತ್ತರ ರಾಜ್ಯಗಳ ಜನರು ನಾನಾ ಸಮಸ್ಯೆ ಎದುರಿಸುತ್ತಿದ್ದಾರೆ. ಇನ್ನೊಂದೆಡೆ ದೆಹಲಿಯಲ್ಲಿ ನೀರು ಪೋಲು ಮಾಡುವವರಿಗೆ ಸಾವಿರಾರು ರೂಪಾಯಿ ದಂಡ ವಿಧಿಸಲಾಗುತ್ತಿದೆ.

ಬಿಸಿಲಿನ ತೀವ್ರತೆ ಹೆಚ್ಚಾಗಿರುವುದರಿಂದ ದೆಹಲಿಯಲ್ಲಿ ವಿದ್ಯುತ್ ಬೇಡಿಕೆ ಹೆಚ್ಚಾಗಿದೆ. 8,302 ಮೆಗಾವ್ಯಾಟ್ ವಿದ್ಯುತ್ ಬಳಕೆಯಾಗಿದೆ ಎಂದು ವಿದ್ಯುತ್ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಹವಾಮಾನ ಬದಲಾವಣೆಯಿಂದಾಗಿ, ಅನೇಕ ನಗರಗಳಲ್ಲಿ ಶಾಲೆಗಳನ್ನು ಮುಚ್ಚಲು ಒತ್ತಾಯಿಸುತ್ತಿದ್ದಾರೆ ಮತ್ತು ಬೇಸಿಗೆ ರಜೆಯನ್ನು ಇನ್ನಷ್ಟು ದಿನಗಳವರೆಗೆ ವಿಸ್ತರಿಸಬೇಕೆಂದು ಒತ್ತಾಯಿಸುತ್ತಿದ್ದಾರೆ.

ಹೊರಗೆ ಕೆಲಸ ಮಾಡುವ ಜನರು ಸೂರ್ಯನ ಬಿಸಿಲಿಗೆ ತತ್ತರಿಸಿ ಹೋಗಿದ್ದಾರೆ. ಇಂದು ದಾಖಲಾದ ಬಿಸಿಲಿನ ಶಾಖವು ಉತ್ತರ ಭಾರತದ ರಾಜಸ್ಥಾನದ ಫಲೋಡಿ ಪಟ್ಟಣದಲ್ಲಿ 2016 ರಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆಯ ಶಾಖವನ್ನು ಮೀರಿಸಿದೆ. ಈ ಹಿಂದೆ 51 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿತ್ತು ಎಂದು ಹವಾಮಾನ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಬಿಸಿಲ ತಾಪದಿಂದ ಮೂಕ ಪ್ರಾಣಿಗಳ ಪಾಡು ಹೇಳತೀರದು. ಒಂದೆಡೆ ವಿಪರೀತ ಬಿಸಿಲು ಮತ್ತೊಂದೆಡೆ ಬಾಯಾರಿಕೆ ಮತ್ತು ಜ್ವರದಿಂದ ಪ್ರಾಣಿಗಳು ಹಲವಾರು ಸಮಸ್ಯೆಗಳಿವೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment