Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಜ್ವಲ್ ರೇವಣ್ಣ ಅರೆಸ್ಟ್ ಮಾಡಿದ ಎಸ್ಐಟಿ ಮಹಿಳಾ ಅಧಿಕಾರಿಗಳು..!

Facebook
Twitter
Telegram
WhatsApp

ಬೆಂಗಳೂರು: ಅಶ್ಲೀಲ ವಿಡಿಯೋಗಳು ಎಲ್ಲೆಡೆ ವೈರಲ್ ಆಗುತ್ತಿದ್ದಂತೆ ಊರು ಬಿಟ್ಟು ವಿದೇಶಕ್ಕೆ ಸೇರಿದ್ದ ಪ್ರಜ್ವಲ್ ರೇವಣ್ಣ ಇಂದು ಮಧ್ಯರಾತ್ರಿ ಬೆಂಗಳೂರಿಗೆ ಬಂದಿದ್ದಾರೆ. ಬೆಂಗಳೂರು ಏರ್ಪೋರ್ಟ್ ನಲ್ಲಿಯೇ ಬೀಡು ಬಿಟ್ಟಿದ್ದ ಎಸ್ಐಟಿ ಅಧಿಕಾರಿಗಳು ಬಂದ ಕೂಡಲೇ ವಶಕ್ಕೆ ಪಡೆದಿದ್ದಾರೆ. ಅದರಲ್ಲೂ ಎಸ್ಐಟಿಯ ಮಹಿಳಾ ಅಧಿಕಾರಿಗಳೇ ವಶಕ್ಕೆ ಪಡೆದಿದ್ದಾರೆ.

ಸುಮನ್ ಕರ್ನೇಕರ್ ಅವರ ಟೀಂ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಿದೆ. ಬಂಧಿಸಿದ ಬಳಿಕ ಎಸ್ಐಟಿ ಕಚೇರಿಗೆ ಕರೆದೊಯ್ದಿದ್ದಾರೆ. ಪ್ರಜ್ವಲ್ ರೇವಣ್ಣ ಬಂಧನಕ್ಕೆ ಮಹಿಳೆಯರನ್ನೇ ನೇಮಿಸಿದ್ದರ ಹಿಂದೆಯೂ ಒಂದು ಉದ್ದೇಶವಿದೆ. ಆ ಕಾರಣಕ್ಕಾಗಿಯೇ ಮಹಿಳಾ ಅಧಿಕಾರಿಗಳೇ ಬಂಧಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಮೇಲೆ ಅತ್ಯಾಚಾರದಂತಹ ಆರೋಪ ಬಂದಿರುವುದು. ಒಂದಲ್ಲ ಎರಡಲ್ಲ ಸಾವಿರಾರು ಹುಡುಗಿಯರ ವಿಡಿಯೋ ಲೀಕ್ ಆಗಿರುವುದು. ಮಹಿಳೆಯರ ಕೇಸ್ ಆಗಿರುವ ಕಾರಣ ಹೆಣ್ಣು‌ಮಕ್ಕಳಿಗೆ ಮುಜುಗರವಾಗಬಾರದು ಎಂಬ ಕಾರಣಕ್ಕೆ ತನಿಖೆಗೆ ಮಹಿಳಾ ಅಧಿಕಾರಿಗಳನ್ನೇ ನೇಮಕ ಮಾಡಲಾಗಿರುತ್ತದೆ. ಹೀಗಾಗಿ ಅರೆಸ್ಟ್ ಮಾಡುವುದಕ್ಕೂ ಮಹಿಳಾ ಅಧಿಕಾರಿಗಳೇ ಹೋಗಿದ್ದಾರೆ.

ಪ್ರಜ್ವಲ್ ರೇವಣ್ಣ ಸುಮಾರು 34 ದಿನಗಳ‌ ಕಾಲ ಎಸ್ಐಟಿ ಅಧಿಕಾರಿಗಳನ್ನು ಆಟವಾಡಿಸಿದ್ದಾರೆ. ವಿದೇಶದಲ್ಲಿದ್ದುಕೊಂಡೇ ಎಲ್ಲಾ ಮಾಹಿತಿಯನ್ನು ಪಡೆದಿದ್ದಾರೆ. ಕಡೆಗೂ ಬೆಂಗಳೂರಿಗೆ ಬರುವ ಮನಸ್ಸು ಮಾಡಿದ್ದು, ಮಧ್ಯರಾತ್ರಿ ತಲುಪಿದ್ದಾರೆ. ಗುರುತರ ಆರೋಪ ಹೊತ್ತು ಜರ್ಮನಿಯಲ್ಲಿ ಝಾಂಡಾ ಊರಿದ್ದ ಸಂಸದ ಪ್ರಜ್ವಲ್​ ಲುಫ್ತಾನ್ಸಾ ಏರ್​ಲೈನ್ಸ್​ನ LH764 ವಿಮಾನದಲ್ಲಿ ತಡರಾತ್ರಿ 12.46ಕ್ಕೆ ಮ್ಯೂನಿಕ್‌ನಿಂದ ಬೆಂಗಳೂರಿನ ಕೆಂಪೇಗೌಡ ಏರ್​ಪೋರ್ಟ್​ಗೆ ಬಂದಿಳಿದ್ರು. ಇನ್ನು ಪ್ರಜ್ವಲ್​ ಇದ್ದ ವಿಮಾನ ಲ್ಯಾಂಡ್​ ಆಗುತ್ತಿದ್ದಂತೆ ನೇರವಾಗಿ ವಿಮಾನದ ಬಳಿ ತೆರಳಿದ ಸಿಐಎಸ್​ಎಫ್​ ಅಧಿಕಾರಿಗಳು ಪ್ರಜ್ವಲ್​ ರೇವಣ್ಣರನ್ನು ವಶಕ್ಕೆ ಪಡೆದು ಎಮಿಗ್ರೇಷನ್​ ಬಳಿಗೆ ಕರೆತಂದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೇವಲ ಗಂಟು ಮಾಡಿಕೊಳ್ಳುಲು ಶಾಸಕರಾಗಿದ್ದರೆಯೇ ವಿನಃ ಅಭಿವೃದ್ದಿಗಾಗಿ ಅಲ್ಲ : ಮಾಜಿ ಶಾಸಕ ಎಸ್.ತಿಪ್ಪೇಸ್ವಾಮಿ ಆರೋಪ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಅಕ್ಟೋಬರ್. 05 : ಮೊಳಕಾಲ್ಮೂರು ಕ್ಷೇತ್ರದಲ್ಲಿ ‌ಮರಳು ಮಾಫಿಯಾ, ಭೂ ಕಬಳಿಕೆ, ಭ್ರಷ್ಟಾಚಾರ ತುಂಬಿ ತುಳುಕುತ್ತಿದೆ.

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

error: Content is protected !!