Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

6 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಪ್ರಜ್ವಲ್ ರೇವಣ್ಣ : ಹೇಗಿರಲಿದೆ ತನಿಖೆ..?

---Advertisement---

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಎಸ್ಐಟಿ ಅಧಿಕಾರಿಗಳಿಗೆ ಸಿಗದೆ, ವಿದೇಶದಲ್ಲಿದ್ದ ಪ್ರಜ್ವಲ್ ರೇವಣ್ಣ ಇದೀಗ ಎಸ್ಐಟಿ ಅಧಿಕಾರಿಗಳ ವಶಕ್ಕೆ ಸಿಲುಕಿದ್ದಾರೆ. ಇಂದು ಮಧ್ಯರಾತ್ರಿಯೇ ವಶಕ್ಕೆ ಪಡೆದ ಎಸ್ಐಟಿ, ಇಂದು ಕೋರ್ಟ್ ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಆರು ದಿನಗಳ ಕಾಲ ಎಸ್ಐಟಿಗೆ ವಶಕ್ಕೆ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ಕಸ್ಟಡಿಗೆ ನೀಡಿದ್ದು, ಪೊಲೀಸರು ಕಚೇರಿಗೆ ಕರೆದೊಯ್ದಿದ್ದಾರೆ.

ಪೆನ್ ಡ್ರೈವ್ ಪ್ರಕರಣ ದೇಶದಾದ್ಯಂತ ಸದ್ದು ಮಾಡಿದಾಗಲೂ ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡುವುದಕ್ಕೆ ಆಗಿಲ್ಲ. ಈಗ ನ್ಯಾಯಾಲಯವೇ ಕಸ್ಟಡಿಗೆ ನೀಡಿರುವ ಕಾರಣ ಸಂಪೂರ್ಣವಾಗಿ ತನಿಖೆ ಮಾಡಲಿದೆ. ತನಿಖೆಗೆ ಪ್ರಜ್ವಲ್ ರೇವಣ್ಣ ಹೇಗೆ ಸಹಕರಿಸುತ್ತಾರೆ ಎಂಬುದು ಕೂಡ ಬಹಳ ಮುಖ್ಯವಾಗುತ್ತದೆ. ಪ್ರಮುಖ ವಿಚಾರಗಳನ್ನು ಕೇಳುವ ಮೂಲಕ ವಿಚಾರ ಹಲವು ಆಯಾಮದಲ್ಲಿ ತನಿಖೆ ನಡೆಸಲಿದೆ.

ಸಂತ್ರಸ್ತ ಮಹಿಳೆಯರ ವಿಡಿಯೋ ಮಾಡಿದ್ದೇ ದೊಡ್ಡ ತಪ್ಪಾಗಿದೆ. ಆ ವಿಡಿಯೋಗಳೇ ಈಗ ದೇಶದಾದ್ಯಂತ ರಾದ್ಧಾಂತ ಶುರು ಮಾಡಿದೆ. ವಿದೇಶದಲ್ಲಿ ಉಳಿದುಕೊಂಡಿದ್ದಕ್ಕೆ ಸಹಾಯ ಮಾಡಿದವರು ಯಾರು..? ಇಲ್ಲಿಂದ ವಿದೇಶಕ್ಕೆ ಹೋಗಲು ಸಹಾಯ ಮಾಡಿದವರು ಯಾರು..? ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಪ್ರತಿದಿನ ಬೆಳಗ್ಗೆ 9.30ರಿಂದ 10.30ರ ತನಕ ವಕೀಲರ ಭೇಟಿಗೆ ಕಾಲಾವಕಾಶ ನೀಡಲಾಗಿದೆ. ಈಗಾಗಲೇ ಅರೆಸ್ಟ್ ಮಾಡಿಕೊಂಡು ಬಂದ ಬಳಿಕ ಅದಾಗಲೇ ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ನಾಳೆಯೂ ಮೊದಲು ಮೆಡಿಕಲ್ ಚೆಕಪ್ ಮಾಡಲಾಗುತ್ತದೆ. ಜೊತೆಗೆ ಕೃತ್ಯ ನಡೆದ ಜಾಗದಲ್ಲಿ ಮಹಜರು ಮಾಡಲಾಗುತ್ತದೆ. ಬಳಿಕ ತನಿಖೆಯನ್ನು ಮುಂದುವರೆಸುತ್ತಾರೆ. ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯಲಿದೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment