Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

6 ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ಪ್ರಜ್ವಲ್ ರೇವಣ್ಣ : ಹೇಗಿರಲಿದೆ ತನಿಖೆ..?

Facebook
Twitter
Telegram
WhatsApp

ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಎಸ್ಐಟಿ ಅಧಿಕಾರಿಗಳಿಗೆ ಸಿಗದೆ, ವಿದೇಶದಲ್ಲಿದ್ದ ಪ್ರಜ್ವಲ್ ರೇವಣ್ಣ ಇದೀಗ ಎಸ್ಐಟಿ ಅಧಿಕಾರಿಗಳ ವಶಕ್ಕೆ ಸಿಲುಕಿದ್ದಾರೆ. ಇಂದು ಮಧ್ಯರಾತ್ರಿಯೇ ವಶಕ್ಕೆ ಪಡೆದ ಎಸ್ಐಟಿ, ಇಂದು ಕೋರ್ಟ್ ಗೆ ಹಾಜರುಪಡಿಸಿತ್ತು. ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ಕೋರ್ಟ್ ಆರು ದಿನಗಳ ಕಾಲ ಎಸ್ಐಟಿಗೆ ವಶಕ್ಕೆ ನೀಡಿದೆ. 42ನೇ ಎಸಿಎಂಎಂ ಕೋರ್ಟ್ ಕಸ್ಟಡಿಗೆ ನೀಡಿದ್ದು, ಪೊಲೀಸರು ಕಚೇರಿಗೆ ಕರೆದೊಯ್ದಿದ್ದಾರೆ.

ಪೆನ್ ಡ್ರೈವ್ ಪ್ರಕರಣ ದೇಶದಾದ್ಯಂತ ಸದ್ದು ಮಾಡಿದಾಗಲೂ ಸರಿಯಾದ ರೀತಿಯಲ್ಲಿ ವಿಚಾರಣೆ ಮಾಡುವುದಕ್ಕೆ ಆಗಿಲ್ಲ. ಈಗ ನ್ಯಾಯಾಲಯವೇ ಕಸ್ಟಡಿಗೆ ನೀಡಿರುವ ಕಾರಣ ಸಂಪೂರ್ಣವಾಗಿ ತನಿಖೆ ಮಾಡಲಿದೆ. ತನಿಖೆಗೆ ಪ್ರಜ್ವಲ್ ರೇವಣ್ಣ ಹೇಗೆ ಸಹಕರಿಸುತ್ತಾರೆ ಎಂಬುದು ಕೂಡ ಬಹಳ ಮುಖ್ಯವಾಗುತ್ತದೆ. ಪ್ರಮುಖ ವಿಚಾರಗಳನ್ನು ಕೇಳುವ ಮೂಲಕ ವಿಚಾರ ಹಲವು ಆಯಾಮದಲ್ಲಿ ತನಿಖೆ ನಡೆಸಲಿದೆ.

ಸಂತ್ರಸ್ತ ಮಹಿಳೆಯರ ವಿಡಿಯೋ ಮಾಡಿದ್ದೇ ದೊಡ್ಡ ತಪ್ಪಾಗಿದೆ. ಆ ವಿಡಿಯೋಗಳೇ ಈಗ ದೇಶದಾದ್ಯಂತ ರಾದ್ಧಾಂತ ಶುರು ಮಾಡಿದೆ. ವಿದೇಶದಲ್ಲಿ ಉಳಿದುಕೊಂಡಿದ್ದಕ್ಕೆ ಸಹಾಯ ಮಾಡಿದವರು ಯಾರು..? ಇಲ್ಲಿಂದ ವಿದೇಶಕ್ಕೆ ಹೋಗಲು ಸಹಾಯ ಮಾಡಿದವರು ಯಾರು..? ಎಸ್ಐಟಿ ವಶದಲ್ಲಿರುವ ಪ್ರಜ್ವಲ್ ರೇವಣ್ಣ ಅವರಿಗೆ ಪ್ರತಿದಿನ ಬೆಳಗ್ಗೆ 9.30ರಿಂದ 10.30ರ ತನಕ ವಕೀಲರ ಭೇಟಿಗೆ ಕಾಲಾವಕಾಶ ನೀಡಲಾಗಿದೆ. ಈಗಾಗಲೇ ಅರೆಸ್ಟ್ ಮಾಡಿಕೊಂಡು ಬಂದ ಬಳಿಕ ಅದಾಗಲೇ ಮೆಡಿಕಲ್ ಚೆಕಪ್ ಮಾಡಿಸಲಾಗಿದೆ. ನಾಳೆಯೂ ಮೊದಲು ಮೆಡಿಕಲ್ ಚೆಕಪ್ ಮಾಡಲಾಗುತ್ತದೆ. ಜೊತೆಗೆ ಕೃತ್ಯ ನಡೆದ ಜಾಗದಲ್ಲಿ ಮಹಜರು ಮಾಡಲಾಗುತ್ತದೆ. ಬಳಿಕ ತನಿಖೆಯನ್ನು ಮುಂದುವರೆಸುತ್ತಾರೆ. ಅಶ್ಲೀಲ ವಿಡಿಯೋಗಳಿಗೆ ಸಂಬಂಧಿಸಿದಂತೆ ತನಿಖೆ ನಡೆಯಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂಡಾ ಹಗರಣವನ್ನು ಗಮನಕ್ಕೆ ತಂದಿದ್ದ ಡಿಸಿ ಸೇರಿದಂತೆ 21 ಐಎಎಸ್ ಅಧಿಕಾರಿಗಳ ವರ್ಗಾವಣೆ..!

ಬೆಂಗಳೂರು: ಮೈಸೂರು ಅಭಿವೃದ್ಧಿ ಪ್ರಾಧಿಕಾರ ಹಗರಣ ಸದ್ಯ ರಾಜ್ಯದಲ್ಲಿಯೇ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಸರ್ಕಾರ ಹಾಗೂ ವಿಪಕ್ಷ ನಾಯಕರ ನಡುವೆ ಆರೋಪ-ಪ್ರತ್ಯಾರೋಪಕ್ಕೆ ಕಾರಣವಾಗಿದೆ. ಈ ಮೂಡಾ ಹಗರದ ಬಗ್ಗೆ ಒಂದು ವರ್ಷದ ಹಿಂದೆಯೇ ಸರ್ಕಾರದ

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

error: Content is protected !!