Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಳ್ಳಕೆರೆ | ರಸ್ತೆ ಸಮಸ್ಯೆ ಬಗೆಹರಿಸಿ : ಕೋಡಿಹಳ್ಳಿ ರೈತರ ಮನವಿ

---Advertisement---

ಚಿತ್ರದುರ್ಗ, ಜೂ.‌01 :  ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿ ಮನ್ನೆ ಕೋಟೆ ಮಜುರೆ ಕೋಡಿಹಳ್ಳಿ ಗ್ರಾಮದಲ್ಲಿ ಸುಮಾರು ವರ್ಷಗಳಿಂದ  ತುಂಬಾ ಜ್ವಲಂತ ಸಮಸ್ಯೆಗಳಿವೆ. ಸಾರ್ವಜನಿಕರ ಪ್ರಮುಖ ಮೂಲಭೂತ ಸೌಲಭ್ಯಗಳಾದ ಕುಡಿಯುವ ನೀರು, ವಿದ್ಯುತ್ ಪೂರೈಕೆ, ಚರಂಡಿ ಸ್ವಚ್ಛತೆ, ರಸ್ತೆಗಳ ಸ್ವಚತೆ, ಶುದ್ಧ ನೀರಿನ ಘಟಕ, ರುದ್ರಭೂಮಿ, ಸೇರಿದಂತೆ ಹಲವು ಸಮಸ್ಯೆಗಳು ಗ್ರಾಮವನ್ನು ಕಾಡುತ್ತಿವೆ ಹಾಗೂ ಇನ್ನೂ ಜೀವಂತವಾಗಿವೆ.

ಇದರಲ್ಲಿ ಮುಂಗಾರು ಬಂತೆಂದರೆ ರೈತರಿಗೆ ತಮ್ಮ ಜಮೀನುಗಳಿಗೆ ಹೇಗೆ ಹೋಗಬೇಕು, ನಾವು ಹೇಗೆ ಬಿತ್ತನೆ ಮಾಡಬೇಕು ಎಂಬುದೇ ಪ್ರತಿ ವರ್ಷವೂ ಬಹು ದೊಡ್ಡ ಜ್ವಲಂತ ಸಮಸ್ಯೆಯಾಗಿ ಹಾಗೆ ಉಳಿದಿದೆ.

ಈ ಸಮಸ್ಯೆಯು ಭಾರತೀಯ ರಾಷ್ಟ್ರೀಯ ಹೆದ್ದಾರಿಯ ಪ್ರಾಧಿಕಾರದ ಅಡಿಯಲ್ಲಿ ನಿರ್ಮಿಸಿದ ಎನ್.ಏಚ್.150A ಹೈವೇ ರಸ್ತೆ ಪೂರ್ಣಗೊಂಡ ನಂತರ ಈ ಜಮೀನುಗಳ ದಾರಿಗಳ ಸಮಸ್ಯೆ ಇನ್ನೂ ತುಂಬಾ ತಲೆನೋವಾಗಿ ಪರಿಣಮಿಸಿದೆ, ಏಷ್ಟೋ  ಜಮೀನುಗಳ ವಾರಸುದಾರರು ಬಹು ವರ್ಷಗಳ ಪೂರ್ವ ಅನಾದಿ ಕಾಲದಿಂದಲೂ ಬಳಸುದಿದ್ದ ರಸ್ತೆಗಳನ್ನು ಏಕಾಏಕಿ ಬಂದ್ ಮಾಡಿದ್ದಾರೆ, ನಾವು ಯಾಕೆಂದು ಪ್ರಶ್ನಿಸಿದರೆ ನಿಮ್ಮ ಹತ್ತಿರ ದಾಖಲೆಗಳು ಏನಾದ್ರೂ ಇದ್ದರೆ ತೋರಿಸಿ ಎಂದು ಕೇಳುತ್ತಿದ್ದಾರೆ.

ಅಲ್ಲದೆ ಏಷ್ಟೋ ಬಾರಿ ತಾಲೂಕು ಮಟ್ಟದ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು ಏನೂ ಪ್ರಯೋಜನವಾಗಿಲ್ಲ ಹಾಗಾಗಿ ಕರ್ನಾಟಕ ಸರ್ಕಾರದ ” ನಮ್ಮ ಹೊಲ,ನಮ್ಮ ದಾರಿ ” ಎಂಬ ಯೋಜನೆಯ ಕಾನೂನಿನ ಕರ್ನಾಟಕ ಗ್ರಾಮ ಸ್ವರಾಜ್ಯ ಕಾಯ್ದೆ ಕಲಂ 60(ಬಿ)  ಅಡಿಯಲ್ಲಿ ಮುಖ್ಯಮಂತ್ರಿ ಗ್ರಾಮ ಸಡಕ್ ( CMGSY) ಯೋಜನೆಯಡಿ ರಾಜ್ಯದ 189 ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಪ್ರತಿ ಹಳ್ಳಿಗಳಿಗೆ ಸರ್ಕಾರದ ಆದೇಶ ಸಂಖ್ಯೆ : ಗ್ರಾಅಪ:174:ಆರ್ ಆರ್ ಸಿ :2017 ಬೆಂಗಳೂರು, ಈ  ಯೋಜನೆಯ ಅನ್ವಯ  ನಮ್ಮ ಕೋಡಿಹಳ್ಳಿ ಗ್ರಾಮದ ರೈತರಿಗೆ ಎಲ್ಲೆಲ್ಲಿ ರಸ್ತೆಗಳ ಸಮಸ್ಯೆಗಳು ಇವೆ ಎಂಬುದನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ನ್ಯಾಯ ಒದಗಿಸುವ ಮೂಲಕ ಯಾರು ರಸ್ತೆಗಳನ್ನು ಬಂದ್ ಮಾಡಿದ್ದಾರೋ ಅವರಿಗೆ ಕರ್ನಾಟಕ ಸರ್ಕಾರ ಸಾರ್ವಜನಿಕ ಜಮೀನುಗಳ ನಿಗಮ ನಿಯಮಿತ ಅನ್ವಯ 1956 ರ ಕಾನೂನಿನ ಅಧಿನಿಯಮದ ಪ್ರಕಾರ ಅವರಿಗೆ ರಸ್ತೆಗಳನ್ನು ತೆರವುಗೊಳಿಸುವಂತೆ ಸುತ್ತೋಲೆ ಹೊರಡಿಸಿ ಆದೇಶ ನೀಡಿ ರೈತರಿಗೆ ಉಳುಮೆ ಮಾಡಲು ಅನುವು ಮಾಡಿಕೊಡಬೇಕಾಗಿ ಚಿತ್ರದುರ್ಗ ಜಿಲ್ಲೆಯ ಕಾರ್ಯಾಲಯದ ಉಪ ವಿಭಾಗಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕೃತಿಕ ಸಂಘ ಚಿತ್ರದುರ್ಗ, ಎಲ್ಲ ಪದಾಧಿಕಾರಿಗಳು ಹಾಗೂ ರಾಜ್ಯಾಧ್ಯಕ್ಷರಾದ ಪ್ರೊ.ಸಿ.ಕೆ ಮಹೇಶ್ವರಪ್ಪ ರವರ ನೇತೃತ್ವದಲ್ಲಿ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕೋಡಿಹಳ್ಳಿ ಗ್ರಾಮದ ಮುಖಂಡರು ಹಾಗೂ ಗ್ರಾಮಸ್ಥರಾದ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷರು ಆದ ಶ್ರೀಯುತ ಎಂ.ಏಚ್ ತಿಪ್ಪೇಸ್ವಾಮಿ, ಲಿಂಗರಾಜು.ಡಿ
ಬಸವರಾಜು ರೆಡ್ಡಿ, ಮಾಜಿ ಗ್ರಾಮ ಪಂಚಾಯಿತಿ ಸದಸ್ಯರು ಆದ ಶ್ರೀಯುತ ತಿಪ್ಪೇಸ್ವಾಮಿ.ಪಿ,
ಮಲ್ಲಯ್ಯ, ಪುಟ್ಟಣ್ಣ, ರುದ್ರಣ್ಣ, ರಾಜಶೇಖರ್, ತಿಪ್ಪೇಸ್ವಾಮಿ,  ಕೋಟಿ, ತಿಪ್ಪೇಶ್, ರಾಜಣ್ಣ, ಮಾಜಿ ಗ್ರಾ.ಪಂ.ಸದಸ್ಯ,  ಬಿ.ಟಿ ಶಿವರಾಜ್ ಭಾರಿ, ಪಲ್ಲಕ್ಕಿ ವೀರಣ್ಣ, ಈರಾ ರೆಡ್ಡಿ, ನಾಗರಾಜ್,
ಇತರರು ಉಪಸ್ಥಿತರಿದ್ದರು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment