Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ | ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸಿ.ಐ.ಟಿ.ಯು. ಪ್ರತಿಭಟನೆ

Facebook
Twitter
Telegram
WhatsApp

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ : ಕಾರ್ಮಿಕ ಕಲ್ಯಾಣ ಮಂಡಳಿಯಿಂದ ಸೌಲಭ್ಯಗಳನ್ನು ಪಡೆಯಲು ಅರ್ಜಿ ಸ್ವೀಕರಿಸುವುದಕ್ಕೆ ವಿಳಂಭ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ಜಿಲ್ಲಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ಕಾರ್ಮಿಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.

ಸೌಲಭ್ಯಗಳನ್ನು ಪಡೆಯಲು ಕೂಡಲೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸ್ವೀಕರಿಸಬೇಕು. ಮೇ.30 ಕ್ಕೆ ಮುಕ್ತಾಯಗೊಂಡಿರುವ ಕಾರ್ಮಿಕ ಮಕ್ಕಳ ಶೈಕ್ಷಣಿಕ ಅರ್ಜಿಗಳ ಸ್ವೀಕಾರವನ್ನು ಆ.31 ರತನಕ ವಿಸ್ತರಿಸಬೇಕು. 2023 ರ ಅಧಿಸೂಚನೆಯನ್ನು ರದ್ದುಪಡಿಸಿ 2021 ರ ಅಧಿಸೂಚನೆ ಅನ್ವಯ ಶೈಕ್ಷಣಿಕ ಧನ ಸಹಾಯ ನೀಡಬೇಕು.

ಹೊಸದಾಗಿ ಅರ್ಜಿ ಸಲ್ಲಿಸುವುದು ಹಾಗೂ ನವೀಕರಣಕ್ಕೆ ಸಂಬಂಧಿಸಿದಂತೆ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಯನ್ನು ಬಗೆಹರಿಸಬೇಕು.
ಕರ್ನಾಟಕ ಹೈಕೋರ್ಟ್ನ ಮಧ್ಯಂತರ ಆದೇಶದನ್ವಯ ಅಮೃತ ಹಾಗೂ ಅಕ್ಷತ ಎನ್ನುವ ವಿದ್ಯಾರ್ಥಿನಿಯರಿಗೆ ದಂಡ ಸಹಿತ ಶೈಕ್ಷಣಿಕ ಧನ ಸಹಾಯ ಪಾವತಿಸಬೇಕು. ಎಲ್ಲಾ ರೀತಿಯ ಖರೀಧಿಗಳನ್ನು ನಿಲ್ಲಿಸಿ ಜಾರಿಯಲ್ಲಿರುವ ಸೌಲಭ್ಯಗಳ ಧನ ಸಹಾಯವನ್ನು ನೇರ ವರ್ಗಾವಣೆ ಮೂಲಕ ಪಾವತಿಸಬೇಕೆಂದು ಪ್ರತಿಭಟನಾನಿರತರು ಒತ್ತಾಯಿಸಿದರು.

ಸಿಐಟಿಯು. ಜಿಲ್ಲಾ ಸಹ ಸಂಚಾಲಕ ಸಿ.ಕೆ.ಗೌಸ್‌ಪೀರ್, ಬಿ.ಕೆ.ನಾಗರಾಜಚಾರಿ, ಮಂಜುನಾಥ, ಮಹಮದ್ ಜಿಕ್ರಿಯಾವುಲ್ಲಾ, ರಾಘವೇಂದ್ರ, ಅಬ್ದುಲ್ಲಾ, ರಶೀದ್, ಉಮೇಶ್, ಶೇಖ್‌ಕಲೀಂವುಲ್ಲಾ, ಕೆ.ಎನ್.ನಾಗರಾಜ್, ಸೈಯದ್ ಮುಜ್ಜು ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

30 ವರ್ಷದಿಂದ ಸೀರೆಯನ್ನೇ ತೆಗೆದುಕೊಳ್ತಿಲ್ಲ : ಸರಳತೆಯಿಂದಾನೇ ಮತ್ತೆ ಮನಸ್ಸು ಗೆದ್ದ ಸುಧಾಮೂರ್ತಿ, ಹೇಳಿದ್ದೇನು..?

ಬೆಂಗಳೂರು: ಸುಧಾಮೂರ್ತಿ ಅಂದ್ರೆ ಸರಳತೆಯಿಂದಾನೇ ಯುವಕರಿಗೆ ಸ್ಪೂರ್ತಿಯಾದವರು. ಅವರ ನಡವಳಿಕೆ, ಅವರ ಮಾತುಗಳು ಎಲ್ಲರನ್ನು ಆಕರ್ಷಿಸುತ್ತದೆ. ಕೋಟ್ಯಾಧೀಶ್ವರರೇ ಆದರು ಸಿಂಪಲ್ ಆಗಿ ಇರುವುದಕ್ಕೆ ಇಷ್ಟ ಪಡುತ್ತಾರೆ. ಇದೀಗ ಕಳೆದ 30 ವರ್ಷದಿಂದ ಸೀರೆಯನ್ನೇ ಕೊಂಡುಕೊಂಡಿಲ್ಲ

ಇತಿಹಾಸ ನಿರ್ಮಿಸಿದ ಬಜಾಜ್; ವಿಶ್ವದ ಮೊದಲ CNG ಬೈಕ್ ಬಿಡುಗಡೆ ಮಾಡಿದ ಭಾರತೀಯ ಕಂಪನಿ; ಮೈಲೇಜ್ ಕೂಡ ಸೂಪರ್

• ಹಲವು ವರ್ಷಗಳಿಂದ ಸುದ್ದಿಯಲ್ಲಿದ್ದ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಬಿಡುಗಡೆಗೆ ಕೊನೆಗೂ ತೆರೆ ಬಿದ್ದಿದೆ. ಭಾರತೀಯ ಆಟೋಮೊಬೈಲ್ ಕಂಪನಿ ಬಜಾಜ್ ಶುಕ್ರವಾರ ವಿಶ್ವದ ಮೊದಲ ಸಿಎನ್‌ಜಿ ಬೈಕ್ ಅನ್ನು ಬಿಡುಗಡೆ ಮಾಡಿದೆ. ಈ

ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ | ಅದ್ದೂರಿಯಾಗಿ ನೆರವೇರಿದ ಮೊದಲ ದಿನದ ಕಾರ್ಯಕ್ರಮ

ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ

error: Content is protected !!