Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಎಕ್ಸಿಟ್ ಪೋಲ್ ಬೆನ್ನಲ್ಲೇ ಷೇರು ಮಾರುಕಟ್ಟೆಯಲ್ಲಿ ಸಂಚಲನ ಸೃಷ್ಟಿ..!

Facebook
Twitter
Telegram
WhatsApp

 

ಲೋಕಸಭಾ ಚುನಾವಣೆಯ ಫಲಿತಾಂಶಕ್ಕಾಗಿ ದೇಶವೇ ಕಾಯುತ್ತಿದೆ. ನಾಳೆಯೇ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಎಕ್ಸಿಟ್ ಪೋಲ್ ಹೊರ ಬಿದ್ದಿದ್ದು, ಬಿಜೆಪಿಯೇ ಮತ್ತೆ ಅಧಿಕಾರದ ಗದ್ದುಗೆ ಏರಲಿರುವ ಸೂಚನೆ ನೀಡಲಾಗಿದೆ. ಎಕ್ಸಿಟ್ ಪೋಲ್ ಬಳಿಕ ಷೇರು ಮಾರುಕಟ್ಟೆಯಲ್ಲಿ ಬಾರೀ ಸಂಚಲನವನ್ನೇ ಸೃಷ್ಟಿಸಿದೆ.

ಸೆನ್ಸೆಕ್ಟ್ 2000 ಸಾವಿರ ಪಾಯಿಂಟ್ ಗೆ ಜಿಗಿತ ಕಂಡರೆ, ನಿಫ್ಟಿ 600 ಅಂಕ ಜಾಸ್ತಿಯಾಗಿದೆ. ಬಾಂಬೆ ಸ್ಟಾಕ್ ಎಕ್ಸ್‌ಚೇಂಜ್ 2621.98 ಪಾಯಿಂಟ್ ಆಗಿದೆ. 76,583 ಮಟ್ಟದಲ್ಲಿ ಪ್ರಾರಂಭವಾಗಿದೆ. ಎನ್​ಎಸ್​ಇ (National Stock Exchange) ನಿಫ್ಟಿ 807.20 ಪಾಯಿಂಟ್ (ಶೇ.3.58) ನೊಂದಿಗೆ ಆರಂಭವಾಗಿದೆ.

 

ಈ ಮೂಲಕ ಷೇರು ಮಾರುಕಟ್ಟೆಯು ಐತಿಹಾಸಿಕ ಉತ್ತುಂಗದಲ್ಲಿದೆ ಎಂದು ತಜ್ಞರು ವಿಶ್ಲೇಸುತ್ತಿದ್ದಾರೆ. ಎಕ್ಸಿಟ್ ಪೋಲ್ ಬಳಿಕವೇ ಷೇರು ಮಾರುಕಟ್ಟರ ಇಷ್ಟೊಂದು ಏರಿಕೆಯಾಗಿರುವಾಗ, ನಾಳೆ ಫಲಿತಾಂಶ ಹೊರ ಬಿದ್ದ ಬಳಿಕ ಇನ್ನು ಏನೆಲ್ಲಾ‌ ಬದಲಾವಣೆಯಾಗಬಹುದು ಎಂಬುದರ ಕುತೂಹಲವಿದೆ.

ಈ ಬಾರಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಇತ್ತು. ಬಿಜೆಪಿಯನ್ನು ಸೋಲಿಸಲೇಬೇಕೆಂಬ ಹಠಕ್ಕೆ‌ಕಾಂಗ್ರೆಸ್ ಬಿದ್ದಿತ್ತು. ಹೀಗಾಗಿ ಇಂಡಿಯಾ ಎಂಬ ಮೈತ್ರಿ ಕೂಟ ರಚನೆ ಮಾಡಿ, ಸ್ಪರ್ಧೆಗೆ ಇಳಿದಿತ್ತು. ಇನ್ನು ಕರ್ನಾಟಕದಲ್ಲಿ ಕಾಂಗ್ರೆಸ್ ಸೋಲಿಸಬೇಕೆಂಬ ಹಠಕ್ಕೆ ಬಿದ್ದ ಬಿಜೆಪಿ ಜೆಡಿಎಸ್ ನೊಂದಿಗೆ ಮೈತ್ರಿ ಮಾಡಿಕೊಂಡಿದೆ. ಜೆಡಿಎಸ್ ಸ್ಪರ್ಧೆ ನಡೆಸಿರುವುದೇ ಮೂರು ಕ್ಷೇತ್ರ. ಸದ್ಯ ಎಕ್ಸಿಟ್ ಪೋಲ್ ನಲ್ಲಿ ಮೂರು ಕ್ಷೇತ್ರಗಳನ್ನು ಗೆಲ್ಲಬಹುದು ಎಂದೇ ಹೇಳಲಾಗುತ್ತಿದೆ. ಎರಡು ಕ್ಷೇತ್ರದಲ್ಲಾದರೂ ಜೆಡಿಎಸ್ ಬರುವ ಗ್ಯಾರಂಟಿಯನ್ನು ಎಕ್ದಿಟ್ ಪೋಲ್ ನೀಡಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕೋಟಿ ವೃಕ್ಷ ಅಭಿಯಾನ : ಪ್ರಸಕ್ತ ವರ್ಷದಲ್ಲಿ ಐವತ್ತು ಸಾವಿರ ಗಿಡಗಳನ್ನು ನೆಡಲಾಗುವುದು : ದೇನಾ ಭಗತ್ ಸ್ವಾಮೀಜಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729   ಸುದ್ದಿಒನ್, ಚಳ್ಳಕೆರೆ:  ಕೋಟಿ ವೃಕ್ಷ ಅಭಿಯಾನದಡಿ ಔಷಧಿ ಹಾಗೂ ಪ್ರಾಣಿ ಪಕ್ಷಿಗಳಿಗೆ ಜಾನುವಾರುಗಳಿಗೆ ಉಪಯೋಗವಾಗುವಂತಹ ಗಿಡಗಳನ್ನು ಬೆಳೆಸಲಾಗುತ್ತದೆ.

ಬಿಟ್ಟಿ ಭಾಗ್ಯ ಕೊಡಲಿಕ್ಕೆ ವಾಲ್ಮೀಕಿ ನಿಗಮದ ದುಡ್ಡೇ ಬೇಕಿತ್ತಾ ? ಸಿಎಂ ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ವಾಗ್ದಾಳಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಚಳ್ಳಕೆರೆ, ಜುಲೈ. 03 :  ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಬಿಟ್ಟಿಭಾಗ್ಯಗಳನ್ನು ಕೊಟ್ಟು ಖಜಾನೆ ಖಾಲಿ ಮಾಡಿಕೊಂಡಿದೆ. ಸಿದ್ದರಾಮಯ್ಯನವರೇ ಬಿಟ್ಟಿ

ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರು ಜಾಗೃತಿ ಮೂಡಿಸಿ : ಪಿಡಿಒಗಳಿಗೆ ತರಬೇತಿ ಕಾರ್ಯಕ್ರಮದಲ್ಲಿ ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್

ಚಿತ್ರದುರ್ಗ. ಜುಲೈ.03:  ಮಳೆಗಾಲ ಆರಂಭವಾಗಿದ್ದು, ಕಲುಷಿತ ನೀರು ಸೇವನೆಯಿಂದ ಆರೋಗ್ಯದ ಮೇಲೆ ಗಂಭೀರ ಸ್ವರೂಪದ ಪರಿಣಾಮಗಳು ಬೀರುವ ಸಾಧ್ಯತೆಗಳಿರುವುದರಿಂದ, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಮುಂಜಾಗ್ರತಾ ಕ್ರಮವಾಗಿ ಸಾರ್ವಜನಿಕರ ಸಹಭಾಗಿತ್ವದಲ್ಲಿ ಜಾಗೃತಿ ಮೂಡಿಸುವ ಕೆಲಸ

error: Content is protected !!