ಬೆಂಗಳೂರು ಗ್ರಾಮಾಂತರ : ಡಾ.ಮಂಜುನಾಥ್ ಮುನ್ನಡೆ

1 Min Read

 

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ವಿಚಾರದಲ್ಲಿ ಬೆಂಗಳೂರು ಗ್ರಾಮಾಂತರ ಕೂಡ ಗಮನ ಸೆಳೆದಿದ್ದಂತ ಕ್ಷೇತ್ರ. ಮೊದಲ ಬಾರಿಗೆ ಡಾ.ಮಂಜುನಾಥ್ ಅವರು ರಾಜಕೀಯ ಪ್ರವೇಶ ಮಾಡಿದ್ದರು. ಅದರಲ್ಲೂ ಡಿಕೆ ಸುರೇಶ್ ಅವರ ಕ್ಷೇತ್ರದಲ್ಲಿಯೇ ತನ್ನ ರಾಜಕೀಯ ಭವಿಷ್ಯವನ್ನು ಅಗ್ನಿ ಪರೀಕ್ಷೆಗೆ ಒಡ್ಡಿದ್ದರು. ಇದೀಗ ಡಾ. ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

26 ಸಾವಿರ ಮತಗಳ ಅಂತರದಲ್ಲಿ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದು, ಡಿ.ಕೆ.ಸುರೇಶ್ ಹಿನ್ನಡೆ ಸಾಧಿಸಿದ್ದಾರೆ. ಡಿಕೆ ಬ್ರದರ್ಸ್ ಗೆ ಈ ಚುನಾವಣೆ ಪ್ರತಿಷ್ಠೆಯ ಕಣವಾಗಿತ್ತು. ಈ ಬಾರಿ ಸಾಕಷ್ಟು ಪ್ರಚಾರವನ್ನು ನಡೆಸಿದ್ದರು. ಆದರೆ ಆರಂಭಿಕ ಎಣಿಕೆಯಲ್ಲಿಯೇ ಡಾ.ಮಂಜುನಾಥ್ ಮುನ್ನಡೆ ಸಾಧಿಸಿದ್ದಾರೆ.

ಡಿ.ಕೆ.ಸುರೇಶ್ ಅವರು ಹಕವು ಬಾರಿ ಗೆದ್ದು ಬೀಗಿದ್ದರು. ಆದರೆ ಈ ಬಾರಿ ಮೊದಲ ಬಾರಿಗೆ ಮಂಜುನಾಥ್ ಅವರು ಸ್ಪರ್ಧೆ ನೀಡಿದ್ದಾರೆ. ಡಾ.ಮಂಜುನಾಥ್ ಅವರಿಗೆ ಜನ ಆಶೀರ್ವಾದ ಮಾಡಿರುವುದು ಆರಂಭದಲ್ಲಿಯೇ ಅರ್ಥವಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *