Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಮಂಡ್ಯದಲ್ಲಿ ಕುಮಾರಸ್ವಾಮಿಗೆ ಗೆಲುವು.. ಹಾಸನದಲ್ಲಿ ಪ್ರಜ್ವಲ್ ಸೋಲು..!

---Advertisement---

 

 

ಮಂಡ್ಯ ರಣಕಣದಲ್ಲಿ ಕಳೆದ ವರ್ಷ ಸುಮಲತಾ ವಿರುದ್ಧ ನಿಖಿಲ್ ಕುಮಾರಸ್ವಾಮಿ ಸೋಲು ಕಂಡಿದ್ದರು. ಈ ಬಾರಿ ಮೈತ್ರಿ ಅಭ್ಯರ್ಥಿಯಾಗಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ದರು. ಕಾಂಗ್ರೆಸ್ ನಿಂದ ಸ್ಟಾರ್ ಚಂದ್ರು ನಿಂತಿದ್ದರು. ಇದೀಗ ಬಾರೀ ಮತದ ಅಂತರದಿಂದ ಕುಮಾರಸ್ವಾಮಿ ಗೆಲುವು ಕಂಡಿದ್ದಾರೆ. ಎರಡು ಲಕ್ಷ ಹಂತದ ಮತಗಳ ಅಂತರದಿಂದ ಗೆಲುವು ಕಂಡಿದ್ದಾರೆ.

ಇನ್ನು ಹಾಸನದಲ್ಲಿ ಪ್ರಜ್ವಲ್ ರೇವಣ್ಣ ಹೀನಾಯವಾಗಿ ಸೋಲು ಕಂಡಿದ್ದು, 25 ವರ್ಷಗಳ ಬಳಿಕ ಹಾಸನ ಕೈ ತೆಕ್ಕೆಗೆ ಸಿಕ್ಕಿದೆ. ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣದಲ್ಲಿ ಸಿಕ್ಕಿ ಬಿದ್ದಿದ್ದರು. ಚುನಾವಣೆಗೂ ಎರಡು ದಿನ ಮುನ್ನ ಈ ಸುದ್ದಿ ಎಲ್ಲೆಡೆ ಹಬ್ಬಿತ್ತು. ಪ್ರಜ್ಚಲ್ ರೇವಣ್ಣ ಮತ ಹಾಕಿ ವಿದೇಶಕ್ಕೆ ಹಾರಿದ್ದರು. ರಿಸಲ್ಟ್ ಗೆ ಇನ್ನೈದು ದಿನ ಇರುವಾಗ ಬಂದು ಎಸ್ಐಟಿಗೆ ಸೆರಂಡರ್ ಆಗಿದ್ದರು. ಆದರೂ ಜನ ಪ್ರಜ್ವಲ್ ರೇವಣ್ಣ ಅವರಿಗೆ ಸೋಲು ನೀಡಿದ್ದಾರೆ.

ಆರಂಭದ ಮತ ಎಣಿಕೆ ವೇಳೆ ಪ್ರಜ್ವಲ್ ರೇವಣ್ಣ ಮುನ್ನಡೆ ಸಾಧಿಸಿದ್ದರು. ಕಾಂಗ್ರೆಸ್ ನ ಶ್ರೇಯಸ್ ಪಾಟೀಲ್ ಹಿನ್ನಡೆಯಲ್ಲಿದ್ದರು. ಆದರೆ ಇದೀಗ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಾಟೀಲ್ ಭರ್ಜರಿ ಮತದೊಂದಿಗೆ ಗೆಲುವಿನತ್ತ ಹೆಜ್ಜೆ ಹಾಕುತ್ತಿದ್ದಾರೆ. ಪೆನ್ ಡ್ರೈವ್ ನಲ್ಲಿ ಅಶ್ಲೀಲ ವಿಡಿಯೋಗಳನ್ನು ಸೇವ್ ಮಾಡಿ, ಹೆಣ್ಣು‌ಮಕ್ಕಳ ಮರ್ಯಾದೆ ಕಳೆದ ಪ್ರಜ್ವಲ್ ರೇವಣ್ಣ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ. ಸದ್ಯ ಪ್ರಜ್ವಲ್ ರೇವಣ್ಣ ಎಸ್ಐಟಿ ವಶದಲ್ಲಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment