Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಡಿಕೆ ಬ್ರದರ್ಸ್ ಗೆ ಬಿಗ್ ಶಾಕ್ : ಸೋತ ಬಳಿಕ ಡಿಕೆ ಸುರೇಶ್ ಹೇಳಿದ್ದೇನು..?

Facebook
Twitter
Telegram
WhatsApp

 

ಇಂದು ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬಿದ್ದಿದ್ದು, ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮೇಲೆ ಎಲ್ಲರ ಗಮನ ಇತ್ತು. ಫಸ್ಟ್ ಟೈಮ್ ಡಾ.ಮಂಜುನಾಥ್ ಅವರು ಸ್ಪರ್ಧೆಗೆ ನಿಂತಿದ್ದರು. ಸಂಸದ ಸ್ಥಾನಕ್ಕೆ ಎಲ್ಲರ ಬಲವಂತದಿಂದ ಸ್ಪರ್ಧೆ ಮಾಡಿಯೇ ಬಿಟ್ಟಿದ್ದರು. ಆದರೆ ಡಿಕೆ ಸುರೇಶ್ ಮುಂದೆ ನಿಜಕ್ಕೂ ಗೆಲ್ಲುತ್ತಾರಾ ಎಂಬ ಪ್ರಶ್ನೆ ಹಲವರನ್ನು ಕಾಡಿತ್ತು. ಡಾ.ಮಂಜುನಾಥ್ ಅವರ ಗುಣ ಎಲ್ಲರಿಗೂ ಗೊತ್ತಿದ್ದ ಕಾರಣಕ್ಕೆ, ಅದೆಷ್ಟೋ ಜೀವಗಳನ್ನ ಉಳಿಸಿದ ಗುಣಕ್ಕೆ ಜನ ಜೈಕಾರ ಹಾಕಿದ್ದಾರೆ. ಇಂದು ಎರಡು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದು ಬೀಗಿದ್ದಾರೆ.

ಮತ ಎಣಿಕೆ ಮುಗಿದ ಬಳಿಕ ಮಾತನಾಡಿದ ಡಿಕೆ ಸುರೇಶ್, ಈ ಚುನಾವಣೆಗಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರಿಗೂ ಧನ್ಯವಾದಗಳು. ಮುಖಂಡರಿಗೂ ಧನ್ಯವಾದ ತಿಳಿಸಿದ್ದಾರೆ. ಇನ್ನು ಎರಡು ಬಾರಿ ಸಂಸದರನ್ನಾಗಿ ಮಾಡಿದ ಜನತೆಗೂ ವಿಶೇಷ ಧನ್ಯವಾದ ತಿಳಿಸಿದ್ದಾರೆ. ಅಷ್ಟೇ ಅಲ್ಲ ಚುನಾವಣೆಯಲ್ಲಿ ಗೆದ್ದಂತ ಡಾ.ಮಂಜುನಾಥ್ ಅವರಿಗೂ ಧನ್ಯವಾದ ಅರ್ಪಿಸಿದ್ದಾರೆ.

ಈ ಫಲಿತಾಂಶ ಡಿಕೆ ಬ್ರದರ್ಸ್ ಗೆ ಬಿಗ್ ಶಾಕ್ ಅನ್ನೇ ನೀಡಿದೆ. ಬೆಂಗಳೂರು ಗ್ರಾಮಾಂತರದ ಜನ ಯಾವತ್ತಿಗೂ ಕೈಬಿಡುವುದಿಲ್ಲ. ಜನರ ನಾಯಕನಾಗಿ ಸುರೇಶ್ ಕೆಲಸ ಮಾಡಿದ್ದಾರೆ. ಹೀಗಾಗಿ ಜನ ಸುರೇಶ್ ಅವರನ್ನು ಗೆಲ್ಲಿಸುತ್ತಾರೆ ಎಂದೇ ಡಿಕೆ ಶಿವಕುಮಾರ್ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಈಗ ಎಲ್ಲವೂ ಉಲ್ಟಾ ಆಗಿದೆ. ಡಿಕೆ ಸುರೇಶ್ ಅವರನ್ನು ಡಾ.ಮಂಜುನಾಥ್ ಎರೆಉ ಲಕ್ಷಕ್ಕೂ ಅಧಿಕ ಮತಗಳಿಂದ ಸೋಲಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜನತೆಯೂ ಬದಲಾವಣೆಯನ್ನು ಬಯಸುತ್ತಿದ್ದರು ಎನಿಸುತ್ತದೆ. ಇದೀಗ ಡಾ.ಮಂಜುನಾಥ್ ಅವರಿಗೆ ಮತ ನೀಡಿ ಗೆಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

error: Content is protected !!