Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗ ಲೋಕಸಭಾ ಕ್ಷೇತ್ರ : ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ ಗೆಲುವು : ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಮೊದಲು…!

Facebook
Twitter
Telegram
WhatsApp

ಸುದ್ದಿಒನ್,  ಚಿತ್ರದುರ್ಗ. ಜೂನ್.04:  ಚಿತ್ರದುರ್ಗ (ಪರಿಶಿಷ್ಟ ಜಾತಿ) ಲೋಕಸಭಾ ಕ್ಷೇತ್ರ ಚುನಾವಣೆ ಫಲಿತಾಂಶ ಮಂಗಳವಾರ ಪ್ರಕಟವಾಗಿದ್ದು, ಭಾರತೀಯ ಜನತಾ ಪಾರ್ಟಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು 6,84,890 ಮತಗಳನ್ನು ಪಡೆಯುವುದರೊಂದಿಗೆ ಜಯಭೇರಿ ಬಾರಿಸಿದ್ದಾರೆ.

ಬಿಜೆಪಿಯ ಗೋವಿಂದ ಮಕ್ತಪ್ಪ ಕಾರಜೋಳ ಅವರು ತಮ್ಮ ಸಮೀಪದ ಪ್ರತಿಸ್ಪರ್ಧಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ ಎದುರು 48,121 ಮತಗಳ ಅಂತರದಿಂದ ಗೆಲವು ಸಾಧಿಸಿದ್ದಾರೆ.

ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಿ.ಎನ್. ಚಂದ್ರಪ್ಪ 6,36,769 ಮತಗಳನ್ನು ಗಳಿಸಿದ್ದಾರೆ. ಬಹುಜನ ಸಮಾಜ ಪಾರ್ಟಿಯ ಅಶೋಕ ಚಕ್ರವರ್ತಿ 7705, ಕರ್ನಾಟಕ ರಾಷ್ಟ್ರಸಮಿತಿ ಪಕ್ಷದ ನರಸಿಂಹರಾಜು 4950, ಉತ್ತಮ ಪ್ರಜಾಕೀಯ ಪಾರ್ಟಿಯ ರಮೇಶ್ ನಾಯ್ಕ್ ಟಿ 2206, ಇಂಡಿಯನ್ ಮೂವ್‍ಮೆಂಟ್ ಪಾರ್ಟಿಯ ಬಿ.ಟಿ.ರಾಮಸುಬ್ಬಯ್ಯ 720, ಕರುನಾಡ ಸೇವಕರ ಪಾರ್ಟಿಯ ಶಬರೀಶ್ 1018, ಸೋಷಲಿಸ್ಟ್ ಯುನಿಟಿ ಸೆಂಟರ್ ಆಫ್ ಇಂಡಿಯಾ (ಕಮ್ಯುನಿಸ್ಟ್) ಪಕ್ಷದ ಸುಜಾತ ಡಿ 1014, ಪಕ್ಷೇತರ ಅಭ್ಯರ್ಥಿಗಳಾದ ಅಮೃತ್ ರಾಜ 834, ಗಣೇಶ 1093, ತುಳಸಿ ಹೆಚ್ 1082, ಡಾ.ಎಂ.ಪಿ.ದಾರಕೇಶ್ವರಯ್ಯ 1397, ನಾಗರಾಜಪ್ಪ 1679, ಭೂತರಾಜ್ ವಿ.ಎಸ್ 2397, ಮಂಜುನಾಥ ಸ್ವಾಮಿ ಟಿ 2676, ರಘುಕುಮಾರ್ ಎಸ್ 2337, ಬಿ.ವೆಂಕಟೇಶ ಶಿಲ್ಪಿ 4201, ಶ್ರೀನಿವಾಸಪುರದ ಶ್ರೀನಿವಾಸಬಾಬು ಪಾವಗಡ 4548, ಸುಧಾಕರ್ ಆರ್ 1211 ಮತ ಗಳಿಸಿದ್ದಾರೆ. ನೋಟಾಗೆ 3190 ಮತಗಳು ದಾಖಲಾಗಿವೆ. ಅಂಚೆ ಮತಗಳ ಪೈಕಿ 132 ತಿರಸ್ಕøತಗೊಂಡಿದ್ದು, 204 ಮತಗಳು ಅಮಾನ್ಯಗೊಂಡಿವೆ.

ಚುನಾವಣೆ ಫಲಿತಾಂಶ ಘೋಷಣೆಯಲ್ಲಿ ದೇಶದಲ್ಲಿಯೇ ಚಿತ್ರದುರ್ಗ ಮೊದಲು:

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಮತ ಎಣಿಕೆಯಲ್ಲಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಚುನಾವಣಾಧಿಕಾರಿಗಳು ಉತ್ತಮವಾಗಿ ಕಾರ್ಯನಿರ್ವಹಿಸಿದ್ದಾರೆ. ಇದರ ಫಲವಾಗಿ ದೇಶದಲ್ಲಿಯೇ ಪ್ರಥಮವಾಗಿ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವಿಜೇತ ಅಭ್ಯರ್ಥಿಯನ್ನು ENCORE ತಂತ್ರಾಂಶದಲ್ಲಿ ಅಧೀಕೃತವಾಗಿ ಘೋಷಣೆ ಮಾಡಲಾಗಿದೆ.
ಮತ ಎಣಿಕೆ ಕಾರ್ಯದಲ್ಲಿ ಉತ್ತಮವಾಗಿ ಕಾರ್ಯನಿರ್ವಹಿಸಿದ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‍ಗಳು, ಮತ ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಅಧಿಕಾರಿಗಳು, ಸಿಬ್ಬಂದಿಗೆ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅಭಿನಂದನೆ ಸಲ್ಲಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!