Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಗೀತಾ ಸೋಲಿನ ಬೆನ್ನಲ್ಲೇ ಕುಮಾರ ಬಂಗಾರಪ್ಪ ಪೋಸ್ಟ್ : ಶಿವರಾಜ್ ಕುಮಾರ್ ಬಗ್ಗೆಯೂ ವ್ಯಂಗ್ಯ..!

---Advertisement---

ಗೀತಾ ಶಿವರಾಜ್ ಕುಮಾರ್ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದ್ದರು. ಬಿವೈ ರಾಘವೇಂದ್ರ ವಿರುದ್ಧ ಸೋತಿದ್ದಾರೆ. ಈ ಸೋಲಿನ ಬಳಿಕ ಬಂಗಾರಪ್ಪ ಅವರ ಮಕ್ಕಳ ಶೀತಲ ಸಮರ ಮತ್ತೆ ಎಲ್ಲರೆದುರು ಹೊಗೆಯಾಡುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಅದು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಪೋಸ್ಟ್ ಹಾಕಿದ್ದಾರೆ. ತಮ್ಮ ಜಗಳದಲ್ಲಿ ಇಲ್ಲಿ ಕುಮಾರ ಬಂಗಾರಪ್ಪ, ಶಿವರಾಜ್ ಕುಮಾರ್ ಅವರನ್ನು ಎಳೆದು ತಂದಿದ್ದಾರೆ. ಇದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ.

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಗೀತಾ ಶಿವ ರಾಜ್‍ಕುಮಾರ್ ಅವರು ಕಾಂಗ್ರೆಸ್ ನಿಂದ ಶಿವಮೊಗ್ಗ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದ್ದರು. ಈ ವೇಳೆ ಪತ್ನಿಯ ಪರವಾಗಿ ಶಿವಣ್ಣ ಪ್ರಚಾರ ಮಾಡಿದ್ದರು. ಪ್ರಚಾರದ ವೇಳೆ ಎಲ್ಲಿಯೂ ಇನ್ನೊಬ್ಬರ ವಿರೋಧ ಮಾತನಾಡಿರಲಿಲ್ಲ. ಕೇವಲ ತನ್ನ ಪತ್ನಿಗೆ ಒಂದು ಅವಕಾಶ ಕೊಡಿ ಎಂದಷ್ಟೇ ಕೇಳಿದ್ದರು. ಆದರೆ ಈಗ ಕುಮಾರ ಬಂಗಾರಪ್ಪ ಅವರು ಶಿವರಾಜ್ ಕುಮಾರ್ ಅವರ ಬಗ್ಗೆಯೂ ಲಘುವಾಗಿ ಮಾತನಾಡಿದ್ದಾರೆ. ‘ಶಿವರಾಜ್ ಕುಮಾರ್ ಅವರು ನಿರುದ್ಯೋಗಿಯಾಗಬೇಕಿಲ್ಲ. ನಮ್ಮ ಜಾತ್ರೆಗಳಲ್ಲಿ ಕುಣಿಯುವ ಕೆಲಸಕ್ಕೆ ಈಗಲೇ ಅರ್ಜಿ ಹಾಕಬಹುದು’ ಎಂದು ಪೋಸ್ಟ್ ಮಾಡಿದ್ದಾರೆ.

‘ನನ್ನ ತಂಗಿ ಸಿನಿಮಾ ಡಾನ್ ಆಗಿರುವುದರಿಂದ ಬೇಸರಕ್ಕೆ ಕಾರಣವಿಲ್ಲ. ದೊಡ್ಡಮನೆಯ ವ್ಯವಹಾರ ಸಾಕಷ್ಟಿರುತ್ತದೆ. ಬೇರೆಯವರಿಗೆ ಅವಕಾಶ ಸಿಗಲಾರದು. ಹೆದರಿಸುವ, ಬೆದರಿಸುವ, ಹುಷಾರ್ ಎನ್ನುವ ಮಾತುಗಳು ಏನಿದ್ದರೂ ಗಂಟಲೊಳಗರ , ನಾಲ್ಕು ಗೋಡೆಗಳ ಒಳಗೆ, ಪಟಾಲಂ ಮುಂದೆ ಮಾತ್ರ ಚಾಕ್ತಿಯಲ್ಲಿರಬೇಕು. ದಿಕ್ಕು ಕೆಟ್ಟು ದಿಕ್ಕಾಪಾಲಾಗಿ ಹೋಗಿ, ಬೆಂಗಳೂರು ಸೇರಿಕೊಂಡವರಿಗೆ ಕೊನೆಯ ಎಚ್ಚರಿಕೆ, ನೀವೂ ಹಿಂತುರುಗಿ ಬರುವುದು ಕನಸಿನ ಮಾತು’ ಎಂದು ಸುಧೀರ್ಘವಾಗಿ ಬರೆದಿದ್ದಾರೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...