Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಾಮಾಜಿಕ ನ್ಯಾಯಕ್ಕಾಗಿ ಕೊರ್ಲಕುಂಟೆ ತಿಪ್ಪೇಸ್ವಾಮಿ ಆಯ್ಕೆ ಸೂಕ್ತ : ವಡ್ಡಗೆರೆ ನಾಗರಾಜಯ್ಯ

Facebook
Twitter
Telegram
WhatsApp

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಸುದ್ದಿಒನ್,ಚಿತ್ರದುರ್ಗ, (ನ‌.14): ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿಯನ್ನು ಮತದಾರರು ಗೆಲ್ಲಿಸಿದರೆ ಸಾಮಾಜಿಕ ನ್ಯಾಯ ನೀಡಿದಂತಾಗುತ್ತದೆ ಎಂದು ಕವಿ, ಸಂಘಟಕ, ಹೋರಾಟಗಾರ ವಡ್ಡಗೆರೆ ನಾಗರಾಜಯ್ಯ ಮತದಾರರಲ್ಲಿ ಮನವಿ ಮಾಡಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು ಕಟ್ಟಕಡೆಯ ತಳಸಮುದಾಯದಿಂದ ಬಂದಿರುವವರಿಗೆ ಕನ್ನಡ ಸಾಹಿತ್ಯ ಪರಿಷತ್‍ನಲ್ಲಿ ಸ್ಥಾನ ಸಿಕ್ಕಿರುವುದು ತುಂಬಾ ಕಡಿಮೆ. ಹಾಗಾಗಿ ಈ ಬಾರಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿಗೆ ನಮ್ಮ ಬೆಂಬಲವಿದೆ. ದಲಿತ ಸಾಹಿತ್ಯ ಕನ್ನಡ ಸಾಹಿತ್ಯದಲ್ಲಿ ಪಲ್ಲವಿಸಿದೆ. ಸಾಮಾಜಿಕ ನ್ಯಾಯದ ದೃಷ್ಟಿಯಿಂದ ಇವರನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡುವುದು ಸೂಕ್ತ. ಕನ್ನಡ ಸಾಹಿತ್ಯ ಪರಿಷತ್ ರಾಜಕೀಯದಿಂದ ಹೊರತಾಗಿ ಜಾತ್ಯಾತೀತವಾಗಿರಬೇಕಾದರೆ ಕೊರ್ಲಕುಂಟೆ ತಿಪ್ಪೇಸ್ವಾಮಿಯಂತವರನ್ನು ಮತದಾರರು ಗೆಲ್ಲಿಸಬೇಕೆಂದು ವಿನಂತಿಸಿದರು.

ಕೇಂದ್ರಿಯ ವಿಶ್ವವಿದ್ಯಾಲಯ ಕಲಬುರ್ಗಿಯ ಡಾ.ಅಪ್ಪಿಗೆರೆ ಸೋಮಶೇಖರ್ ಮಾತನಾಡಿ ಕನ್ನಡ ಸಾಹಿತ್ಯ, ಭಾಷೆಗೆ ಇದುವರೆವಿಗೂ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ಬರುತ್ತಿರುವ ಕೊರ್ಲಕುಂಟೆ ತಿಪ್ಪೇಸ್ವಾಮಿಗೆ ಈ ಬಾರಿಯ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಯಲ್ಲಿ ಅವಕಾಶ ಕೊಡಿ. ಕವಿ ಡಾ.ಸಿದ್ದಲಿಂಗಯ್ಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಲು ನೂರು ವರ್ಷಗಳು ಬೇಕಾಯಿತು. ಎಲ್ಲಾ ಸಮುದಾಯಕ್ಕೂ ಪ್ರಾತಿನಿಧ್ಯ ನೀಡಬೇಕೆಂಬ ಉದ್ದೇಶದಿಂದ ಮೈಸೂರು ಮಹಾರಾಜರು ಕನ್ನಡ ಸಾಹಿತ್ಯ ಪರಿಷತ್‍ನ್ನು ಹುಟ್ಟುಹಾಕಿದರು. ಪ್ರಜಾಸತ್ತಾತ್ಮಕ ಸಂಸ್ಥೆಯಾಗಿ ರೂಪಿಸಬೇಕಿದೆ ಎಂದು ಹೇಳಿದರು.

ಯಾದಲಗಟ್ಟೆ ಜಗನ್ನಾಥ್, ಯಡೆಕುಂಟೆ ಮಂಜುನಾಥ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇದೆಲ್ಲಾ ಮಾಡಿಸಿದ್ದು ಡಿಕೆಶಿ.. ನಾನು ಹೊರಗೆ ಬಂದ ದಿನ ಸರ್ಕಾರ ಪತನವಾಗುತ್ತೆ : ವಕೀಲ ದೇವರಾಜೇಗೌಡ ಶಾಕಿಂಗ್ ಹೇಳಿಕೆ..!

ಹಾಸನ: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಿಜೆಪಿ ನಾಯಕ, ವಕೀಲ ದೇವರಾಜೇಗೌಡರನ್ನು ಪೊಲೀಸರು ಅರೆಸ್ಟ್ ಮಾಡಿ, ತನಿಖೆ ಚುರುಕುಗೊಳಿಸಿದ್ದಾರೆ. ಎಸ್ಐಟಿ ಅಧಿಕಾರಿಗಳು ಇಂದು ಕೋರ್ಟ್ ಮುಂದೆ ದೇವರಾಜೇಗೌಡರನ್ನು ಹಾಜರುಪಡಿಸಿದ್ದರು. ಹೆಚ್ಚಿನ

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆ ರಾಮಮಂದಿರವನ್ನು ಕೆಡವಲಿದೆ : ನರೇಂದ್ರ ಮೋದಿ

ಸುದ್ದಿಒನ್ : ದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಜೋರಾಗಿದೆ. ಚುನಾವಣೆ ಅಂತಿಮ ಘಟ್ಟ ಸಮೀಪಿಸುತ್ತಿದ್ದಂತೆ ಆಡಳಿತಾರೂಢ ಮತ್ತು ಪ್ರತಿಪಕ್ಷಗಳು ಪರಸ್ಪರ ಟೀಕೆಗಳ ಮೂಲಕ ಪ್ರಚಾರದ ಕಾವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ್ದ

ಮೋದಿ ಬಗ್ಗೆ ಹೊಗಳಿದ್ದ ನಟಿ : ಹಿಗ್ಗಾಮುಗ್ಗಾ ಟ್ರೋಲ್ ಆದ ರಶ್ಮಿಕಾ ಮಂದಣ್ಣ..!

ದೇಶದಲ್ಲಿ ಲೋಕಸಭಾ ಚುನಾವಣೆ ನಡೆಯುತ್ತಿದೆ. ಹ್ಯಾಟ್ರಿಕ್ ಬಾರಿಸುವ ಕನಸು ಕಾಣುತ್ತಿದ್ದಾರೆ ಮೋದಿ. ಈ ಮಧ್ಯೆ ರಶ್ಮಿಕಾ ಮಂದಣ್ಣ ಮೋದಿಯವರ ಅಭಿವೃದ್ಧಿ ಬಗ್ಗೆ ಮಾತನಾಡಿದ್ದಾರೆ. ಈ ವಿಚಾರ ಚರ್ಚೆಗೆ ಬಂದಿದ್ದು, ಪರ-ವಿರೋಧ ಕೇಳಿ ಬರುತ್ತಿದೆ. ರಶ್ಮಿಕಾ

error: Content is protected !!