Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಇನ್ಮುಂದೆ ಉಪೇಂದ್ರ ಅವರನ್ನ ಬುದ್ದಿವಂತ ಅನ್ನಬಾರದಂತೆ..!

Facebook
Twitter
Telegram
WhatsApp

ಲೋಕಸಭಾ ಚುನಾವಣೆಯಲ್ಲಿ ಈ ಬಾರಿ ಪವನ್ ಕಲ್ಯಾಣ್ ಕೂಡ ಗೆಲುವು ಕಂಡಿದ್ದಾರೆ. ಸತತವಾಗಿ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿದ್ದರು, ಸೋಲನ್ನೇ ಕಂಡಿದ್ದ ಪವನ್ ಕಲ್ಯಾಣ್ ಮೊದಲ ಬಾರಿಗೆ ಜನರ ಮನಸ್ಸನ್ನು ಗೆದ್ದಿದ್ದಾರೆ. ಈ ಬೆನ್ನಲ್ಲೇ ಉಪೇಂದ್ರ ಕುರಿತಾಗಿ ಟ್ರೋಲ್ ಒಂದು ಹರಿದಾಡುತ್ತಿದೆ. ಅದುವೆ ಪವನ್ ಕಲ್ಯಾಣ್ ಗೆಲ್ಲಿಸುವುದಕ್ಕೆ 12 ವರ್ಷ ಬೇಕಾಯ್ತು, ಇನ್ನು ಉಪೇಂದ್ರ ಅವರನ್ನು ಗೆಲ್ಲಿಸುವುದುಕ್ಕೆ ಇನ್ನೆಷ್ಟು ವರ್ಷ ತೆಗೆದುಕೊಳ್ಳುತ್ತಾರೋ ಎಂಬ ಪೋಸ್ಟ್ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಇದೇ ಪೋಸ್ಟ್ ಅನ್ನು ನಟ ಉಪೇಂದ್ರ ಅವರು ರೀಪೋಸ್ಟ್ ಮಾಡಿ, ನನ್ನನ್ನು ಇನ್ಮುಂದೆ ಬುದ್ದಿವಂತ ಎಂದು ಕರೆಯಬೇಡಿ ಎಂದಿದ್ದಾರೆ.

ಟ್ವೀಟ್ ಮಾಡಿರುವ ಉಪೇಂದ್ರ ಅವರು, ‘ವಾಹ್ ಮೈ ಡಿಯರ್ ಪ್ರಜಾಪ್ರಭುಗಳೇ ವಾಹ್… ಉಪೇಂದ್ರ ಸೋಲು ಗೆಲವು ಬಗ್ಗೆ ತುಂಬಾ ಚಿಂತೆ ಮಾಡ್ತಿದೀರ ! ಎಂತಾ ನಿಸ್ವಾರ್ಥ ! ಎಂತಾ ತ್ಯಾಗ ಮನೋಭಾವ ! ನಿಮ್ಮೆಲ್ಲರ ಪಾದಕ್ಕೆ ಅಡ್ ಬಿದ್ದೆ. ಡೋಂಟ್ ವರೀ… ನಾನ್ ಗೆಲ್ಬೇಕು ಅಂತ ಅನ್ನಿಸಿದಾಗ ಯಾವುದಾದರೂ ರಾಜಕೀಯ ಪಕ್ಷ ಸೇರಿ ನೀವ್ ಹೇಳ್ದಾಗೆಲ್ಲಾ ಮಾಡ್ತೀನಿ..ಗೆದ್ದೇ ಗೆಲ್ತೀನಿ..

ನೀವ್ ಗೆಲ್ಲೋದ್ ಯಾವಾಗ ಅಂತ ನೀವ್ ಯೋಚನೆ ಮಾಡ್ರಪ್ಪೋ. ನೆಕ್ಸ್ಟ್ ಎಲೆಕ್ಷನ್ ನಲ್ಲಿ ನನಗ್ ಕೆಲ್ಸಾ ಕೊಡ್ತೀರ ಅಂದ್ರೆ ನಿಲ್ತೀನಿ ಆಗ್ಲೂ ನೀವ್ ಎಮೋಸನಲ್ ಪ್ರಚಾರ ಮಾಡ್ರೀ, ಸಭೆ ಸಮಾರಂಭ ಎಲ್ಲಾ ಮಾಡ್ರೀ, ಕಷ್ಟ ಪಡ್ರೀ, ಆಮೇಲ್ ಐದು ವರ್ಸ ನೀವೇನ್ ಬೇಕಾದ್ರೂ ಮಾಡ್ಕಳಿ ನಾವ್ ಕೇಳಕ್ ಬರಲ್ಲ ಅಂದ್ರೆ, ಉಫ್.. ಏನ್ ಬರೀಬೇಕೋ ಗೊತ್ತಾಗ್ತಿಲಿರಪ್ಪೋ ಈ ದಡ್ ನನ್ ಮಗಂಗೇ ಯಾವೋನಾದ್ರ ಇನ್ ಮೇಲೆ ಬುದ್ದಿವಂತಾ ಅಂದ್ರೇ ಅಷ್ಟೇ… ಸೆಂದಾಗಿರಕ್ಕಿಲ್ಲಾ..! ಎಂದು ಟ್ವೀಟ್ ಮಾಡಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

ಐತಿಹಾಸಿಕ ಕೋಟೆಗೆ ಧ್ವನಿ ಬೆಳಕಿನ ವೈಭವ ಪ್ರವಾಸಿ ತಾಣಗಳಲ್ಲಿ ಮೂಲಭೂತ ಸೌಕರ್ಯಕ್ಕೆ ಆದ್ಯತೆ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

ಚಿತ್ರದುರ್ಗ.  ಜುಲೈ.4:  ಕೆ.ಎಂ.ಇ.ಆರ್.ಸಿ (ಕರ್ನಾಟಕ ಗಣಿ ಪರಿಸರ ಪುನಶ್ಚೇತನ ನಿಗಮ)ಯ ಸಿ.ಇ.ಪಿ.ಎಂ.ಐ.ಝಡ್ (ಗಣಿಬಾಧಿತ ವಲಯದ ಸಮಗ್ರ ಪರಿಸರ ಅಭಿವೃದ್ಧಿ ಯೋಜನೆ) ಯೋಜನೆಯಡಿ ನಗರದ ಐತಿಹಾಸಿಕ ಕೋಟೆ ಹಾಗೂ ಚಂದ್ರವಳ್ಳಿ ಪ್ರದೇಶದಲ್ಲಿ ಒಟ್ಟು ರೂ.28.40 ಕೋಟಿ

error: Content is protected !!