Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒಂದೂವರೆ ಕೋಟಿ ವಂಚನೆಗೆ ಬಿಗ್ ಟ್ವಿಸ್ಟ್ : ಶಿಲ್ಪಾ ಶೆಟ್ಟಿ ಹೇಳಿದ್ದೇನು..?

Facebook
Twitter
Telegram
WhatsApp

ಶಿಲ್ಪಾ ಶೆಟ್ಟಿ ಹೇಳಿ ಕೇಳಿ ಫಿಟ್ನೆಸ್ ಗುರು. ಹೀಗಾಗಿ ಬೇರೆ ಬೇರೆ ನಗರದಲ್ಲಿ ಫಿಟ್​​ನೆಸ್​ ಕೇಂದ್ರ ಆರಂಭಿಸಲು ಆಸಕ್ತಿ ತೋರಿಸಿದ್ದರು ಎನ್ನಲಾಗಿತ್ತು. ಅದಕ್ಕಾಗಿ ಕೆಲವು ಉದ್ಯಮಿಗಳಿಂದ 1.5 ಕೋಟಿ ರೂ. ಹಣ ಪಡೆದು, ಫಿಟ್ನೆಸ್​ ಕೇಂದ್ರವನ್ನೂ ಆರಂಭಿಸಿಲ್ಲ, ಹಣವನ್ನೂ ವಾಪಸ್​ ನೀಡಿಲ್ಲ ಎಂಬ ಆರೋಪ ಇತ್ತು. ಈ ಸಂಬಂಧ ಶಿಲ್ಪಾ ಶೆಟ್ಟಿ ಮತ್ತು ರಾಜ್​ ಕುಂದ್ರಾ ವಿರುದ್ಧ ಕೇಸ್​ ದಾಖಲಿಸಿದ್ದಾರೆ. ಆದರೆ ಇದರ ಅಸಲಿಯತ್ತನ್ನು ನಟಿ ತೆರೆದಿಟ್ಟಿದ್ದಾರೆ.

ಒಂದೂವರೆ ಕೋಟಿ ವಂಚನೆಯ ಪ್ರಕರಣ ಮತ್ತೆ ಶಿಲ್ಪಾ ಶೆಟ್ಟಿ ತಲೆ ಕೆಡಿಸಿತ್ತು. ಇದೀಗ ಆ ಕೇಸ್ ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಶಿಲ್ಪಾ ಶೆಟ್ಟಿ ಅವರದ್ದು ಎನ್ನಲಾದ SFL ಫಿಟ್​ನೆಸ್​ ಕೇಂದ್ರಕ್ಕೂ ಶಿಲ್ಪಾಗೂ ಸಂಬಂಧವೇ ಇಲ್ಲವಂತೆ. ‘SFL ಫಿಟ್ನೆಸ್ ಇದು ಕಾಶಿಫ್ ಖಾನ್ ನಡೆಸುತ್ತಿರುವ ಉದ್ಯಮ. ಅವರು ದೇಶಾದ್ಯಂತ SFL ಫಿಟ್‌ನೆಸ್ ಜಿಮ್‌ಗಳನ್ನು ತೆರೆಯಲು SFL ಬ್ರಾಂಡ್‌ನ ಹಕ್ಕುಗಳನ್ನು ತೆಗೆದುಕೊಂಡಿದ್ದರು. ಎಲ್ಲಾ ವ್ಯವಹಾರಗಳು ಅವರಿಂದ ನಡೆಯುತ್ತಿವೆ. ಅವರ ಯಾವುದೇ ವಹಿವಾಟಿನ ಬಗ್ಗೆ ನಮಗೆ ತಿಳಿದಿಲ್ಲ ಎಂದಿದ್ದಾರೆ.

ಇನ್ನು ಎಲ್ಲಾ ಫ್ರಾಂಚೈಸಿಗಳ ವ್ಯವಹಾರವನ್ನು ಕಾಶಿಫ್ ನೋಡಿಕೊಳ್ಳುತ್ತಿದ್ದಾರೆ. ಕಂಪನಿಯು 2014 ರಲ್ಲಿ ಮುಚ್ಚಿದೆ. ಈಗ ಅದರ ಸಂಪೂರ್ಣ ಜವಾಬ್ದಾರಿ ಕಾಶಿಫ್ ಖಾನ್ ನಿರ್ವಹಿಸುತ್ತಿದ್ದಾರೆ. ಕಳೆದ 28 ವರ್ಷಗಳಿಂದ ನಾನು ತುಂಬಾ ಕಷ್ಟಪಟ್ಟು ಕೆಲಸ ಮಾಡಿದ್ದೇನೆ. ಈಗ ನನ್ನ ಹೆಸರು ಮತ್ತು ಖ್ಯಾತಿಗೆ ಹಾನಿಯಾಗುತ್ತಿದೆ ಎಂದು ಆರೋಪಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಅವಕಾಶ ಸಿಗದೆ ಅಲ್ಲು ಅರ್ಜುನ್ ಕೂಡ ನೊಂದಿದ್ದರು.. ಇಂದು ಪ್ಯಾನ್ ಇಂಡಿಯಾ ನಟ..!

ಇಂದು ಸ್ಟಾರ್ ನಟರಾಗಿರುವ, ಪ್ಯಾನ್ ಇಂಡಿಯಾ ಮಟ್ಟದಲ್ಲಿ ಗುರುತಿಸಿಕೊಳ್ಳುವ ನಟ-ನಟಿಯರ ಹಿಂದೆಯೂ ಸಾಕಷ್ಟು ಪರಿಶ್ರಮ ಅಡಗಿದೆ. ಆರಂಭದಲ್ಲಿ ಅವಕಾಶಕ್ಕಾಗಿ ಪರಿತಪಿಸಿದ್ದಾರೆ. ಅವಕಾಶ ಸಿಗದೆ ಅವಮಾನ ಎದುರಿಸಿದ್ದಾರೆ. ಅದರಲ್ಲಿ ಇಂದು ತೆಲುಗು ಇಂಡಸ್ಟ್ರಿಯ ಟಾಪ್ ಒನ್

ರಾಜ್ಯದ ಗಮನ ಸೆಳೆಯಲು ನನ್ನ ಮೇಲೆ ಗೂಬೆ ಕೂರಿಸುತ್ತಿದ್ದಾರೆ : ಕುಮಾರಸ್ವಾಮಿಗೆ ಡಿಕೆಶಿ ಟಾಂಗ್

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ನಿನ್ನೆಯಿಂದ ಡಿಸಿಎಂ ಡಿಕೆ ಶಿವಕುಮಾರ್ ಅವರ ಹೆಸರು ಓಡಾಡುತ್ತಿದೆ. ಅವರೇ ಪೆನ್ ಡ್ರೈವ್ ಹಂಚಿರುವುದು ಅಂತ ಜೆಡಿಎಸ್ ನಾಯಕರು ಆಕ್ರೋಶ ಹೊರ ಹಾಕಿದ್ದಾರೆ. ಕುಮಾರಸ್ವಾಮಿ ಅವರಿಗೆ

ವಿಶ್ವ ರೆಡ್‍ಕ್ರಾಸ್ ದಿನಾಚರಣೆ | ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಚಿತ್ರದುರ್ಗ ಮೇ. 08 :  ವಿಶ್ವ ರೆಡ್‍ಕ್ರಾಸ್ ದಿನಾಚರಣೆಯ ಅಂಗವಾಗಿ ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ಚಿತ್ರದುರ್ಗ ಶಾಖೆ ಹಾಗೂ ಎಸ್.ಜಿ.ಸುರಕ್ಷಾ ನರ್ಸಿಂಗ್ ಮತ್ತು ಪ್ಯಾರಾಮೆಡಿಕಲ್ ಕಾಲೇಜು ಸಂಯುಕ್ತಾಶ್ರಯದಲ್ಲಿ ಮೇ. 8 ರ ಇಂದು ಕಾಲೇಜಿನಲ್ಲಿ

error: Content is protected !!