Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕ್ಯೂಟ್ ಕಪಲ್ ಆಗಿದ್ದ ಚಂದನ್ ಶೆಟ್ಟಿ-ನಿವೇದಿತಾ ಗೌಡ ಡಿವೋರ್ಸ್ : ಶಾಕಿಂಗ್ ನ್ಯೂಸ್

Facebook
Twitter
Telegram
WhatsApp

ಕನ್ನಡ ಇಂಡಸ್ಟ್ರಿಯಲ್ಲಿ ಶಾಕಿಂಗ್ ನ್ಯೂಸ್ ಒಂದು ಬಂದಿದೆ. ಕ್ಯೂಟ್ ಕಪಲ್ ರೀತಿ ಕಾಣಿಸಿಕೊಂಡಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಡಿವೋರ್ಸ್ ಪಡೆದಿದ್ದಾರೆ ಎಂಬ ಸುದ್ದಿ ವೈರಲ್ ಆಗುತ್ತಿದೆ. ಇಬ್ಬರು ಸಮ್ಮತಿ ಮೇರೆಗೆ ಡಿವೋರ್ಸ್ ಪಡೆದಿದ್ದಾರೆ ಎನ್ನಲಾಗುತ್ತಿದೆ.

ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಇಬ್ಬರು ಬಿಗ್ ಬಾಸ್ ನಲ್ಲಿದ್ದಾಗ ಲವ್ ಮಾಡಿ, ಮದುವೆಯೂ ಆಗಿದ್ದರು. ನಾಲ್ಕು ವರ್ಷ ದಾಂಪತ್ಯ ಜೀವನವನ್ನು ನಡೆಸಿದ್ದರು. ನಿವೇದಿತಾ ಗೌಡ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿದ್ದರು. 2019ರ ಯುವ ದಸರಾದಲ್ಲಿ ತುಂಬಿದ ವೇದಿಕೆ ಮೇಲೆ ಪ್ರಪೋಸ್ ಮಾಡಿದ್ದು, ಸಾಕಷ್ಟು ಸುದ್ದಿಯಾಗಿತ್ತು. ಇಬ್ಬರ ನಡುವೆ ಸಾಕಷ್ಟು ಅನ್ಯೋನ್ಯತೆ ಇತ್ತು. ಆದರೆ ದಿಢೀರನೇ ಡಿವೋರ್ಸ್ ಆಗಿರುವುದು ಅದೆಷ್ಟೋ ಜನಕ್ಕೆ ನಂಬಲು ಅಸಾಧ್ಯವಾದಂತೆ ಆಗಿದೆ.

ಇಬ್ಬರ ಡಿವೋರ್ಸ್ ಗೆ ಫ್ಯಾಮಿಲಿ ಕೋರ್ಟ್ ಅನುಮತಿ ನೀಡಿದೆ. ಪರಸ್ಪರ ಒಪ್ಪಂದದ ಮೇರೆಗೆ ಡಿವೋರ್ಸ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದು, ಮೂರು ಅಂಶಗಳನ್ನು ಉಲ್ಲೇಖಿಸಿದ್ದಾರೆ.
*ನಮ್ಮ ಕರಿಯರ್ ಮೇಲೆ ಗಮನ ಹರಿಸಲು ಬಯಸಿದ್ದೇವೆ
* ನಿವೇದಿತಾ ವಿದೇಶದಲ್ಲಿ ವಿದ್ಯಾಭ್ಯಾಸಕ್ಕೆ ಹೊರಟಿದ್ದಾರೆ
* ಕೆಲ ಭಿನ್ನಾಭಿಪ್ರಾಯಗಳ ಬಗ್ಗೆಯೂ ಉಲ್ಲೇಖಿಸಲಾಗಿದೆ

ವಿಚಾರಣೆ ವೇಳೆ ನ್ಯಾಯಾಧೀಶರು ಇಬ್ಬರನ್ನು ಕರೆದು ಕೇಳಿದ್ದಾರೆ. ಪರಸ್ಪರ ಒಪ್ಪಿಗೆಯನ್ನು ಸೂಚಿಸಿದ್ದಾರೆ. ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಅವರ ಮಿಡಿಯೇಷನ್‌ನಲ್ಲಿ ಡಿವೋರ್ಸ್ ಬಗ್ಗೆ ಒಪ್ಪಂದವಾಗಿದೆ. ಅದರ ಅಗ್ರಿಮೆಂಟ್ ಅನ್ನು ನ್ಯಾಯಾಧೀಶರ ಮುಂದೆ ಸಲ್ಲಿಕೆ ಮಾಡಲಾಗಿದ್ದು, ಅವರ ಮನವಿಯನ್ನು ನ್ಯಾಯಾಲಯ ಪುರಸ್ಕರಿಸಿದೆ. ಡಿವೋರ್ಸ್ ಕಾಪಿ ಬಂದ ಬಳಿಕ ಅಧಿಕೃತವಾಗಿ ಡಿವೋರ್ಸ್ ಆಗಲಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ಐದು ರಾಶಿಯವರು ಹೊಸ ಉದ್ಯೋಗದ ಸಂದರ್ಶನದ ಕಾಲ್(ಕರೆ ) ಬರಲಿದೆ,

ಈ ರಾಶಿಯವರ ರೋಮ್ಯಾಂಟಿಕ್ ಜೀವನ ಉತ್ತಮ, ಈ ಐದು ರಾಶಿಯವರು ಹೊಸ ಉದ್ಯೋಗದ ಸಂದರ್ಶನದ ಕಾಲ್(ಕರೆ ) ಬರಲಿದೆ, ಸಿಂಹ ರಾಶಿ ಪ್ರೇಮಿಯ ಮನಸ್ಸು ಚಂಚಲ. ಸೋಮವಾರ ರಾಶಿ ಭವಿಷ್ಯ -ಜುಲೈ-8,2024 ಸೂರ್ಯೋದಯ: 05:51,

ಪತ್ರಕರ್ತರ ಬೇಡಿಕೆಗಳನ್ನು ಈಡೇರಿಸಲು ಕಾಂಗ್ರೆಸ್ ಪಕ್ಷದ ಸರ್ಕಾರ ಸಿದ್ಧ :ಶಾಸಕ ಟಿ ರಘುಮೂರ್ತಿ 

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಜುಲೈ. 07  ಮಾಧ್ಯಮಗಳು ಜಾತ್ಯತೀತ ಹಾಗೂ ಪಕ್ಷಾತೀತವಾಗಿ ವರದಿಗಳನ್ನು ಪತ್ರಿಕೆಗಳಲ್ಲಿ ಪ್ರಕಟಿಸಿದಾಗ ಮಾತ್ರ ಪತ್ರಿಕೋದ್ಯಮಕ್ಕೆ ನಿಜವಾದ ಅರ್ಥ

ಸಂಸ್ಕಾರವಿಲ್ಲದ ಶಿಕ್ಷಣದಿಂದ ಪ್ರಯೋಜನವಿಲ್ಲ : ಡಾ.ಪುರುಷೋತ್ತಮಾನಂದಪುರಿ ಸ್ವಾಮೀಜಿ

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್ ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಜುಲೈ.07  : ಪ್ರಜಾಪ್ರಭುತ್ವದಲ್ಲಿ ಸಂವಿಧಾನ ನೀಡಿರುವ ಸೌಲಭ್ಯವನ್ನು ಬಳಸಿಕೊಂಡು ಜೀವನದಲ್ಲಿ ಮುಂದೆ ಬರಬೇಕೆಂದು ಹೊಸದುರ್ಗ ಭಗೀರಥ ಪೀಠದ

error: Content is protected !!