Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾಧ್ಯಮ ಲೋಕದ ದಿಗ್ಗಜ ರಾಮೋಜಿ ರಾವ್ ಇನ್ನಿಲ್ಲ…!

Facebook
Twitter
Telegram
WhatsApp

ಸುದ್ದಿಒನ್ : ಈನಾಡು ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿದ್ದ ಚೆರುಕುರಿ ರಾಮೋಜಿ ರಾವ್ ಅವರು ಇಂದು ನಿಧನರಾಗಿದ್ದಾರೆ. ಹೃದಯ ಸಂಬಂಧಿ ಸಮಸ್ಯೆಯಿಂದಾಗಿ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ. ಜೂನ್ 5 ರಂದು ಉಸಿರಾಟಕ್ಕೆ ತೊಂದರೆಯಾದ ಕಾರಣ ಅವರ ಕುಟುಂಬದವರು ಆಸ್ಪತ್ರೆಗೆ ಕರೆದೊಯ್ದಿದ್ದರು. ರಾಮೋಜಿ ರಾವ್ ಅವರನ್ನು ಪರೀಕ್ಷಿಸಿದ ವೈದ್ಯರು ಅವರಿಗೆ ಹೃದಯ ಸಂಬಂಧಿ ಸಮಸ್ಯೆ ಇರುವುದು ಪತ್ತೆ ಹಚ್ಚಿ ಸ್ಟೆಂಟ್ ಅಳವಡಿಸಿದ್ದರು. ಎರಡು ದಿನಗಳಿಂದ ಐಸಿಯುನಲ್ಲಿದ್ದ ಅವರ ಆರೋಗ್ಯ ಶುಕ್ರವಾರ ರಾತ್ರಿ ಹದಗೆಟ್ಟಿತ್ತು. ಶನಿವಾರ ಬೆಳಗಿನ ಜಾವ 4.50ಕ್ಕೆ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ರಾಮೋಜಿ ರಾವ್ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅವರಿಗೆ ಈಗ 88 ವರ್ಷ ವಯಸ್ಸಾಗಿತ್ತು.

ರಾಮೋಜಿ ರಾವ್ ಅವರು ನವೆಂಬರ್ 18, 1936 ರಂದು ಕೃಷ್ಣ ಜಿಲ್ಲೆಯ ಪೆದಪರುಪುಡಿಯಲ್ಲಿ ಸರಳ ಕೃಷಿಕ ಕುಟುಂಬದಲ್ಲಿ ಜನಿಸಿದರು. ತಾಯಿ ವೆಂಕಟಸುಬ್ಬಮ್ಮ, ತಂದೆ ವೆಂಕಟ ಸುಬ್ಬರಾವ್. ರಾಮೋಜಿ ರಾವ್ ಅವರ ಪೂರ್ವಜರು ಪಾಮೇರು ಮಂಡಲದ ಪೆರಿಶೇಪಲ್ಲಿ ಗ್ರಾಮಕ್ಕೆ ಸೇರಿದವರು. ಅವರ ಅಜ್ಜ ರಾಮಯ್ಯ ಕುಟುಂಬ ಸಮೇತ ಪೆರಿಶೇಪಲ್ಲಿಯಿಂದ ಪೆದಪರುಪುಡಿಗೆ ವಲಸೆ ಬಂದರು. ಅಜ್ಜನ ಮರಣದ 13 ದಿನಗಳ ನಂತರ ರಾಮೋಜಿ ರಾವ್ ಜನಿಸಿದರು. ಅವರ ನೆನಪಿಗಾಗಿ ಅವರ ಪೋಷಕರು ರಾಮಯ್ಯ ಎಂದು ಹೆಸರಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

Rahul Gandhi : ಸಾವರ್ಕರ್ ಕುರಿತ ವಿವಾದಾತ್ಮಕ ಹೇಳಿಕೆ : ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್

ಸುದ್ದಿಒನ್ : ಮಹಾರಾಷ್ಟ್ರದ ಪುಣೆಯ ವಿಶೇಷ ನ್ಯಾಯಾಲಯವು ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಸಮನ್ಸ್ ಜಾರಿ ಮಾಡಿದೆ. ಕಳೆದ ವರ್ಷ ಲಂಡನ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ರಾಹುಲ್ ಗಾಂಧಿ, ಸಾವರ್ಕರ್ ವಿರುದ್ಧ

ಸರ್ಕಾರಿ ಭೂಮಿಯನ್ನು ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..!

ಬೆಂಗಳೂರು: ಸಾಕಷ್ಟು ಕಡೆ ಸರ್ಕಾರಿ ಭೂಮಿಯಲ್ಲೇ ಜನ ಉಳುಮೆ ಜಮೀನು ಮಾಡಿಕೊಂಡಿದ್ದಾರೆ. ಇದೀಗ ಸರ್ಕಾರಿ ಜಮೀನಿನಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಕರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಸಚಿವ ಕೃಷ್ಣ

ಚಿತ್ರದುರ್ಗ ಡಿಸಿಸಿ ಬ್ಯಾಂಕ್ ನಿಂದ 17 ಲಕ್ಷ ಶಿಕ್ಷಣ ನಿಧಿಗೆ ದೇಣಿಗೆ

ಸುದ್ದಿಒನ್, ಚಿತ್ರದುರ್ಗ, ಅಕ್ಟೋಬರ್. 05 : ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ., ಚಿತ್ರದುರ್ಗ ಇದರ ದಿನಾಂಕ:05-10-2024 ರಂದು ನಡೆದ ಆಡಳಿತ ಮಂಡಳಿ ಸಭೆಯಲ್ಲಿ ಬ್ಯಾಂಕಿನ ಅಧ್ಯಕ್ಷರಾದ ಸನ್ಮಾನ್ಯ ಡಿ. ಸುಧಾಕರ್, ಮಾನ್ಯ

error: Content is protected !!