Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಕರ್ನಾಟಕದ ಐವರಿಗೆ ಸಚಿವ ಸ್ಥಾನ : ಮೋದಿ ಸಂಪುಟದಲ್ಲಿ ಇರುವವರು ಇವರೇ

Facebook
Twitter
Telegram
WhatsApp

 

 

ಬೆಂಗಳೂರು: ನರೇಂದ್ರ ಮೋದಿ ಅವರು ಇಂದು ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.‌ ಮೋದಿ ಸಂಪುಟದಲ್ಲಿ ಯಾರೆಲ್ಲಾ ಇರುತ್ತಾರೆ. ಕರ್ನಾಟಕದಿಂದ ಎಷ್ಟು ಜನ ಇರುತ್ತಾರೆ ಎಂಬ ವಿಚಾರ ಎಲ್ಲರಿಗೂ ಸಾಮಾನ್ಯವಾಗಿಯೇ ಕುತೂಹಲ ಮೂಡಿಸಿದೆ. ಒಂದು ಮೂಲದ ಮಾಹಿತಿ ಪ್ರಕಾರ ಐವರಿಗೆ ಕೇಂದ್ರದಲ್ಲಿ ಸ್ಥಾನ ಸಿಗಬಹುದು ಎನ್ನಲಾಗಿದೆ.

ಈಗಾಗಲೇ ಸಂಭಾವ್ಯ ಪಟ್ಟಿ ಬಿಡುಗಡೆಯಾಗಿದ್ದು, ಕುತೂಹಲ ಕೆರಳಿಸಿದೆ. ಕೇಂದ್ರ ಸಚಿವ ಸ್ಥಾನ ಪಡೆಯುವ ಮೂವರಿಗೆ ಇಂದು ಮೋದಿ ಆಹ್ವಾನ ನೀಡಿದ್ದರು. ಪ್ರಹ್ಲಾದ್ ಜೋಶಿ, ಸೋಮಣ್ಣ, ಕುಮಾರಸ್ವಾಮಿ ಅವರನ್ನು ಆಹ್ವಾನ ಮಾಡಲಾಗಿತ್ತು.

ಇಂದು ಮೋದಿ ಮನೆಯಲ್ಲಿಯೇ ಚಹಾಕೂಟದಲ್ಲಿ ಸಾಕಷ್ಟು ಜನ ಸೇರಿದ್ದರು. ಈ ಚಹಾಕೂಟಕ್ಕೆ ವಿ.ಸೋಮಣ್ಣ ಅವರಿಗೂ ಆಹ್ವಾನವಿದ್ದದ್ದು ಮಾತ್ರ ಆಶ್ಚರ್ಯಕ್ಕೆ ಕಾರಣವಾಗಿತ್ತು. ತುಮಕೂರು ಲೋಕಸಭಾ ಕ್ಷೇತ್ರದಿಂದ ಗೆದ್ದಿರುವ ವಿ. ಸೋಮಣ್ಣ ಕೇಂದ್ರ ಸಚಿವರಾಗುವ ಎಲ್ಲಾ ಮುನ್ಸೂಚನೆ ಸಿಕ್ಕಿದೆ.

ಇನ್ನು ಇದೇ ವೇಳೆ ನಿರ್ಮಲಾ ಸೀತರಾಮನ್ ಕೂಡ ಸಭೆಯಲ್ಲಿ ಇದ್ದರು. ಮೋದಿ ಸರ್ಕಾರದಲ್ಲಿಯೇ ನಿರ್ಮಲಾ ಸೀತಾರಾಮನ್ ಹಣಕಾಸು ಸಚಿವೆಯಾಗಿದ್ದರು. ಇದೀಗ ಸಭೆಯಲ್ಲಿ ಭಾಗಿಯಾಗಿರುವುದನ್ನು ನೋಡಿದರೆ ಮತ್ತೆ ಕೇಂದ್ರ ಸಚಿವೆಯಾಗುವ ಸಾಧ್ಯತೆ ಇದೆ. ಮತ್ತೊಮ್ಮೆ ಮೋದಿ ಸಂಪುಟದಲ್ಲಿ ಖಾತೆ ಪಡೆಯಲಿದ್ದಾರೆ. ನಿರ್ಮಲಾ ಸೀತರಾಮನ್ ಸದ್ಯ ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಹಲವು ನಟಿಯರ ವಿರುದ್ಧ ರೇಣುಕಾಸ್ವಾಮಿ ತಂದೆ ಆಕ್ರೋಶ : ಯಾಕೆ ಗೊತ್ತಾ..?

ಸುದ್ದಿಒನ್, ಚಿತ್ರದುರ್ಗ, ಜುಲೈ. 03 : ಪವಿತ್ರಾಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಗಳನ್ನು ಕಳುಹಿಸುತ್ತಿದ್ದ ಎಂದು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದು ಎಚ್ಚರಿಕೆ ಕೊಡಲು ಹೋಗಿ ಆ ಗಲಾಟೆ ಕೊಲೆಯಲ್ಲಿ ಅಂತ್ಯವಾಗಿದೆ. ಕೊಲೆ ಆರೋಪದಲ್ಲಿ ದರ್ಶನ್

ಕರ್ನಾಟಕದಲ್ಲಿ 25 ಐಪಿಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ಆದೇಶಿಸಿದ ಸರ್ಕಾರ..!

ಬೆಂಗಳೂರು: ರಾಜ್ಯ ಆಡಳಿತ ಸುಧಾರಣೆಗಾಗಿ, ಕಾನೂನು ಸುವ್ಯವಸ್ಥೆಯನ್ನು ಮತ್ತಷ್ಟು ಬಲಗೊಳಿಸುವ ಉದ್ದೇಶದಿಂದ ಪೊಲೀಸ್ ಇಲಾಖೆಯಲ್ಲಿ ರಾಜ್ಯ ಸರ್ಕಾರ ವರ್ಗಾವಣೆಯ ಸರ್ಜರಿ ಮಾಡಿದೆ. ರಾಜ್ಯದಲ್ಲಿ 25 ಐಪಿಎಸ್ ಆಫೀಸರ್ ಗಳ ವರ್ಗಾವಣೆಯನ್ನು ಮಾಡಲಾಗಿದೆ. ಪೊಲೀಸ್ ಇಲಾಖೆಯಲ್ಲಿ

ಡೆಂಗ್ಯೂನಿಂದ ಈಗಾಗಲೇ 6 ಸಾವು : ಇನ್ನೂ ಏರಲಿದೆ ಅಂದ್ರು ಆರೋಗ್ಯ ಸಚಿವರು..!

ಬೆಂಗಳೂರು: ರಾಜ್ಯದಲ್ಲಿ ಕಳೆದ ವರ್ಷಕ್ಕಿಂತ ಈ ವರ್ಷ ಡೆಂಗ್ಯೂ ಪ್ರಕರಣಗಳು ಜಾಸ್ತಿಯಾಗುತ್ತಿವೆ. ಅದರಲ್ಲೂ ಬೆಂಗಳೂರು ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿವೆ. ಅದರಲ್ಲೂ ಈಗಾಗಲೇ ಆರು ಜನ ಸಾವನ್ನಪ್ಪಿದ್ದಾರೆ. ಇದೀಗ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

error: Content is protected !!