Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಪ್ರಧಾನಿ ಮೋದಿ ಪ್ರಮಾಣ ವಚನಕ್ಕೆ ದೇವೇಗೌಡ್ರು ಯಾಕೆ ಹೋಗಿಲ್ಲ : ಪತ್ರದಲ್ಲಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ ಮಾಜಿ ಪ್ರಧಾನಿ

Facebook
Twitter
Telegram
WhatsApp

ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರು ಪ್ರಮಾಣ ವಚನ ಸ್ವೀಕಾರ ಮಾಡಿದ್ದಾರೆ. ನಿನ್ನೆ ಸಂಜೆ ರಾಷ್ಟ್ರಪತಿ ಭವನದಲ್ಲಿ ಪ್ತಮಾಣವಚನ ಕಾರ್ಯಕ್ರಮ ನಡೆದಿದೆ. ಮಿತ್ರ ಪಕ್ಷದವರು ಈ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ಹಾಜರಿದ್ದರು. ಈಶ್ವರನ ಹೆಸರಿನಲ್ಲಿ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಆದರೆ ಮಾಜಿ ಪ್ರಧಾನಿ ದೇವೇಗೌಡ ಅವರು ಕಾರ್ಯಕ್ರಮಕ್ಕೆ ಗೈರಾಗಿದ್ದರು. ಅದಕ್ಕೆ ಕಾರಣವೇನು ಎಂಬುದನ್ನು ಪತ್ರದ ಮೂಲಕ ತಿಳಿಸಿದ್ದಾರೆ.

‘ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರ್ಕಾರಕ್ಕೆ ನಮ್ಮ ಪಕ್ಷದಿಂದ ಸಂಪೂರ್ಣ ಬೆಂಬಲವಿದೆ. ಈ ಲೋಕಸಭಾ ಚುನಾವಣೆಯೂ ಕುತೂಹಲಕಾರಿ ಫಲಿತಾಂಶ ನೀಡಿದ್ದು, ದೇಶದ ಪ್ರಜಾಪ್ರಭುತ್ವದ ಕಂಪನ್ನು ಸಾಬೀತು ಪಡಿಸಿದೆ. ಪ್ರಜಾಸತ್ತಾತ್ಮಕ ಪ್ರಕ್ರಿಯೆಗಳನ್ನು ಅಪಖ್ಯಾತಿಗೊಳಿಸಲು ಕಾಂಗ್ರೆಸ್ ನ ಕೊಳಕು ಪ್ರಚಾರವನ್ನು ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶ ಬಹಿರಂಗಪಡಿಸಿದೆ. ಅವರ ದುರಹಂಕಾರಕ್ಕೆ ದೇಶದ ಜನ ತಕ್ಕ ಪಾಠ ಕಲಿಸಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಇಂದಿನ ಪ್ರಮಾಣವಚನ ಸ್ವೀಕಾರ ಸಮಾರಂಭದ ಭಾಗವಾಗಲು ನಾನು ಇಷ್ಟಪಡುತ್ತಿದ್ದೇನೆ. ಆದರೆ, ನನ್ನ ಆರೋಗ್ಯವು ದೆಹಲಿ ಪ್ರಯಾಣಿಸಲು ನನಗೆ ಅವಕಾಶ ನೀಡುತ್ತಿಲ್ಲ. ಆದರೂ, ನಿಮ್ಮ ಆತ್ಮೀಯ ಆಹ್ವಾನಕ್ಕಾಗಿ ತುಂಬಾ ಧನ್ಯವಾದಗಳು. ರಾಷ್ಟ್ರೀಯ ಪ್ರಜಾಸತ್ತಾತ್ಮಕ ಮೈತ್ರಿ ಸರಕಾರಕ್ಕೆ ನನ್ನ ಪಕ್ಷವಾದ ಜೆಡಿಎಸ್ ಸಂಪೂರ್ಣ ಬೆಂಬಲ ನೀಡಲಿದೆ. ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಘೋಷಣೆಯಂತೆ ನಿಮ್ಮ ಕಾರ್ಯಸೂಚಿಯನ್ನು ಜನತೆಗೆ ತಲುಪಿಸಲು ಸಹಾಯ ಮಾಡುತ್ತೇವೆ. ಸತತ ಮೂರನೇ ಅವಧಿಗೆ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಮೋದಿ ಅವರಿಗೆ ನನ್ನ ಹೃತ್ಪೂರ್ವಕ ಅಭಿನಂದನೆಗಳು ಎಂದು ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು

ಈ ರಾಶಿಯವರ ಜೊತೆ ಮದುವೆ ಆದರೆ ತುಂಬಾ ಭಾಗ್ಯಶಾಲಿ ನಿಮ್ಮನ್ನು ತೂಗುಯ್ಯಾಲೆಲಿ ತೂಗುವರು, ಶುಕ್ರವಾರ- ರಾಶಿ ಭವಿಷ್ಯ ಜುಲೈ-5,2024 ಸೂರ್ಯೋದಯ: 05:50, ಸೂರ್ಯಾಸ್ತ : 06:50 ಶಾಲಿವಾಹನ ಶಕೆ1946, ಶ್ರೀ ಕ್ರೋಧಿ ನಾಮ ಸಂವತ್ಸರ

ಬಾಹ್ಯಾಕಾಶಕ್ಕೆ ಪ್ರಧಾನಿ ಮೋದಿ ? ಗಗನ್ ಯಾನ್ ಮಿಷನ್ ಬಗ್ಗೆ ಇಸ್ರೋ ಅಧ್ಯಕ್ಷರು ಹೇಳಿದ್ದೇನು ?

ಸುದ್ದಿಒನ್ : ಮಾನವರನ್ನು ಬಾಹ್ಯಾಕಾಶಕ್ಕೆ ಕೊಂಡೊಯ್ಯುವ ‘ಗಗನ್ ಯಾನ್’ ಮಿಷನ್ ಲಭ್ಯವಾದ ನಂತರ ಪ್ರಧಾನಿ ನರೇಂದ್ರ ಮೋದಿ ಕೂಡ ಅಲ್ಲಿಗೆ ಹೋಗಬಹುದು ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಅಧ್ಯಕ್ಷ ಎಸ್.ಸೋಮನಾಥ್ ಹೇಳಿದರು. ನಮ್ಮ

5 ತಿಂಗಳ ಜೈಲುವಾಸದ ನಂತರ ಜಾರ್ಖಂಡ್ ಮುಖ್ಯಮಂತ್ರಿಯಾಗಿ ಹೇಮಂತ್ ಸೊರೆನ್ ಮೂರನೇ ಬಾರಿಗೆ ಪ್ರಮಾಣ ವಚನ

ಸುದ್ದಿಒನ್ : ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಹೇಮಂತ್ ಸೊರೆನ್ ಗುರುವಾರ ಸಂಜೆ ಮತ್ತೊಮ್ಮೆ ರಾಜ್ಯದ 13 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದಕ್ಕೂ ಮುನ್ನ ಚಂಪೈ ಸೊರೆನ್ ಬುಧವಾರ ಸಿಎಂ

error: Content is protected !!