Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದನ್-ನಿವೇದಿತಾ ನಡುವೆ ಸೃಜನ್ ಹೆಸರು : ಸುದ್ದಿಗೋಷ್ಠಿಯಲ್ಲಿ ನಿವೇದಿತಾ ಹೇಳಿದ್ದೇನು..?

Facebook
Twitter
Telegram
WhatsApp

ಬೆಂಗಳೂರು: ಸ್ಯಾಂಡಲ್ ವುಡ್ ಕ್ಯೂಟ್ ಕಪಲ್ ಚಂದನ್ ಹಾಗೂ ನಿವೇದಿತಾ ಗೌಡ ದಿಢೀರನೇ ಡಿವೋರ್ಸ್ ಪಡೆದಿದ್ದಾರೆ. ಡಿವೋರ್ಸ್ ಬಳಿಕ ಸಾಕಷ್ಟು ವಿಚಾರಗಳು ಚರ್ಚೆಗೆ ಬಂದಿವೆ. ನಿವೇದಿತಾ ಜೊತೆಗೆ ಸೃಜನ್ ಲೋಕೇಶ್ ಹೆಸರು ಕೂಡ ತಳುಕು ಹಾಕಿಕೊಂಡಿತ್ತು. ಈ ವರ್ಷ ಸೃಜನ್ ಲೋಕೇಶ್ ವಿಶೆಷ ವಿಡಿಯೋ ಮಾಡಿ ಬರ್ತ್ ಡೇಗೆ ವಿಶ್ ಮಾಡಿದ್ದರು. ಆ ವಿಡಿಯೋ ವೈರಲ್ ಮಾಡುವ ಮೂಲಕ ಅವರ ಹೆಸರನ್ನು ತಂದಿದ್ದರು. ಆ ಬಗ್ಗೆ ಇಂದು ಸುದ್ದಿಗೋಷ್ಟಿಯಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಸೃಜನ್ ಲೋಕೇಶ್ ಹೆಸರು ಹೇಳದೆ ಮಾತನಾಡಿದ ನಿವೇದಿತಾ, ಅವರು ನಮ್ಮ ಫ್ಯಾಮಿಲಿ ಫ್ರೆಂಡ್ಸ್. ಅವರ ಫ್ಯಾಮಿಲಿ ಜೊತೆಗೆ ಒಳ್ಳೆ ಬಾಂಡಿಂಗ್ ಇದೆ. ಪ್ರತಿ ವರ್ಷ ಅವರು ಕೂಡ ನನ್ನ ಬರ್ತ್ ಡೇಗೆ ವಿಶ್ ಮಾಡುತ್ತಾರೆ. ಆದರೆ ಈ ವರ್ಷವೇ ಯಾಕೆ ಈ ರೀತಿ ಆಗಿದ್ದು ಶಾಕ್ ಆಗಿದೆ. ಈ ವಿಚಾರ ವೈರಲ್ ಆಗುತ್ತಾ ಇದ್ದಂತೆ ಅವರಿಗೆ ಕಾಲ್ ಮಾಡಿ ಹೇಳಿದೆ, ದಯವಿಟ್ಟು ಬೇಜಾರು ಮಾಡಿಕೊಳ್ಳಬೇಡಿ. ಇದಕ್ಕೆ ನಾವೂ ಕ್ಲಾರಿಟಿ ಕೊಡುತ್ತೀವಿ ಅಂತ. ಆಗ ಗಂಡ-ಹೆಂಡತಿ ಇಬ್ಬರು ಧೈರ್ಯ ಹೇಳಿದರು. ಅದಕ್ಕೆಲ್ಲ ನೀನು ತಲೆ ಕೆಡಿಸಿಕೊಳ್ಳಬೇಡಮ್ಮ ಅಂದ್ರು ಎಂದಿದ್ದಾರೆ.

ಇದೇ ವೇಳೆ ಪ್ರಶಾಂತ್ ಸಂಬರ್ಗಿ ಬಗ್ಗೆಯೂ ಮಾತನಾಡಿ, ಆ ವ್ಯಕ್ತಿ ನಮ್ಮ ಬಗ್ಗೆ ಏನೇನೋ ಹೇಳಿದ್ದಾರೆ. ನಾನು ತೆಲುಗು ನಿರ್ದೇಶಕರ ಹಿಂದೆ ಹೋಗುವುದಕ್ಕೆ ಡಿವೋರ್ಸ್ ಪಡೆದಿದ್ದೇನೆ ಎಂದಿದ್ದಾರೆ. ನಮ್ಮ ಇಬ್ಬರ ಮದುವೆಯಿಂದಾಗಿ ನನ್ನ ಕೆರಿಯರ್ ಗೆ ಯಾವುದೇ ಸಮಸ್ಯೆ ಆಗಿಲ್ಲ. ಮಕ್ಕಳು ಬೇಡ ಅಂತಾಗಲಿ, ಇನ್ಯಾರದ್ದೋ ಜೊತೆಗೆ ಸಂಬಂಧ ಇದೆ ಎಂಬುದಾಗಲಿ ಅಲ್ಲ. ನಾವಿಬ್ಬರು ಮ್ಯೂಚುವಲ್ ಅಂಡರ್ ಸ್ಟಾಡಿಂಗ್ ನಿಂದಾಗಿ ಡಿವೋರ್ಸ್ ಪಡೆದಿದ್ದೇವೆ ಎಂದು ಕ್ಲಾರಿಟಿ ಕೊಟ್ಟಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ

ಈ ರಾಶಿಯ ವ್ಯಾಪಾರಸ್ಥರಿಗೆ ಕೃಷಿಕರಿಗೆ ಉತ್ತಮ ಕಾಲಾವಧಿ, ಆದರೆ ಈ ರಾಶಿಗಳಿಗೆ ಕುಜ ಕೇತು ಗೃಹಗಳಿಂದ ಒಂದು ರೀತಿಯ ಆತಂಕ. ಭಾನುವಾರ- ರಾಶಿ ಭವಿಷ್ಯ ಜುಲೈ-7,2024 ಸೂರ್ಯೋದಯ: 05:51, ಸೂರ್ಯಾಸ್ತ : 06:50 ಶಾಲಿವಾಹನ

INDIA Vs ZIMBABWE : 13 ರನ್‌ಗಳ ಅಂತರದಿಂದ ಜಿಂಬಾಬ್ವೆ ವಿರುದ್ಧ ಭಾರತಕ್ಕೆ ಸೋಲು

  ಸುದ್ದಿಒನ್ : ಟಿ20 ವಿಶ್ವಕಪ್ ಗೆದ್ದ ಭಾರತ ಆ ಬಳಿಕ ಮೊದಲ ಸರಣಿಯನ್ನು ಸೋಲಿನೊಂದಿಗೆ ಆರಂಭಿಸಿದೆ.  ಜಿಂಬಾಬ್ವೆ ವಿರುದ್ಧ 13 ರನ್‌ಗಳಿಂದ ಸೋತಿತು. ಜಿಂಬಾಬ್ವೆಯ ಹರಾರೆಯಲ್ಲಿ ನಡೆದ ಮೊದಲ ಪಂದ್ಯದಲ್ಲಿ ಮೊದಲು ಬ್ಯಾಟ್

ಹೆಚ್ಡಿಕೆ ಜನತಾ ದರ್ಶನಕ್ಕೆ 3 ಸಾವಿರ ಜನ ಬಂದಿದ್ರು..ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಯೋಜನೆಗಳನ್ನ ಕೊಡಿಸಲಿ ನೋಡೋಣಾ : ಚೆಲುವರಾಯಸ್ವಾಮಿ

ಬೆಂಗಳೂರು: ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ಜನತಾ ದರ್ಶನ ನಡೆಸಿದ್ದರು‌. ಜನತಾ ದರ್ಶನಕ್ಕೆ ಅಧಿಕಾರಿಗಳು ಗೈರಾಗಿದ್ದಕ್ಕೆ ಸರ್ಕಾರದ ಮೇಲೆ ಕಿಡಿಕಾರಿದ್ದರು. ಇದೀಗ ಜನತಾ ದರ್ಶನದ ಬಗ್ಗೆ ಸಚಿವ ಚೆಲುವರಾಯಸ್ವಾಮಿ ಅವರು ಆಕ್ರೋಶ

error: Content is protected !!