ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್ನಿಂದ 12ನೇ ತರಗತಿವರೆಗೆ)
ಸ್ಯಾಂಡಲ್ ವುಡ್ ದಿನೇ ದಿನೇ ಆಶ್ಚರ್ಯಕರ ವಿಚಾರಗಳು ಸದ್ದು ಮಾಡುತ್ತಿವೆ. ನಿನ್ನೆ ಮೊನ್ನೆಯೆಲ್ಲಾ ಡಿವೋರ್ಸ್ ಕೇಸ್ ಗಳು ಸದ್ದು ಮಾಡಿದ್ದವು. ಇದೀಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್ ಆಗಿ ಶಾಕ್ ನೀಡಿದೆ.
ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಇಂದು ಬೆಳಗ್ಗೆ ಅವರ ಫಾರ್ಮ್ ಹೌಸ್ ನಲ್ಲಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಪವಿತ್ರಾ ಗೌಡಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದ ಸ್ವಾಮೀಜಿ. ಕೆಟ್ಟದಾಗಿ ಮೆಸೇಜ್ ಮಾಡಿದ್ದಲ್ಲದೆ, ಅಶ್ಲೀಲ ವಿಡಿಯೋಗಳನ್ನು ಕಳುಹಿಸುತ್ತಿದ್ದರಂತೆ. ಕಾಮಾಕ್ಷಿಪಾಳ್ಯ ವ್ಯಾಪ್ತಿಯ ಶೆಡ್ ನಲ್ಲಿ ಸ್ವಾಮೀಜಿಯ ಕೊಲೆ ಮಾಡಲಾಗಿದೆ.
ಜೂನ್ 8ರಂದು ರೇಣುಕಾಸ್ವಾಮಿ ಅವರ ಮರ್ಡರ್ ನಡೆದಿತ್ತು. ಕೊಲೆ ಮಾಡಿದ ಬಳಿಕ ಆ ಮೃತದೇಹವನ್ನು ಮೋರಿಗೆ ಬಿಸಾಡಲಾಗಿದೆ. ಜೂನ್ 9ರಂದು ಕಾಮಾಕ್ಷಿಪಾಳ್ಯ ಮೋರಿಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರಿಗೆ ಸಿಕ್ಕಿದೆ. ಅಂದೇ ಮೂರು ಮಂದಿಯನ್ನು ಅರೆಸ್ಟ್ ಮಾಡಲಾಗಿತ್ತು. ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದರು. ರೇಣುಕಾಸ್ವಾಮಿ ಕಾಲ್ ರೆಕಾರ್ಡ್ ಸೇರಿದಂತೆ ಹಲವು ರೀತಿಯಲ್ಲಿ ತನಿಖೆ ನಡೆಸಿದ್ದರು. ಅರೆಸ್ಟ್ ಆಗಿದ್ದ ಮೂವರು ಒಂದೊಂದು ರೀತಿಯಲ್ಲಿ ಹೇಳಿಕೆ ನೀಡಿದ್ದರು. ಮೂವರು ನೀಡಿದ್ದ ಹೇಳಿಕೆಯಲ್ಲಿ ದರ್ಶನ್ ಹಾಗೂ ಪವಿತ್ರಾ ಗೌಡ ಹೆಸರು ಕೇಳಿ ಬಂದಿತ್ತು. ಮೈಸೂರಿನ ಫಾರ್ಮ್ ಹೌಸ್ ನಲ್ಲಿದ್ದ ದರ್ಶನ್ ಅವರನ್ನು ಕೊಲೆ ಆರೋಪದಲ್ಲಿ ಬಂಧಿಸಿದ್ದಾರೆ.


ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.
✉️ suddionenews@gmail.com🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.






ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್ಡೇಟ್. ನೀವು ಯಾವಾಗಲೂ ಅಪ್ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್