Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ರೇಣುಕಾಸ್ವಾಮಿ ಕೊಲೆ ಕೇಸ್ : ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮಾಜಿ ಶಾಸಕ ತಿಪ್ಪಾರೆಡ್ಡಿಗೆ ಬೆದರಿಕೆ..!

Facebook
Twitter
Telegram
WhatsApp

 

ಸುದ್ದಿಒನ್, ಚಿತ್ರದುರ್ಗ, ಜೂ.13  : ರೇಣುಕಾಸ್ವಾಮಿ ಕೊಲೆ ಪ್ರಕರಣವನ್ನು ಖಂಡಿಸಿ ನಿನ್ನೆ (ಬುಧವಾರ) ಚಿತ್ರದುರ್ಗದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಕೊಲೆ ಮಾಡಿದವರಿಗೆ ಕಠಿಣ ಶಿಕ್ಷೆಯಾಗಬೇಕೆಂದು ಒತ್ತಾಯಿಸಿದರು. ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ ಅವರು ಕೂಡ ಭಾಗಿಯಾಗಿದ್ದರು. ಈ ಸಂಬಂಧ ತಿಪ್ಪಾರೆಡ್ಡಿ ಅವರು ಪ್ರತಿಭಟನೆ ಮಾಡಿದ್ದಕ್ಕೆ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

ಚಿತ್ರದುರ್ಗದಲ್ಲಿ ಬುಧವಾರ ನಟ ದರ್ಶನ್ ವಿರುದ್ಧ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು ಈ ಪ್ರತಿಭಟನೆಯಲ್ಲಿ ಮಾಜಿ ಶಾಸಕ ತಿಪ್ಪಾರೆಡ್ಡಿ ಭಾಗಿಯಾಗಿ ನಟ ದರ್ಶನ್ ವಿರುದ್ಧ ಆಕ್ರೋಶ ಹೊರಹಾಕಿದ್ದರು. ಇದಕ್ಕೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯೊಬ್ಬರು ಮಾಜಿ ಶಾಸಕ ಜಿ.ಹೆಚ್. ತಿಪ್ಪಾರೆಡ್ಡಿ ಅವರಿಗೆ ಕರೆ ಮಾಡಿ ನೀವು ದರ್ಶನ್ ವಿರುದ್ಧ ಏಕೆ ಪ್ರತಿಭಟಿಸುತ್ತಿದ್ದೀರಿ ದರ್ಶನ್ ಕೊಲೆ ಮಾಡಿರುವುದಕ್ಕೆ ನಿಮಗೆ ಏನಾದರೂ ಸಾಕ್ಷಿಗಳು ಇದಾವೆ. ಹೇಗೆ ಎಂದು ಪ್ರಶ್ನಿಸಿದ್ದಾರೆಂತೆ. ಇದಕ್ಕೆ ಸಂಬಂಧಿಸಿದಂತೆ ಇನ್ನಷ್ಟು ಮಾಹಿತಿ ತಿಳಿದು ಬರಬೇಕಿದೆ. ಕೆರೆ ಮಾಡಿದ ವ್ಯಕ್ತಿ ಯಾರು, ಯಾಕೆ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಬೇಕಿದೆ.

ಚಿತ್ರದುರ್ಗದಿಂದ ರೇಣುಕಾ ಸ್ವಾಮಿ ಅವರನ್ನು ಕರೆದುಕೊಂಡು ಹೋಗಿ ಕೊಲೆ ಮಾಡಿರುವ ಆರೋಪಿಗಳಿಂದ ಸ್ಥಳ ಮಹಜರು ನಡೆಯಲಿದೆ. ನಾಲ್ವರು ಆರೋಪಿಗಳನ್ನ ಬೆಂಗಳೂರಿನಿಂದ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಚಿತ್ರದುರ್ಗಕ್ಕೆ ಕರೆದುಕೊಂಡು ಬಂದು ಸ್ಪಾಟ್ ವೆರಿಫಿಕೇಷನ್ ಮಾಡಿಸಲಿದ್ದಾರೆ. ಎ3 ಆರೋಪಿಯ ಸಲಹೆ ಮೇರೆಗೆ ಕಿಡ್ನಾಪ್ ಮಾಡಿದ್ದ ರಾಘವೇಂದ್ರ, ಕಾರ್ತಿಕ್ , ನಂದಿಶ್, ಪವನ್‌ನಿಂದ ಕಾಮಾಕ್ಷಿ ಪಾಳ್ಯ ಪೊಲೀಸರು ಕಿಡ್ನಾಪ್ ಸ್ಥಳದಲ್ಲಿ ಮಹಜರು ಮಾಡಿಸಲಿದ್ದಾರೆ. ಈಗಾಗಲೇ ಕೊಲೆ ಮಾಡಿದ ಶೆಡ್ ನಲ್ಲಿ ಪರಿಶೀಲನೆ ನಡೆಸಲಾಗಿದೆ. ಅಲ್ಲಿಯೂ ಹಲವು ಸಾಕ್ಷ್ಯಗಳು ಸಿಕ್ಕಿವೆ. ಅಲ್ಲಿನ ಸಿಸಿಟಿವಿಯನ್ನು ವಶಕ್ಕೆ ಪಡೆಯಲಾಗಿದೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಇಂದು ವಿಶ್ವ ಹೃದಯ ದಿನ : ಇಂದಿನ ಯುವಕರು ಏಕೆ ಹೃದಯಾಘಾತದಿಂದ ಬಳಲುತ್ತಿದ್ದಾರೆ ?

    ಸುದ್ದಿಒನ್ : ಜಾರ್ಖಂಡ್ ಅಬಕಾರಿ ಇಲಾಖೆಯು ಕಾನ್‌ಸ್ಟೆಬಲ್‌ಗಳ ನೇಮಕಾತಿಗಾಗಿ ಪರೀಕ್ಷೆ ನಡೆಯಿತು. ಈ ಸಂದರ್ಭದಲ್ಲಿ ಇದರಲ್ಲಿ ಭಾಗವಹಿಸಿದ್ದ ಹಲವು ಯುವಕರು ಓಟದ ಸ್ಪರ್ಧೆಯಲ್ಲಿ ಸಾವನ್ನಪ್ಪಿದ್ದಾರೆ. ಓಡುವಾಗ ಹೃದಯಾಘಾತವಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು

ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ

ಈ ರಾಶಿಯವರಿಗೆ ವಿರೋಧಿಗಳಿಂದ ಭಯ, ದ್ವೇಷ, ಅಸೂಯೆ, ಸೇಡಿನಂತ ನಕರಾತ್ಮಕ ಭಾವನೆಗಳು ಕಾಡಬಹುದು, ಈ ರಾಶಿಯವರು ತ್ವರಿತಗತಿಯಲ್ಲಿ ಹಣಗಳಿಸುವ ಬಗ್ಗೆ ಚಿಂತೆ, ಭಾನುವಾರ-ರಾಶಿ ಭವಿಷ್ಯ ಸೆಪ್ಟೆಂಬರ್-29,2024 ಸೂರ್ಯೋದಯ: 06:09, ಸೂರ್ಯಾಸ್ತ : 06:02 ಶಾಲಿವಾಹನ

ಚಿತ್ರದುರ್ಗ | ಚಲಪತಿ ನಿಧನ

  ಸುದ್ದಿಒನ್, ಚಿತ್ರದುರ್ಗ, ಸೆಪ್ಟೆಂಬರ್. 28 :ನಗರದ ತುರುವನೂರು ರಸ್ತೆ ನಿವಾಸಿ, ಶಿಕ್ಷಣ ಇಲಾಖೆ ನಿವೃತ್ತ ನೌಕರ ಚಲಪತಿ (66) ಅನಾರೋಗ್ಯದಿಂದ ಶನಿವಾರ ರಾತ್ರಿ ನಿಧನರಾದರು. ಮೃತರು ಪತ್ನಿ, ವಿಜಯಕರ್ನಾಟಕ ಚಿತ್ರದುರ್ಗ ಜಿಲ್ಲಾ ಪ್ರಸರಾಂಗ

error: Content is protected !!