ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಸುದ್ದಿಒನ್, ಚಿತ್ರದುರ್ಗ : ದಾವಣಗೆರೆ ಆಜಾದ್ ನಗರಕ್ಕೆ ಕೂಲಿ ಕೆಲಸಕ್ಕೆಂದು ಹೋಗಿ ಹೃದಯಾಘಾತದಿಂದ ಬುಧವಾರ ನಿಧನರಾದ ಗೋನೂರಿನ ಕಟ್ಟಡ ಕಾರ್ಮಿಕ ರಮೇಶ್ ಕುಟುಂಬಕ್ಕೆ ಮನೆ ಮಾಲೀಕರಿಂದ ಐವತ್ತು ಸಾವಿರ ರೂ.ಗಳ ಪರಿಹಾರದ ಚೆಕ್ ನೀಡಲಾಯಿತು.
ಕರ್ನಾಟಕ ರಾಜ್ಯ ಕಟ್ಟಡ ಹಾಗೂ ಇತರೆ ನಿರ್ಮಾಣ ಕಾರ್ಮಿಕರ ಕ್ಷೇಮಾಭಿವೃದ್ದಿ ಸಂಘದಿಂದ ಪರಿಹಾರದ ಚೆಕ್ಕನ್ನು ಕಾರ್ಮಿಕ ರಮೇಶ್ರವರ ಪತ್ನಿ ಲಕ್ಷ್ಮಮ್ಮನಿಗೆ ವಿತರಿಸಲಾಯಿತು.
ಸಂಘದ ರಾಜ್ಯಾಧ್ಯಕ್ಷ ಜೆ.ಮಂಜುನಾಥ್, ರಾಜ್ಯ ಉಪಾಧ್ಯಕ್ಷರುಗಳಾದ ಕೆ.ಗೌಸ್ಪೀರ್, ಎಂ.ಆರ್.ನರಸಿಂಹಸ್ವಾಮಿ, ರಾಜ್ಯ ಪ್ರಧಾನ ಕಾರ್ಯದರ್ಶಿ ವೈ.ಕುಮಾರ್, ಖಜಾಂಚಿ ಡಿ.ಈಶ್ವರಪ್ಪ, ಗೋನೂರು ಗ್ರಾಮ ಪಂಚಾಯಿತಿ ಸದಸ್ಯ ತಿಮ್ಮಯ್ಯ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಕುಮಾರ್, ಸಂಘದ ನಿರ್ದೇಶಕರುಗಳಾದ ರಾಜಪ್ಪ, ನಿಂಗರಾಜು ಈ ಸಂದರ್ಭದಲ್ಲಿದ್ದರು.












